ಚಿಕ್ಕಬಳ್ಳಾಪುರದಲ್ಲಿ 6 ಲಕ್ಷ ಮೌಲ್ಯದ 101 ಕೆಜಿ ಶ್ರೀಗಂದ ತುಂಡಗಳ ವಶ
Team Udayavani, Sep 24, 2019, 9:06 PM IST
ಚಿಕ್ಕಬಳ್ಳಾಪುರ: ಅಕ್ರಮವಾಗಿ ನೆರೆಯ ಆಂದ್ರಪ್ರದೇಶದಿಂದ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿದ್ದ ಬರೋಬರಿ 101 ಕೆಜಿ ತೂಕದ ಒಟ್ಟು 6.40 ಲಕ್ಷ ರೂ ಮೌಲ್ಯದ ಶ್ರೀಗಂಧ ಮರದ ತುಂಡಗಳನ್ನು ಚಿಕ್ಕಬಳ್ಳಾಪುರ ನಂದಿ ಠಾಣೆ ಪೊಲೀಸರು ಕಾರ್ಯಾಚರಣೆ ನಡಸಿ ವಶಪಡಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಉಪ ಚುನಾವಣೆಗೆ ಘೊಷಿಸಿರುವ ಹಿನ್ನಲೆಯಲ್ಲಿ ತಾಲೂಕಿನ ದೊಡ್ಡಮರಳಿ ಸಮೀಪ ಚೆಕ್ ಪೋಸ್ಟ್ ಸ್ಥಾಪಿಸಿದ್ದು ವಾಹನಗಳ ತಪಾಸಣೆ ನಡೆಸುವ ವೇಳೆ ಅನುಮಾನ ಬಂದ ಕಾರನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಶ್ರೀಗಂದದ ತುಂಡುಗಳು ಪತ್ತೆಯಾಗಿವೆ.
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ
ಚೆಕ್ ಪೋಸ್ಟ್ ಬಳಿ ಆಗಮಿಸಿದ AP-03, CD-3479 ಸಿಲ್ವರ್ ಬಣ್ಣದ ಇಸಿಯೋಸ್ ಕಾರು ಬಂದಿದ್ದು ಈ ವೇಳೆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ನಿಲ್ಲಿಸುವಂತೆ ಸೂಚಿಸಿದಾಗ ಕಾರು ನಿಲ್ಲಿಸದೇ ಪೇದೆಯೊಬ್ಬರಿಗೆ ಗುದ್ದಿ ಮುಂದೆ ಹೋಗಿದೆ. ಇದರಿಂದ ಪೊಲೀಸರು ಕಾರನ್ನು ಹಿಂಬಾಲಿಸಿಕೊಂಡ ಹೋದಾಗ ಕಾರು ರಾಷ್ಟ್ರೀಯ ಹೆದ್ದಾರಿಯ ನಂದಿ ಕ್ರಾಸ್ ಕಡೆಗೆ ಅತಿವೇಗದಿಂದ ಹೋಗುವಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಸಂಭವಿಸಿದ್ದು ಆಗ ಚಾಲಕ ಕಾರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದಾರೆ.
7 ಚೀಲಗಳಲ್ಲಿ ಶ್ರೀಗಂಧ
ಬಳಿಕ ಪೊಲೀಸರು ಕಾರು ಪರಿಶೀಲನೆ ನಡೆಸಿದಾಗ ಅದರಲ್ಲಿ 7 ಚೀಲಗಳಲ್ಲಿ ತುಂಬಿದ್ದ ಬರೋಬರಿ 101 ಕೆಜಿಯಷ್ಟು ತೂಕವಿರುವ ಶ್ರೀಗಂಧ ಮರದ ತುಂಡಗಳು ಪತ್ತೆಯಾಗಿವೆ. ಅದರ ಒಟ್ಟು ಮೌಲ್ಯ 6.40 ಲಕ್ಷ ರೂ ಎಂದು ಅಂದಾಜು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ