14 ಮಂದಿ ಹೆಚ್ಚುವರಿ ಸಬ್‌ ಇನ್‌ಸ್ಪೆಕ್ಟರ್‌ ಸೇರ್ಪಡೆ


Team Udayavani, Apr 24, 2020, 5:07 AM IST

14 ಮಂದಿ ಹೆಚ್ಚುವರಿ ಸಬ್‌ ಇನ್‌ಸ್ಪೆಕ್ಟರ್‌ ಸೇರ್ಪಡೆ

ಸಾಂದರ್ಭಿಕ ಚಿತ್ರ...

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣ, ಪತ್ತೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಮೂಲಕ ಉತ್ತಮ ಪೊಲೀಸ್‌ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ಇತ್ತೀಚೆಗೆ 14 ಮಂದಿ ಹೆಚ್ಚುವರಿ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ನೇಮಕ ಮಾಡಲಾಗಿದೆ.

ಈ ಪೈಕಿ ಉಳ್ಳಾಲ ಪೊಲೀಸ್‌ ಠಾಣೆಗೆ ಅತ್ಯಧಿಕ ಎಂದರೆ 4 ಹೆಚ್ಚುವರಿ ಸಬ್‌ ಇನ್‌ಸ್ಪೆಕ್ಟರ್‌ಗಳ ನೇಮಕವಾಗಿದೆ. ಇದರೊಂದಿಗೆ ಈ ಪೊಲೀಸ್‌ ಠಾಣೆಯ ಒಟ್ಟು ಸಬ್‌ ಇನ್‌ಸ್ಪೆಕ್ಟರ್‌ಗಳ ಬಲ 6ಕ್ಕೇರಿದೆ.

ಕೊಣಾಜೆ ಠಾಣೆಗೆ 2, ಬಂದರ್‌, ಕದ್ರಿ, ಬರ್ಕೆ, ಕಾವೂರು, ಬಜಪೆ, ಸುರತ್ಕಲ್‌, ಮಂಗಳೂರು ಗ್ರಾಮಾಂತರ, ಮೂಡುಬಿದಿರೆ ಪೊಲೀಸ್‌ ಠಾಣೆಗಳಿಗೆ ತಲಾ ಓರ್ವ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ಹೆಚ್ಚುವರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಮೂಡುಬಿದಿರೆ ಠಾಣೆಯಲ್ಲಿ ಪಿಎಸ್‌ಐ ಇರಲಿಲ್ಲ. ಇನ್‌ಸ್ಪೆಕ್ಟರ್‌ ಮಾತ್ರ ಇದ್ದರು. ಇದೀಗ ಓರ್ವ ಪಿಎಸ್‌ಐ ನೇಮಕಗೊಂಡಿದ್ದಾರೆ. ಉರ್ವ ಮತ್ತು ಮಹಿಳಾ (ಪಾಂಡೇಶ್ವರ) ಠಾಣೆಗಳಲ್ಲಿ ಈ ಹಿಂದೆ ತಲಾ ಓರ್ವ ಪಿಎಸ್‌ಐ ಇದ್ದು, ಈ ಠಾಣೆಗಳಿಗೆ ಹೆಚ್ಚುವರಿ ಪಿಎಸ್‌ಐ ನೇಮಕ ಮಾಡಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಈ ಹಿಂದೆ 3 ಜನ ಪಿಎಸ್‌ಐಗಳಿದ್ದು, ಅಲ್ಲಿಗೂ ಹೆಚ್ಚುವರಿ ಪಿಎಸ್‌ಐ ನೇಮಕ ಮಾಡಲಾಗಿಲ್ಲ.

ಪ್ರಸ್ತುತ ಉಳ್ಳಾಲದಲ್ಲಿ 6 ಮಂದಿ, ಪಾಂಡೇಶ್ವರ, ಬಂದರ್‌, ಗ್ರಾಮಾಂತರ, ಕೊಣಾಜೆ ಠಾಣೆಗಳಲ್ಲಿ ತಲಾ 3 ಮಂದಿ, ಕದ್ರಿ, ಬರ್ಕೆ, ಕಂಕನಾಡಿ ನಗರ, ಪಣಂಬೂರು, ಕಾವೂರು, ಬಜಪೆ, ಸುರತ್ಕಲ್‌, ಮೂಲ್ಕಿ, ಟ್ರಾಫಿಕ್‌ ಉತ್ತರ, ಟ್ರಾಫಿಕ್‌ ದಕ್ಷಿಣ, ಟ್ರಾಫಿಕ್‌ ಪೂರ್ವ ಮತ್ತು ಟ್ರಾಫಿಕ್‌ ಪಶ್ಚಿಮ ಠಾಣೆಗಳಲ್ಲಿ ತಲಾ ಇಬ್ಬರು, ಉರ್ವ, ಮಹಿಳಾ ಮತ್ತು ಮೂಡುಬಿದಿರೆ ಠಾಣೆಗಳಲ್ಲಿ ತಲಾ ಓರ್ವ ಪಿಎಸ್‌ಐಗಳು ಇರುವಂತಾಗಿದೆ.

ಅಂದರೆ ಈಗ ಪೊಲೀಸ್‌ ಕಮಿಷನರೆಟ್‌ನ ಒಟ್ಟು 20 ವಿವಿಧ ಪೊಲೀಸ್‌ ಠಾಣೆಗಳು 45 ಮಂದಿ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ಹೊಂದಿದಂತಾಗಿದೆ. ಈ ಹಿಂದೆ ಒಟ್ಟು 31 ಜನ ಪಿಎಸ್‌ಐಗಳಿದ್ದರು.

ಸೂಕ್ಷ್ಮ , ವಿಶಾಲ ಪ್ರದೇಶ
ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿ ಬಹಳಷ್ಟು ದೊಡ್ಡದಾಗಿದ್ದು, ಈ ಪ್ರದೇಶದಲ್ಲಿ ಇತರ ಎಲ್ಲ ಠಾಣೆಗಳಿಗಿಂತ ಜನಸಂಖ್ಯೆ ಜಾಸ್ತಿ ಇದೆ. ಅಲ್ಲದೆ ಇದು ಸೂಕ್ಷ್ಮಪ್ರದೇಶ ಕೂಡಾ ಆಗಿದೆ. ಅದನ್ನು ಗಮನಿಸಿ ಈ ಪೊಲೀಸ್‌ ಠಾಣೆಗೆ 6 ಮಂದಿ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ನೇಮಕ ಮಾಡಲಾಗಿದೆ
 - ಡಾ | ಹರ್ಷ ಪಿ.ಎಸ್‌., ಮಂಗಳೂರು ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.