Hit and Run- 10 ವರ್ಷ ಜೈಲು: ಕೇಂದ್ರ ಸರ್ಕಾರದ ವಿಧೇಯಕದಲ್ಲಿ ಉಲ್ಲೇಖ
Team Udayavani, Aug 13, 2023, 5:39 AM IST
ನವದೆಹಲಿ: ದೇಶದಲ್ಲಿ ನೂತನ ಅಪರಾಧ ಕಾನೂನುಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಈಗಾಗಲೇ ಲೋಕಸಭೆಯಲ್ಲಿ ಮಂಡಿಸಿರುವ ಕೇಂದ್ರ ಸರ್ಕಾರವು ವಿಧೇಯಕಗಳ ಹೆಚ್ಚಿನ ವಿವರಗಳು ಹೀಗಿವೆ.
ನಂಬಿಸಿ ಲೈಂಗಿಕವಾಗಿ ವಂಚಿಸಿದರೆ 10 ವರ್ಷ ಜೈಲು:
ಗುರುತಿನ ಬಗ್ಗೆ ಸುಳ್ಳು ಹೇಳಿಕೊಂಡು, ಮದುವೆ ಆಗುತ್ತೇನೆ ಎಂದು ನಂಬಿಸಿ ಮತ್ತೂಬ್ಬ ವ್ಯಕ್ತಿಯನ್ನು ವಂಚಿಸುವುದು ಇನ್ನೂ ಶಿಕ್ಷಾರ್ಹ ಅಪರಾಧವಾಗಿದೆ. ಇತ್ತೀಚಿನ ದಿನಗಳಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ. ಹೆಸರು ಮತ್ತು ಧರ್ಮದ ಬಗ್ಗೆ ಸುಳ್ಳು ಹೇಳಿಕೊಂಡು ವಂಚಿಸಿ, ಮದುವೆಯಾಗುವುದು, ಲೈಂಗಿಕವಾಗಿ ತೊಡಗುವುದು ಹಾಗೂ ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿ ವಂಚಿಸುವ ಪ್ರಕರಣಗಳು ಹೆಚ್ಚುತ್ತಿವೆ. ಈ ರೀತಿಯ ಪ್ರಕರಣಗಳಲ್ಲಿ ಆರೋಪಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಸಿಗಲಿದೆ.
ದ್ವೇಷ ಭಾಷಣಕ್ಕೆ 3 ವರ್ಷ ಜೈಲು
ಪ್ರಸ್ತಾವಿತ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ದ್ವೇಷ ಭಾಷಣದ ಪ್ರಕರಣದಲ್ಲಿ ಗರಿಷ್ಠ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ನಿಟ್ಟಿನಲ್ಲಿ ಮಾತು, ಭಾಷಣ ಅಥವಾ ಲಿಖೀತ ಪದಗಳು ಅಥವಾ ಸಂಕೇತಗಳನ್ನು ಬಳಸಿದರೆ, ದ್ವೇಷ ಭಾಷಣದ ಪ್ರಕರಣದಲ್ಲಿ ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ಭಾರತೀಯ ದಂಡ ಸಂಹಿತೆ(ಐಪಿಸಿ)ಯಲ್ಲಿ ನಿರ್ದಿಷ್ಟ ಶಿಕ್ಷೆ ನಮೂದಿಸಿರಲಿಲ್ಲ.
ಹಿಟ್ ಆ್ಯಂಡ್ ರನ್ಗೆ 10 ವರ್ಷ ಜೈಲು
ಅಪಘಾತದ ಸಂದರ್ಭದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣಗಳಲ್ಲಿ ಗರಿಷ್ಠ 10 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ಪ್ರಸ್ತುತ ಇರುವ ಐಪಿಸಿಯಡಿ, ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಗರಿಷ್ಠ 2 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತಿದೆ.
420 ಇನ್ನು 316 ಸೆಕ್ಷನ್
ಐಪಿಸಿ ಅಡಿಯಲ್ಲಿ ವಂಚನೆ ಪ್ರಕರಣವು 420 ಸೆಕ್ಷನ್ ಅಡಿಯಲ್ಲಿ ಬರುತ್ತದೆ. ಇದು ಜನಮಾನಸದಲ್ಲಿ 420 ಕೇಸ್ ಎಂದೇ ಅಚ್ಚಾಗಿದೆ. ಆದರೆ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ವಂಚನೆ ಅಪರಾಧವನ್ನು 316 ಸೆಕ್ಷನ್ ಎಂದು ಪಟ್ಟಿ ಮಾಡಲಾಗಿದೆ.
ಅನೈಸರ್ಗಿಕ ಲೈಂಗಿಕತೆಗೆ ಇಲ್ಲ ಶಿಕ್ಷೆ?
ಕೇಂದ್ರದ ಹೊಸ ಪ್ರಸ್ತಾವನೆಯಲ್ಲಿ ಬಾಲಕರಿಗೆ, ಪುರುಷರ ಮೇಲೆ ನಡೆಯುವ ಅನೈಸರ್ಗಿಕ ಹಲ್ಲೆಗಳ ವಿರುದ್ಧ ಕ್ರಮಕ್ಕೆ ಯಾವುದೇ ಅಂಶ ಸೂಚಿಸಲಾಗಿಲ್ಲ. ಸದ್ಯದ ಕಾಯ್ದೆ ವ್ಯಾಪ್ತಿಯಲ್ಲಿ ಸೆಕ್ಷನ್ 377ರ ಅನ್ವಯ ಜೀವಿತಾವಧಿ ವರೆಗೆ ಜೈಲು, ಅಥವಾ ನಿಗದಿತ ಅವಧಿಯ ವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಈ ಬಗ್ಗೆ ಕಾನೂನು ಕ್ಷೇತ್ರದ ತಜ್ಞರು ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು