ಪ್ರಾಣ ಪಣಕ್ಕಿಟ್ಟವರಿಗೆ ಸಿಗುತ್ತಿಲ್ಲ ಬೆವರಿನ ಹಣ! 108 ಸಿಬಂದಿಗೆ 3 ತಿಂಗಳಿಂದ ಸಂಬಳವಿಲ್ಲ


Team Udayavani, Mar 27, 2022, 8:25 AM IST

ಪ್ರಾಣ ಪಣಕ್ಕಿಟ್ಟವರಿಗೆ ಸಿಗುತ್ತಿಲ್ಲ ಬೆವರಿನ ಹಣ! 108 ಸಿಬಂದಿಗೆ 3 ತಿಂಗಳಿಂದ ಸಂಬಳವಿಲ್ಲ

ಕಾರ್ಕಳ: ಪ್ರಾಣವನ್ನೇ ಪಣಕ್ಕಿಟ್ಟು ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುತ್ತಿರುವ 108 ಆರೋಗ್ಯಕವಚ ಸಿಬಂದಿಗೆ 3 ತಿಂಗಳಿಂದ ವೇತನ ಸಿಕ್ಕಿಲ್ಲ. ಕುಟುಂಬ ನಿರ್ವಹಣೆ, ಮನೆ ಬಾಡಿಗೆ, ಔಷಧ ಖರೀದಿ, ಮಕ್ಕಳ ಶಿಕ್ಷಣ ಇತ್ಯಾದಿಗೂ ಪರದಾಡುವ ಸ್ಥಿತಿ ಅವರ ಕುಟುಂಬದ್ದಾಗಿದೆ.

ಆರೋಗ್ಯ ಇಲಾಖೆಯಿಂದ ಗುತ್ತಿಗೆ ಪಡೆದುಕೊಂಡಿರುವ ಜಿವಿಕೆ ಇಎಂಎಆರ್‌ಐ ಸಂಸ್ಥೆ ತನ್ನ ಸಿಬಂದಿಗೆ ಡಿಸೆಂಬರ್‌ನಿಂದ ಬಿಡಿಗಾಸನ್ನೂ ನೀಡಿಲ್ಲ. ಮಾಸಿಕ ವೇತನವನ್ನೇ ನಂಬಿರುವ 108ರ ಸಿಬಂದಿ ಅತ್ತ ಕೆಲಸವನ್ನು ನಿಲ್ಲಿಸಲೂ ಸಾಧ್ಯವಾಗದೆ ಇತ್ತ ಬದುಕಿನ ಬಂಡಿಯನ್ನು ಚಲಾಯಿಸಲೂ ಸಾಧ್ಯವಾಗದೆ ಸಾಲಸೋಲ ಮಾಡಿ ಒದ್ದಾಡುತ್ತಿದ್ದಾರೆ.

ಬಡವಾದ ಸಿಬಂದಿ
ಸರಕಾರ ಈ ಹಿಂದೆಲ್ಲ ಮುಂಗಡ ಹಣ ನೀಡುತ್ತಿತ್ತು. ಈಗ ಕೊಡದೇ ಇರುವುದರಿಂದ ಸಮಸ್ಯೆಯಾಗಿದೆ ಎಂದು ಜಿವಿಕೆ ಸಂಸ್ಥೆ ಹೇಳುತ್ತಿದೆ. ಆದರೆ ಜಿವಿಕೆ ಸಂಸ್ಥೆಯವರು ಸರಿಯಾದ ದಾಖಲೆಗಳನ್ನು ನೀಡದೆ ಇರುವುದರಿಂದ ಸರಕಾರ ಹಣ ಮಂಜೂರಾತಿಗೆ ಹಿಂದೇಟು ಹಾಕುತ್ತಿದೆ; ಸಂಸ್ಥೆಯು ನಿರ್ವಹಣೆಯಲ್ಲಿ ಎಡವಿದ್ದೇ ಸಮಸ್ಯೆಗೆ ಕಾರಣ ಎನ್ನುತ್ತಾರೆ ಸಿಬಂದಿ. ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಅನ್ನುವಂತೆ ಇಲ್ಲಿ ಸಂಸ್ಥೆ ಮತ್ತು ಸರಕಾರದ ಗುದ್ದಾಟಕ್ಕೆ ನಾವು ಬಲಿಯಾಗುತ್ತಿದ್ದೇವೆ ಎಂದು ಸಿಬಂದಿ ಅಳಲು ತೋಡಿಕೊಳ್ಳುತ್ತಿದ್ದಾರೆ.

108 ಆರೋಗ್ಯ ಕವಚದ ನಿರ್ವಹಣೆಗಾಗಿ ಜಿವಿಕೆ ಸಂಸ್ಥೆಗೆ 10 ವರ್ಷಗಳ ಗುತ್ತಿಗೆ ನೀಡಲಾಗಿತ್ತು. 2017ರ ವರೆಗೆ ಚೆನ್ನಾಗಿಯೇ ನಡೆಯುತ್ತಿತ್ತು. ಪ್ರತೀ ತಿಂಗಳ ಮೊದಲ ಒಂದೆರಡು ದಿನಗಳಲ್ಲಿ ವೇತನ ಪಾವತಿಯಾಗುತ್ತಿತ್ತು. 2017ರಲ್ಲಿ ಸಮಸ್ಯೆ ಆರಂಭವಾಗಿದ್ದು, ಆಗಾಗ ಮರುಕಳಿಸುತ್ತಿದೆ.

ಹೊಸ ಟೆಂಡರ್‌ಗೆ ನಿರ್ಧಾರ
ಜಿವಿಕೆಯ ಗುತ್ತಿಗೆ ಅವಧಿ 2018ಕ್ಕೆ ಮುಗಿದಿದೆ. ಆದರೂ ಈ ವರೆಗೆ ಅವರನ್ನೇ ಮುಂದುವರಿಸಲಾಗಿತ್ತು. ಇತ್ತೀಚೆಗೆ ಜಿವಿಕೆ ಕುರಿತು ಹಲವು ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಐದು ವರ್ಷಗಳ ಅವಧಿಗೆ ಹೊಸದಾಗಿ ಟೆಂಡರ್‌ ಕರೆಯಲು ಸರಕಾರ ನಿರ್ಧರಿಸಿದೆ. ಸೊರಗಿದ 108 ಆ್ಯಂಬುಲೆನ್ಸ್‌ ಸೇವೆಗೆ ಹೊಸ ರೂಪ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿ ನಾಲ್ಕು ವರ್ಷಗಳಿಂದ ಕಾಯುತ್ತಿದ್ದು, ಸಂಪುಟದ ಅನುಮತಿ ಸಿಗದೆ ಬಾಕಿಯಾಗಿತ್ತು. ಈ ಅನುಮತಿ ಲಭಿಸಿದೆ.

ವಿತ್ತ ವರ್ಷದ ಕೊನೆಯ ತಿಂಗಳಾಗಿರುವುದರಿಂದ ಸ್ವಲ್ಪ ಸಮಸ್ಯೆಯಾಗಿದೆ. ಸರಕಾರದಿಂದ ಹಣ ಬಿಡುಗಡೆಯಾಗಿದೆ. ಈ ಕೂಡಲೇ ಒಂದು ತಿಂಗಳ ವೇತನ ಪಾವತಿಸುತ್ತೇವೆ. ಬಾಕಿ ಮೊತ್ತವನ್ನು ವಾರದೊಳಗೆ ನೀಡಲಿದ್ದೇವೆ‌.
– ಹನುಮಂತಪ್ಪ,,
ಸಿಇಒ ಜಿವಿಕೆ ಇಎಂಎಆರ್‌ಐ, ಬೆಂಗಳೂರು

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.