ಜಿಲ್ಲೆಯಲ್ಲಿ ಮುಚ್ಚಿವೆ 12 ಶಾಲೆ : ಶಿಕ್ಷಕ- ವಿದ್ಯಾರ್ಥಿ ಅನುಪಾತದಲ್ಲಿ ಅಜಗಜಾಂತರ
Team Udayavani, Jan 15, 2022, 11:47 AM IST
ಸಾಂದರ್ಭಿಕ ಚಿತ್ರ
ಉಡುಪಿ : ಕೊರೊನಾದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗುವ ಜತೆಗೆ ಖಾಸಗಿ ಶಾಲೆಗಳಿಗೆ ಒಂದಷ್ಟು ಪೆಟ್ಟು ಬಿದ್ದಿದೆ. ಈ ಮಧ್ಯೆ ಜಿಲ್ಲೆಯಲ್ಲಿ ತಲಾ 3 ಸರಕಾರಿ ಶಾಲೆ ಹಾಗೂ ಖಾಸಗಿ (ಅನುದಾನ ರಹಿತ) ಶಾಲೆಗಳು ಮತ್ತು 6 ಅನುದಾನಿತ ಶಾಲೆಗಳು ಬಂದ್ ಆಗಿವೆ.
ಬ್ರಹ್ಮಾವರದ 4, ಬೈಂದೂರು, ಕಾರ್ಕಳ, ಉಡುಪಿ ಹಾಗೂ ಕುಂದಾಪುರದ ತಲಾ 2 ಶಾಲೆಗಳು ಸೇರಿವೆ. ಇದರಲ್ಲಿ ಬಹುತೇಕ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು. ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಸುಮಾರು 60 ಸಾವಿರ, ಖಾಸಗಿ ಶಾಲೆಗಳಲ್ಲಿ 75 ಸಾವಿರ ಹಾಗೂ ಅನುದಾನಿತ ಶಾಲೆಗಳಲ್ಲಿ 22 ಸಾವಿರ ಸೇರಿದಂತೆ ಒಟ್ಟು ಸುಮಾರು 1.50 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಸರಕಾರಿ ಶಾಲೆ: 473 ಹುದ್ದೆ ಖಾಲಿ
ಜಿಲ್ಲೆಯ 650ಕ್ಕೂ ಅಧಿಕ ಸರಕಾರಿ ಶಾಲೆಗಳಲ್ಲಿ 473 ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಇದರಲ್ಲಿ ಪ್ರೌಢಶಾಲಾ ವಿಭಾಗ ಬೇರೆ ಇರುವುದಿಂದ ಪ್ರೌಢಶಾಲೆಯಲ್ಲಿ ವಿಷಯವಾರು ಇಂಗ್ಲಿಷ್, ವಿಜ್ಞಾನ, ಗಣಿತ ಮೊದಲಾದ ಶಿಕ್ಷಕರ ಹುದ್ದೆಯೂ ಖಾಲಿಯಿದೆ. ಹುದ್ದೆ ಭರ್ತಿಗೆ ರಾಜ್ಯ ಸರಕಾರದಿಂದಲೇ ಕ್ರಮವಾಗಬೇಕು. ಸದ್ಯಕ್ಕೆ ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.
ವೇತನ ಕಡಿಮೆ ಇರುವುದರಿಂದ ವರ್ಷದಿಂದ ವರ್ಷಕ್ಕೆ ಅತಿಥಿ ಶಿಕ್ಷಕರು ಬದಲಾಗುತ್ತಿರುತ್ತಾರೆ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೂ ಪ್ರಭಾವ ಬೀರುತ್ತದೆ.
ಇದನ್ನೂ ಓದಿ : ಡಾಬಾ ಸಿಬ್ಬಂದಿ ಕೊಲೆ ಪ್ರಕರಣ: ಮಾಲೀಕನ ಪತ್ನಿಯೇ ಸೂತ್ರಧಾರಿ
30-40 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕ
ಶಿಕ್ಷಕರ ಕೊರತೆ ಜತೆಗೆ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತದಲ್ಲೂ ಅಜಗಜಾಂತರವಿದೆ. ಸರಕಾರದ ನಿಯಮದಂತೆ 18ರಿಂದ 22 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕ ಇರಬೇಕು. ಆದರೆ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ 30ರಿಂದ 40 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರಿದ್ದಾರೆ. 583 ಸರಕಾರಿ ಪ್ರಾಥಮಿಕ ಶಾಲೆಗಳ ಪೈಕಿ 127ರಲ್ಲಿ ಮಾತ್ರ ಸರಕಾರದ ನಿಯಮದಂತೆ ಶಿಕ್ಷಕರಿದ್ದಾರೆ. 106 ಪ್ರೌಢ ಶಾಲೆಗಳ ಪೈಕಿ ಬಹುತೇಕ ಎಲ್ಲಡೆ ನಿಯಮದಂತೆ ಶಿಕ್ಷಕರಿದ್ದಾರೆ.
ಮಾಹಿತಿ ಸಂಗ್ರಹ
ಜಿಲ್ಲೆಯ ಪ್ರೌಢ ಶಾಲಾ ವಿಭಾಗದಲ್ಲಿ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತ ಚೆನ್ನಾಗಿದೆ. ಪ್ರಾಥಮಿಕ ವಿಭಾಗದಲ್ಲಿ ಸ್ವಲ್ಪ ಕಡಿಮೆಯಿದೆ. ಹೊಸ ಶಿಕ್ಷಕರ ನೇಮಕಾತಿಯಿಂದ ಇದು ಸರಿಯಾಗಲಿದೆ. ಶಾಲೆ ಮುಚ್ಚಿರುವ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ..
-ಮಲ್ಲೇಸ್ವಾಮಿ, ಡಿಡಿಪಿಐ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ