ಒಲಿಂಪಿಕ್ ಗೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10 ಲಕ್ಷ ಪ್ರೋತ್ಸಾಹ ಧನ : ಡಾ. ನಾರಾಯಣಗೌಡ
Team Udayavani, Jun 26, 2021, 4:18 PM IST
ಬೆಂಗಳೂರು : ಟೋಕಿಯೋ ಒಲಿಂಪಿಕ್ ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ. 2020 ರ ಒಲಿಂಪಿಕ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5 ರ ವರೆಗೆ ನಡೆಯಲಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯ. ಮೂಲಭೂತ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ದಪಡಿಸಿದೆ. ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಒಲಿಂಪಿಕ್ ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್ ನ ಟೋಕಿಯೋದಲ್ಲಿ ಹಾರಿಸಲಿ ಎಂದು ಸಚಿವರು ಶುಭಹಾರೈಸಿದ್ದಾರೆ.
ಮತ್ತಷ್ಟು ಕಠಿಣ ಶ್ರಮವಹಿಸಿ ಒಲಿಂಪಿಕ್ ನಲ್ಲಿ ಪಾಲ್ಗೊಳ್ಳಬೇಕು. ಆದ್ದರಿಂದ ತಲಾ ರೂ. 10 ಲಕ್ಷ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೆ ರಾಜ್ಯ ಸರ್ಕಾರ ಕರ್ನಾಟಕದಕ್ರೀಡಾಪ್ರೋತ್ಸಾಹ ಧನ ಘೋಷಿಸಿ ಆದೇಶಿಸಿದೆ.
ಆಯ್ಕೆಯಾಗಿರುವ ಹಾಗೂ ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದ ಕ್ರೀಡಾಪಟುಗಳು
ಪೌವಾದ್ ಮಿರ್ಜಾ – ಈಕ್ವೆಸ್ಟ್ರಿಯನ್. – ಆಯ್ಕೆಯಾಗಿದ್ದಾರೆ.
ಎಸ್.ವಿ. ಸುನೀಲ್ – ಹಾಕಿ. – ಸಂಭವನೀಯ
ರೋಹನ್ ಬೋಪಣ್ಣ – ಟೆನ್ನಿಸ್. – ಸಂಭವನೀಯ
ಶ್ರೀಹರಿ ನಟರಾಜ್ – ಈಜು. – ಸಂಭವನೀಯ
ಕುಮಾರಿ ಅದಿತಿ ಅಶೋಕ್ – ಗಾಲ್ಫ್. -ಸಂಭವನೀಯ
ಪುತಿಷ್ಕೃತ ಕ್ರೀಡಾಕೂಟದಲ್ಲಿ ಭಾರತ ತಂಡದ ಪರವಾಗಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪೂರ್ವ ತಯಾರಿ ಮತ್ತು ಬೆಂಬಲದ ದ್ಯೋತಕವಾಗಿ ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳು ತಲಾ ರೂ.10.00 ಲಕ್ಷ ಪ್ರೋತ್ಸಾಹ ಧನ ನೀಡಿವೆ. ಅದೇ ರೀತಿ ಕರ್ನಾಟಕ ಸಹ ಕ್ರೀಡಾಪಟುಗಳಿಗೆ ನಗದು
ಪ್ರೋತ್ಸಾಹಧನ ನೀಡುವ ಸಂಬಂಧ ಇತ್ತೀಚೆಗೆ ನಡೆದ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಡಾ. ಗೋಪಾಲಕೃಷ್ಣ ಹಾಗೂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ