Fishing: ಮೀನುಗಾರಿಕೆ ಬಂದರು ಹೂಳೆತ್ತಲು 125 ಕೋಟಿ ರೂ. ಮೀಸಲಿಡಲು ಆಗ್ರಹ


Team Udayavani, Nov 12, 2023, 12:33 AM IST

FISHERMAN

ಬೆಂಗಳೂರು: ರಾಜ್ಯದ ಬಹುತೇಕ ಮೀನುಗಾರಿಕೆ ಬಂದರುಗಳಲ್ಲಿ ಹೂಳು ತುಂಬಿಕೊಂಡಿದ್ದು, ಹೂಳೆತ್ತಲು ಕ್ರಮ ತೆಗೆದುಕೊಳ್ಳಬೇಕು ಹಾಗೂ 5 ವರ್ಷಗಳಿಗೆ ಕನಿಷ್ಠ 125 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಬೇಕು ಎಂದು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಗೆ ಕರ್ನಾಟಕ ಒಳನಾಡು ಜಲಸಾರಿಗೆ ಮಂಡಳಿ ಸಿಇಒ ಪತ್ರ ಬರೆದಿದ್ದಾರೆ.

ಇದಿಷ್ಟೇ ಅಲ್ಲದೆ, ಬಂದರುಗಳಿಂದ ಬರುವ ಆದಾಯವನ್ನು ಸರಕಾರಕ್ಕೆ ಕೊಡಲಾಗುತ್ತಿದ್ದು, ಇದನ್ನು ಮಂಡಳಿಗೇ ಬಿಟ್ಟುಕೊಡುವಂತೆ ಆರ್ಥಿಕ ಇಲಾಖೆಗೂ ಪತ್ರ ಬರೆದು ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹೊನ್ನಾವರ, ಭಟ್ಕಳ, ತದ್ರಿ, ಬೇಲೇಕೇರಿ, ಉಡುಪಿ ಜಿಲ್ಲೆಯ ಗಂಗೊಳ್ಳಿ, ಮಲ್ಪೆ, ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೀನುಗಾರಿಕೆ ಬಂದರುಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ-ಕೋಟೆಪುರ, ಬೊಳ್ಳೂರು-ಬೊಕ್ಕಪಟ್ಟಣಂ, ಮೂಲ್ಕಿ, ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ, ಹಂಗಾರಕಟ್ಟೆ, ಕೋಡಿಬೇಂಗ್ರೆ, ಕೋಡಿ ಕನ್ಯಾನ, ಬೊಬ್ಬರ್ಯ ಪದ, ಕುಂದಾಪುರ ಕೋಡಿ, ಮರವಂತೆ, ಕೊಡೇರಿ, ಶೀರೂರು, ತೆಂಗಿನಗುಂಡಿ, ಅಳ್ವೆಕೋಡಿ, ಬೆಳ್ಕೆ, ಉತ್ತರ ಕನ್ನಡ ಜಿಲ್ಲೆಯ ವನ್ನಾಳಿ, ಕಾಗಲ್‌, ಗಂಗಾವಳಿ, ಸಸಿಹಿತ್ಲು, ಹೆಗಡೆ ಅಂಬಿಕಾಗಿರಿ, ಕಿಮ್ಮನಿ ಹೊರಭಾಗ, ಅಳ್ವೆದಂಡೆ, ಮಂಜುಗುಣಿ ಸಹಿತ 25 ಮೀನುಗಾರಿಕೆ ಇಳಿದಾಣ ಕೇಂದ್ರ ಗಳಲ್ಲೂ ಹೂಳು ತುಂಬಿಕೊಂಡಿದೆ.

ಇದರಿಂದ ಮೀನುಗಾರಿಕೆಗೆ ಅಪಾರ ತೊಂದರೆಯಾಗುತ್ತಿದ್ದು, ಮೀನುಗಾರರ ದೋಣಿಗಳಿಗೆ ಅಪಾರ ಹಾನಿಯಾಗುತ್ತಿರುವುದೂ ಅಲ್ಲದೆ, ಆದಾಯ ಕೂಡ ಕುಂಠಿತವಾಗುತ್ತಿದೆ. ಬಂದರುಗಳ ವಾರ್ಷಿಕ ನಿರ್ವಹಣೆ ಮಾಡದಿರುವುದೇ ಈ ಸಮಸ್ಯೆಗೆ ಕಾರಣವಾಗಿದ್ದು, ಅಗತ್ಯ ಸಂಪನ್ಮೂಲದ ಕೊರತೆಯೂ ಇದೆ ಎಂಬುದನ್ನು ಮನವರಿಕೆ ಮಾಡಿಸಲು ಜಲಸಾರಿಗೆ ಮಂಡಳಿ ಪ್ರಯತ್ನಿಸಿದೆ.

ಇತ್ತೀಚೆಗೆ ಸಚಿವ ಮಂಕಾಳ ಎಸ್‌. ವೈದ್ಯ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚೆಗಳು ನಡೆದಿದ್ದು, ಎರಡೂ ಪ್ರಸ್ತಾವನೆಗಳನ್ನು ಸರಕಾರಕ್ಕೆ ಸಲ್ಲಿಸಲಾಗಿದೆ.

125 ಕೋಟಿ ರೂ. ಕೊಡಿ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಲ್ಪೆ, ಹೊನ್ನಾವರ, ಭಟ್ಕಳ, ಕುಂದಾಪುರ, ಬೇಲೆಕೇರಿ ಬಂದರುಗಳ ಹೂಳೆತ್ತುವ ಕಾರ್ಯ ಕೈಗೊಳ್ಳುವುದಾಗಿ ಸಿಎಂ ಪ್ರಕಟಿಸಿ ದ್ದರು. ಇದುವರೆಗೆ ಈ ಕಾಮಗಾರಿ ಆರಂಭ ವಾಗಿಲ್ಲ. ಹೂಳೆತ್ತುವ ಕಾಮಗಾರಿಯನ್ನು ವಹಿಸಲು ಅರ್ಹ ಖಾಸಗಿ ಗುತ್ತಿಗೆದಾರರನ್ನು ಆಯ್ಕೆ ಮಾಡಲು ಪಾರದರ್ಶಕ ಕಾಯ್ದೆ ಯಿಂದ ಮಂಡಳಿಗೆ ವಿನಾಯಿತಿ ನೀಡ ಬೇಕು. ಹೂಳಿನ ನಿರ್ವಹಣೆಗಾಗಿ ತಾಂತ್ರಿಕ ನೆರವು ಪಡೆಯಲು ಮಂಡಳಿಗೆ ಅನುಕೂಲ ಮಾಡಿಕೊಡಬೇಕು. ಜಿಎಸ್‌ಟಿ ಒಳಗೊಂಡು 5 ವರ್ಷಗಳಿಗೆ ಕನಿಷ್ಠ 125 ಕೋಟಿ ರೂ. ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಬೇಕು ಎಂದು ಒತ್ತಾಯಿಸಲಾಗಿದೆ.

ಆದಾಯ ನಮಗೇ ನೀಡಿ
ಬಂದರುಗಳ ಮೂಲಕ ಜಲಸಾರಿಗೆ ಮಂಡಳಿ ಸಂಪಾದಿ ಸುತ್ತಿರುವ ಆದಾಯವನ್ನು ಸರಕಾರಕ್ಕೆ ಸಲ್ಲಿಸಲಾಗುತ್ತಿದ್ದು, ಇದರಿಂದ ಮಂಡಳಿಯ ಅನೇಕ ಕಾರ್ಯಗಳಿಗೆ ಹಣ ಇಲ್ಲದಂತಾಗಿದೆ. ವಾರ್ಷಿಕ ಸರಾಸರಿ 35 ಕೋಟಿ ರೂ.ಗಳನ್ನು ಸರಕಾರಕ್ಕೆ ಸಲ್ಲಿಸಲಾಗುತ್ತಿದ್ದು, ಕಂದಾಯ ವೆಚ್ಚಕ್ಕೆ 20 ಕೋಟಿ ರೂ. ಖರ್ಚಾಗುತ್ತಿದೆ. ಇದರಿಂದ ವಾರ್ಷಿಕ ನಿರ್ವಹಣೆ ಕಷ್ಟವಾಗುತ್ತಿದ್ದು, ಬಂದರು ಮೂಲಕ ಬರುವ ಆದಾಯವನ್ನು ಮಂಡಳಿಗೇ ಬಿಟ್ಟುಕೊಡುವಂತೆ ಆರ್ಥಿಕ ಇಲಾಖೆಗೆ ಮನವಿ ಮಾಡಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.