108 ಆ್ಯಂಬುಲೆನ್ಸ್‌ ಸಿಬಂದಿಯ ಎಂದೆಗುಂದದ ಸೇವೆ

ನಿತ್ಯ ನೂರಾರು ಕಿ.ಮೀ. ಓಡಾಟ; ಪ್ರತೀ ಕ್ಷಣವೂ ಎಚ್ಚರಿಕೆ

Team Udayavani, Jun 22, 2020, 6:07 AM IST

108 ಆ್ಯಂಬುಲೆನ್ಸ್‌ ಸಿಬಂದಿಯ ಎಂದೆಗುಂದದ ಸೇವೆ

ಮಹಾನಗರ: ಕೋವಿಡ್‌ ಸೇನಾನಿಗಳಾಗಿ ಶ್ರಮಿಸುತ್ತಿರುವ “108-ಆರೋಗ್ಯ ಕವಚ’ ಆ್ಯಂಬುಲೆನ್ಸ್‌ ಸಿಬಂದಿ ಸೋಂಕಿತರ ನೇರ ಸಂಪರ್ಕ ಇರಿಸಿಕೊಳ್ಳುತ್ತ, ಪಿಪಿಇ ಕಿಟ್‌ ಧರಿಸಿ ಕಿ.ಮೀ.ಗಟ್ಟಲೆ ಸಂಚರಿಸುತ್ತ ಜಿಲ್ಲಾಡಳಿತ, ಆರೋಗ್ಯ ವಿಭಾಗದ ಜತೆಗೆ ಹೆಗಲು ಕೊಟ್ಟಿದ್ದಾರೆ. ಪ್ರತಿ ಕ್ಷಣವೂ ಸವಾಲು ಎದುರಿಸುತ್ತಿದ್ದರೂ ಎದೆಗುಂದದೆ ಸೇವೆ ಮುಂದುವರಿಸಿದ್ದಾರೆ.

ಕಳೆದ ಎರಡೂವರೆ ತಿಂಗಳಿಂದ ನೂರಾರು ಮಂದಿ ಕೋವಿಡ್‌ ಸೋಂಕಿತರು, ಶಂಕಿತರು, ಗುಣಮುಖರಾದವರನ್ನು ಆಸ್ಪತ್ರೆ/ ಮನೆ/ಕ್ವಾರಂಟೈನ್‌ ಕೇಂದ್ರಗಳಿಗೆ ತಲುಪಿಸಿದ್ದಾರೆ. ಕೆಲವು ಸಿಬಂದಿ ಸ್ವತಃ ಕ್ವಾರಂಟೈನ್‌ಗೂ ಒಳಗಾಗಿದ್ದಾರೆ.

180ಕ್ಕೂ ಅಧಿಕ ವಾಹನ
ಕೋವಿಡ್‌-19ಸೋಂಕು, ಚಿಕಿತ್ಸೆ ಆರಂಭವಾದ ಬಳಿಕ 180ಕ್ಕೂ ಅಧಿಕ ಆರೋಗ್ಯ ಕವಚ ಆ್ಯಂಬುಲೆನ್ಸ್‌ ಕೋವಿಡ್‌ ಸೇವೆಯಲ್ಲಿ ನಿರತವಾಗಿವೆ. ಒಂದು ವಾಹನದಲ್ಲಿ ಚಾಲಕರು, ಸ್ಟಾಫ್ ನರ್ಸ್‌ಗಳು ಎರಡು ಪಾಳಿಗಳಲ್ಲಿ ತಲಾ 12 ತಾಸು ದುಡಿಯುತ್ತಾರೆ. ಚಾಲಕರ ಸಹಿತ ಎಲ್ಲರೂ ಪಿಪಿಇ ಕಿಟ್‌ ಧರಿಸಿಯೇ ಇರುತ್ತಾರೆ. 50 ಮಂದಿ ಮಹಿಳೆಯರು ಕೂಡ ಸೇರಿದ್ದಾರೆ. ದ.ಕ. ಜಿಲ್ಲೆಯಲ್ಲಿ ಕೋವಿಡ್‌ ಸೇವೆಗಾಗಿ 6 ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ. ಒಟ್ಟು 24 ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. ಉಡುಪಿಯಲ್ಲಿ ಆರಂಭದಲ್ಲಿ 3 ವಾಹನ ಗಳಿದ್ದರೆ ಈಗ 15ಕ್ಕೇರಿಸಲಾಗಿದೆ.

ನಾನಾ ಸವಾಲು-ಸಮಸ್ಯೆ
ರೋಗಿಗಳನ್ನು ಅತೀ ಶೀಘ್ರ ಆಸ್ಪತ್ರೆಗೆ ಕೊಂಡೊಯ್ಯುವ ಸವಾಲಿನ ಜತೆಗೆ ಸ್ವತಃ ಸೋಂಕಿನಿಂದ ರಕ್ಷಿಸಿಕೊಳ್ಳಬೇಕಾದ ಸವಾಲು ಇವರದು. ಊಟ ಉಪಾಹಾರ, ವಾಸ್ತವ್ಯ ವ್ಯವಸ್ಥೆಗೂ ಕೆಲವೆಡೆ ಪರದಾಡುವ ಸ್ಥಿತಿಯಿದೆ. ಇದರ ಜತೆ ಪಿಪಿಇ ಕಿಟ್‌ ಧರಿಸುವ ಅನಿವಾರ್ಯ.

ತುರ್ತು ಸೇವೆಗೆ ಅಲಭ್ಯ
108 ಆ್ಯಂಬುಲೆನ್ಸ್‌ಗಳನ್ನು ಈಗ ಹೆಚ್ಚಾಗಿ ಕೋವಿಡ್‌ ಸೇವೆಗಾಗಿ ಬಳಸುತ್ತಿರುವುದರಿಂದ ಕೆಲವೆಡೆ ಇತರ ತುರ್ತು ಸೇವೆಗೆ ಆ್ಯಂಬುಲೆನ್ಸ್‌ ಸಿಗದಂತಾಗಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೋವಿಡ್‌ ಸೇವೆಗೆ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿರುವ ಬೇರೆ ಆ್ಯಂಬುಲೆನ್ಸ್‌ ಬಳಸಬಹುದು ಎಂಬ ಸಲಹೆ ಸಾರ್ವಜನಿಕರದು.

 ಎಚ್ಚರಿಕೆಯಿಂದ ಕೆಲಸ
ರಾಜ್ಯದಲ್ಲಿ ಒಟ್ಟು 716 ಆರೋಗ್ಯ ಕವಚ ವಾಹನಗಳಿವೆ. ಆರಂಭದಲ್ಲಿ 180ಕ್ಕೂ ಅಧಿಕ ವಾಹನಗಳನ್ನು ಕೋವಿಡ್‌ ಸೇವೆಗೆ ಬಳಸಿಕೊಳ್ಳಲಾಗಿತ್ತು. ಸಿಬಂದಿಯ ಸುರಕ್ಷೆಗಾಗಿ ಅವರ ಲೊಕೇಶನ್‌ಗಳಲ್ಲಿ ರೂಂ ಮಾಡಿಕೊಡಬೇಕಿತ್ತು. ಇದು ಇನ್ನೂ ಕೆಲವು ಕಡೆ ಆಗಿಲ್ಲ. ಕೆಲವರು ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಮನೆಗೂ ಹೋಗಿಲ್ಲ. ಅವರಿಗೆ ಕನಿಷ್ಠ ವೇತನ ನೀಡುವ ಆದೇಶವೂ ಜಾರಿಗೆ ಬಂದಿಲ್ಲ.ಕೋವಿಡ್‌ ಸೇವೆ ಸಂದರ್ಭ ನಮ್ಮವರು ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದಾರೆ.
 - ಶ್ರೀಶೈಲ ಹಳ್ಳೂರ್‌
ಅಧ್ಯಕ್ಷರು, ಕರ್ನಾಟಕ ರಾಜ್ಯ 108
ಆರೋಗ್ಯ ಕವಚ ನೌಕರರ ಸಂಘ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.