ನ.19ರಂದು “100′ ಚಲನಚಿತ್ರ ತೆರೆಗೆ: ರಮೇಶ ಅರವಿಂದ್ 


Team Udayavani, Nov 11, 2021, 11:40 AM IST

1-100

ದಾವಣಗೆರೆ: ಸಾಮಾಜಿಕ ಜಾಲತಾಣದಿಂದ ವಂಚನೆಗೊಳಗಾಗುವ ಮಧ್ಯಮ ವರ್ಗದ ಕುಟುಂಬವೊಂದರ ಹೋರಾಟದ ಕಥಾ ಹಂದರ ಹೊಂದಿರುವ 100′ ಚಲನಚಿತ್ರ ನ.19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ, ನಾಯಕ ನಟ ರಮೇಶ ಅರವಿಂದ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 100′ ಪೊಲೀಸ್‌ ಸಹಾಯವಾಣಿ ನಂಬರ್‌. ಚಿತ್ರದ ನಾಯಕ ಪೊಲೀಸ್‌ ಅಧಿಕಾರಿ. ಆತನ ಕುಟುಂಬ ಸಾಮಾಜಿಕ ಜಾಲತಾಣದ ವಂಚಕರ ವಂಚನೆಗೆ ಒಳಗಾಗುವುದು, ಅದರಿಂದ ಹೊರ ಬರುವ ಬಗೆ ಹೇಗೆ ಎಂಬುದರ ಮೇಲೆ ಚಿತ್ರ ಕಥೆ ಸಾಗುತ್ತದೆ. 100 ಪಕ್ಕಾ ಫ್ಯಾಮಿಲಿ ಥ್ರಿಲ್ಲರ್‌ ಚಿತ್ರ. ಎರಡು ಗಂಟೆಗಳ ಚಿತ್ರ ಕ್ಷಣದಿಂದ ಕ್ಷಣಕ್ಕೆ ಕುತೂಹಲ ಮೂಡಿಸುತ್ತದೆ. ಬಹಳ ಚೆನ್ನಾಗಿ ಸಿದ್ಧವಾಗಿದೆ. ಪ್ರತಿಯೊಬ್ಬರೂ ಚಿತ್ರಮಂದಿರಗಳಲ್ಲಿ ಚಿತ್ರ ನೋಡುವ ಮೂಲಕ ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಚಿತ್ರದ ನಾಯಕ ವಿಷ್ಣು ಮತ್ತು ಸೈಬರ್‌ ಕ್ರಿಮಿನಲ್‌ ಜತೆಗೆ ಸಾಗುವ ಕಥೆಯೇ 100. ಈ ಚಿತ್ರ ಶಿವಾಜಿ ಸುರತ್ಕಲ್‌ ಚಿತ್ರದ ಮುಂದುವರೆದ ಭಾಗದಂತಿದೆ. ತೆಲುಗಿನಲ್ಲಿ 100 ಸೈಬರ್‌ ಹೆಸರಿನಲ್ಲಿ ಚಿತ್ರ ಸಿದ್ಧವಾಗಿದೆ. ಕನ್ನಡದಲ್ಲಿ ಬಿಡುಗಡೆಯಾದ ನಂತರ ತೆಲುಗು ಚಿತ್ರ ಬಿಡುಗಡೆ ಮಾಡಲಾಗುವುದು. ವಿಶ್ವಾಸ್‌, ಗೌರವ್‌ ಎಂಬ ಹೊಸಬರನ್ನು ಪರಿಚಯಿಸಲಾಗಿದೆ. ಅತ್ಯುತ್ತಮ ತಂತ್ರಜ್ಞರ ತಂಡ, ಪ್ರತಿಭಾವಂತರ ಗುಂಪು ಚಿತ್ರಕ್ಕಾಗಿ ಕೆಲಸ ಮಾಡಿದೆ. ರಚಿತಾರಾಮ್‌ ಅವರೊಂದಿಗೆ ತೆಲುಗಿನ ಪೂರ್ಣ ನಾಯಕಿ ನಟಿಯಾಗಿ ಅಭಿನಯಿಸಿದ್ದಾರೆ. ಚಿತ್ರದ ಟೈಟಲ್‌ 100ಗೂ ಇಬ್ಬರು ನಾಯಕಿಯರಿಗೂ ಸಂಬಂಧವೇ ಇಲ್ಲ. ಆದರೂ ಚಿತ್ರ ನೋಡಿದಾಗ ಪ್ರತಿಯೊಂದು ಪಾತ್ರವೂ ಚಿತ್ರದ ಟೈಟಲ್‌ಗೆ ಹೊಂದಿಕೊಂಡೇ ಸಾಗುತ್ತದೆ. ನಿರ್ಮಾಪಕ ರಮೇಶ್‌ ರೆಡ್ಡಿ ಚಿತ್ರದ ಕಥೆಗೆ ಪೂರಕವಾಗಿ ಬಂಡವಾಳ ಒದಗಿಸಿದ್ದಾರೆ ಎಂದರು.

ಮೊಬೈಲ್‌, ಇನ್‌ಸ್ಟಾಗ್ರಾಂ ಮನೆಯನ್ನೇ ಹೊಕ್ಕಿವೆ. ಒಂದೇ ಮನೆಯಲ್ಲಿ ಪ್ರತಿಯೊಬ್ಬರೂ ಕೈಯಲ್ಲಿರುವ ಮೊಬೈಲ್‌ ನೋಡುವುದರಲ್ಲೇ ಮುಳುಗಿ ಹೋಗಿರುವುದು ಸಾಮಾನ್ಯ ಎನ್ನುವಂತಾಗಿದೆ. ಸಾಮಾಜಿಕ ಜಾಲತಾಣಗಳು ಮಧ್ಯಮ ವರ್ಗದ ಕುಟುಂಬದ ಮೇಲೆ ಏನೆಲ್ಲ ಪರಿಣಾಮ ಉಂಟು ಮಾಡಬಲ್ಲದು. ಗೊತ್ತೋ, ಗೊತ್ತಿಲ್ಲದೆಯೋ ಆ ಕುಟುಂಬ ಸಾಮಾಜಿಕ ಜಾಲತಾಣದಿಂದ ಹೇಗೆ ವಂಚನೆಗೆ ಒಳಗಾಗಬಹುದು ಎಂಬುದನ್ನು 100 ಚಿತ್ರದ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ನನ್ನ ಗೆಳೆಯನ ಜೀವನದಲ್ಲಿ ನಡೆದ ಘಟನೆಯನ್ನು ಕಥೆ ಮಾಡಲಾಗಿದೆ. ಇನ್ನುಳಿದ ಕಥೆಯನ್ನು ನಾನೇ ಸಿದ್ಧಪಡಿಸಿದ್ದೇನೆ. ಚಿತ್ರ ನೋಡಿದರೆ ನಮ್ಮ ಜೀವನದಲ್ಲೂ ಇದೇ ರೀತಿ ಇದೆಯೆಲ್ಲ ಎಂಬ ಭಾವನೆ ಬರುತ್ತದೆ. ಯಾವುದೇ ಚಿತ್ರ ನಮ್ಮ ಬದುಕಿಗೆ ಹತ್ತಿರವಾದ ಕಥೆ ಹೊಂದಿದ್ದಲ್ಲಿ ಚಿತ್ರ ಗೆದ್ದೇ ಗೆಲ್ಲುತ್ತದೆ. ತಮ್ಮ ರಾಮ ಶ್ಯಾಮ ಭಾಮ, ಅಮೆರಿಕ ಅಮೆರಿಕ ಇದೇ ಸೂತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದವು. ಜೀವನದ ಅನುಭವವೂ ಚಿತ್ರಕಥೆಯಲ್ಲಿ ಮೇಳೈಸುವಂತಾಗಬೇಕು ಎಂದರು.

ನಿರ್ಮಾಪಕ ಎಂ. ರಮೇಶ್‌ ರೆಡ್ಡಿ ಮಾತನಾಡಿ, 100′ ತಮ್ಮ ಮೂರನೇ ಚಿತ್ರ. ರಮೇಶ ಅರವಿಂದ ಒಳ್ಳೆಯ ಕಥೆಯನ್ನು ಬಹಳ ಸುಂದರವಾಗಿ ಮಾಡಿದ್ದಾರೆ. ಪ್ರತಿಯೊಬ್ಬರೂ ಚಿತ್ರ ನೋಡುವ ಮೂಲಕ ಆಶೀರ್ವದಿಸಬೇಕು ಎಂದು ಕೋರಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.