Karnataka: ಅರ್ಜಿ ಸಲ್ಲಿಸಿದ 10 ಲಕ್ಷ ಮಂದಿಗೆ ಸಿಕ್ಕಿಲ್ಲ ಗೃಹಲಕ್ಷ್ಮಿ
ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಸಾಕಷ್ಟು ಗೊಂದಲ
Team Udayavani, Oct 12, 2023, 8:20 PM IST
ಬೆಂಗಳೂರು: ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆ ಎಲ್ಲರ ಮನೆಗೆ ತಲುಪುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಸರಕಾರ ತಾಂತ್ರಿಕ ಕಾರಣದ ನೆಪ ನೀಡಿ ಯೋಜನೆಗೆ ಪರಿಗಣಿಸದಿರುವ ಅರ್ಜಿದಾರರ ಸಂಖ್ಯೆಯೇ ಸುಮಾರು 10 ಲಕ್ಷಕ್ಕೆ ತಲುಪಿದೆ. ಜತೆಗೆ, ಯೋಜನೆಗೆ ಅರ್ಜಿ ಸಲ್ಲಿಸಿದವರ ಪೈಕಿ 3,082 ಮಂದಿ ಮೃತಪಟ್ಟಿರುವುದರಿಂದ ಅವರನ್ನು ಸರಕಾರ ಅನರ್ಹ ಎಂದು ಪರಿಗಣಿಸಿದೆ.
ರಾಜ್ಯ ಸರಕಾರ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಸಹಿತ ನಾಲ್ಕನ್ನು ಅನುಷ್ಠಾನಗೊಳಿಸಿದೆ. ಈ ಪೈಕಿ ಗೃಹಲಕ್ಷ್ಮಿ ಅನುಷ್ಠಾನ ಹಾಗೂ ಜಾರಿಯಲ್ಲಿ ಮಾತ್ರ ಅಡಚಣೆಗಳು ಆಗುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಈ ಯೋಜನೆಯ ಅರ್ಹ ಫಲಾನುಭವಿಗಳು ಇಂತಿಷ್ಟೇ ಮಂದಿ ಎಂದು ಲೆಕ್ಕ ಹಾಕುವುದಕ್ಕೆ ಇದುವರೆಗೆ ಸಾಧ್ಯವಾಗಿಲ್ಲ. ಹೀಗಾಗಿ ಯೋಜನೆಯಲ್ಲಿ ಸಾಕಷ್ಟು ಗೊಂದಲ ಕಾಣಿಸಿಕೊಳ್ಳುತ್ತಿದೆ.
ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 8ರಂದು ರಾಜ್ಯ ಸರಕಾರ ಮೈಸೂರಿನಲ್ಲಿ ಅಧಿಕೃತವಾಗಿ ಜಾರಿಗೊಳಿಸಿದೆ. ಆಗಸ್ಟ್ನಲ್ಲಿ 1.8 ಕೋಟಿ ಅರ್ಹ ಫಲಾನುಭವಿಗಳಿಗೆ ತಲಾ 2000 ರೂ. ನಂತೆ 2,169 ಕೋಟಿ ರೂ.ನ್ನು ಫಲಾನುಭವಿಗಳಿಗೆ ಸರಕಾರ ವರ್ಗಾವಣೆ ಮಾಡಿದೆ. ಆದರೆ ಅ.4ರ ದಾಖಲೆ ಪ್ರಕಾರ 93 ಲಕ್ಷ ಫಲಾನುಭವಿಗಳು ಮಾತ್ರ ಇದರ ಲಾಭ ಪಡೆದಿದ್ದಾರೆ. ಹೀಗಾಗಿ ಪ್ರತಿ ತಿಂಗಳೂ ಫಲಾನುಭವಿಗಳ ಹೊಂದಾಣಿಕೆಯ ಸಮಸ್ಯೆ ಕಾಣಿಸಿಕೊಂಡಿದೆ.
ಇಲಾಖೆಯೇ ಬಿಡುಗಡೆಗೊಳಿಸಿದ ಮಾಹಿತಿ ಪ್ರಕಾರ 3,082 ಅರ್ಜಿದಾರರು ಮರಣ ಹೊಂದಿದ್ದು, ಹೀಗಾಗಿ ಅವರನ್ನು ಯೋಜನಾ ವ್ಯಾಪ್ತಿಯಿಂದ ಹೊರಗಿಡಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.
1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟಂಬರ್ ತಿಂಗಳಲ್ಲಿ 1.14 ಕೋಟಿ ಫಲಾನುಭವಿಗಳಿಗೆ 2,280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಗೊಂದಲಗಳನ್ನು ಪರಿಹರಿಸಲು ಆಗ್ರಹ
ಅಕ್ಟೋಬರ್ 4ರ ವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ವರ್ಗಾಯಿಸಲಾಗಿದೆ. ಹಿಂದಿನ ಎರಡು ತಿಂಗಳ ಸಂಖ್ಯೆಗೆ ಹೋಲಿಸಿದರೆ ಸುಮಾರು 15 ಲಕ್ಷ ಫಲಾನುಭವಿಗಳ ವ್ಯತ್ಯಾಸ ಕಂಡು ಬರುತ್ತಿದೆ. ಈ ಮಧ್ಯೆ ಸುಮಾರು 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಇಲಾಖೆ ತಾಂತ್ರಿಕ ಪರಿಹಾರವನ್ನು ಹುಡುಕುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಟಾಳ್ಕರ್ ಅವರು ಎರಡು ದಿನಗಳ ಹಿಂದೆ ಪ್ರಕಟಿಸಿದ ಅಂಕಿ-ಸಂಖ್ಯೆಗಳ ಪ್ರಕಾರ 9,44,155 ಅರ್ಜಿದಾರರಿಗೆ ಇದುವರೆಗೆ ಹಣ ತಲುಪಿಲ್ಲ. ಹೀಗಾಗಿ ಯೋಜನೆಯ ಜಾರಿಯಲ್ಲಿರುವ ಎಲ್ಲ ಗೊಂದಲಗಳನ್ನು ಆದಷ್ಟು ಬೇಗ ಪರಿಹರಿಸಬೇಕೆಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ