Karnataka: ಒಂದೂವರೆ ವರ್ಷದಲ್ಲಿ 142 ಕೋಟಿ ರೂ. ಸೈಬರ್‌ ವಂಚನೆ

ಬೆಂಗಳೂರಿನ 15 ಮಂದಿಗೆನಿತ್ಯ ಲಕ್ಷಾಂತರ ರೂ. ವಂಚನೆ-ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗದೆ ಖಾಕಿ ಸೈಲೆಂಟ್‌

Team Udayavani, Oct 14, 2023, 6:17 PM IST

cyber fraud

ಬೆಂಗಳೂರು: ಒಂದೂವರೆ ವರ್ಷದಲ್ಲಿ ರಾಜಧಾನಿ ಬೆಂಗಳೂರಿಗರ 141.94 ಕೋಟಿ ರೂ. ಸೈಬರ್‌ ವಂಚಕರ ಪಾಲಾಗಿರುವುದು ಆತಂಕ ಹುಟ್ಟಿಸಿದೆ.
ಪ್ರತಿ ನಿತ್ಯ ಸರಾಸರಿ 15 ಮಂದಿ ಬೆಂಗಳೂರಿಗರು ಸೈಬರ್‌ ಕಳ್ಳರ ಗಾಳಕ್ಕೆ ಸಿಲುಕಿ ಲಕ್ಷಾಂತರ ರೂ. ಕಳೆದುಕೊಳ್ಳುತ್ತಿದ್ದಾರೆ. ವಂಚನೆಗೊಳಗಾದ ಸಾವಿರಾರು ಸಂತ್ರಸ್ತರು ಸೈಬರ್‌ ಕ್ರೈಂ ಠಾಣೆಗೆ ಅಲೆದು ದುಡ್ಡು ಮರಳಿ ಸಿಗುವ ನಿರೀಕ್ಷೆಯನ್ನು ಕಳೆದುಕೊಂಡಿದ್ದಾರೆ. ಬೆಂಗಳೂರೊಂದರಲ್ಲೇ 2022ರಲ್ಲಿ 76.94 ಕೋಟಿ ರೂ. ಹಾಗೂ 2023ರಲ್ಲಿ ಕಳೆದ 6 ತಿಂಗಳಿನಲ್ಲೇ 65 ಕೋಟಿ ರೂ. ಸೈಬರ್‌ ಕಳ್ಳರ ಪಾಲಾಗಿದೆ.

ಇತ್ತ ಎಫ್ಐಆರ್‌ ದಾಖಲಿಸಿಕೊಂಡಿರುವ ಖಾಕಿ ಕಾರ್ಯಾಚರಣೆ ನಡೆಸದೇ ಸೈಲೆಂಟ್‌ ಆಗಿದ್ದು, ಸಂತ್ರಸ್ತರ ಗೋಳು ಕೇಳುವವರೇ ಇಲ್ಲದಂತಾಗಿದೆ. ಸಿಲಿಕಾನ್‌ ಸಿಟಿಯಲ್ಲಿ 2017ರಿಂದ ಈಚೆಗೆ 50,027 ಸೈಬರ್‌ ವಂಚನೆಗಳು ನಡೆದರೂ ಶಿಕ್ಷೆಯಾಗಿರುವುದು ಕೇವಲ 26 ವಂಚಕರಿಗೆ ಮಾತ್ರ.

ಏನಿದು ಪಾರ್ಟ್‌ ಟೈಂ ಜಾಬ್‌ ವಂಚನೆ?
ಬೆಂಗಳೂರಿನಲ್ಲಿ ಕಳೆದ 4 ತಿಂಗಳಿಂದ ಪಾರ್ಟ್‌ ಟೈಂ ಉದ್ಯೋಗದ ಹೆಸರಲ್ಲಿ ನಡೆಯುತ್ತಿರುವ ಸೈಬರ್‌ ವಂಚನೆ ಮಿತಿ ಮೀರಿದ್ದು, ಇದರ ಪ್ರಮಾಣ ಶೇ.75ರಷ್ಟಿದೆ ಎಂದು ಸೈಬರ್‌ ಕ್ರೈಂ ಪೊಲೀಸ್‌ ಮೂಲಗಳು ತಿಳಿಸಿವೆ. ಪಾರ್ಟ್‌ ಟೈಂ ಉದ್ಯೋಗ ಕೊಡಿಸುವ ನೆಪದಲ್ಲಿ ಸೈಬರ್‌ ಕಳ್ಳರು ಮೊಬೈಲ್‌ಗೆ ಕಳುಹಿಸುವ ಸಂದೇಶಗಳಿಗೆ ಮರುಳಾಗಿ ಪ್ರತಿಕ್ರಿಯಿಸಿದರೆ ಕೂಡಲೇ ನಿಮ್ಮನ್ನು ಅವರ ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿಸುತ್ತಾರೆ.

ಲಿಂಕ್‌ ಮೂಲಕ ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ನಿಮ್ಮನ್ನು ರಿಜಿಸ್ಟ್ರಾರ್‌ ಮಾಡಿಸುವುದಾಗಿ ಹೇಳುತ್ತಾರೆ. ಇದಕ್ಕೆ ನೀವು ಸಮ್ಮತಿಸಿದರೆ, ತಾವು ಸೂಚಿಸುವ ಖಾತೆಗೆ ಲಕ್ಷಾಂತರ ರೂ. ಜಮೆ ಮಾಡಿದರೆ ಟಾಸ್ಕ್ಗಳ ಮೂಲಕ ಹಣ ದ್ವಿಗುಣಗೊಳಿಸಬಹುದು ಎಂದು ನಂಬಿಸುತ್ತಾರೆ. ದುಡ್ಡು ಪಾವತಿಸಿದ ಕೂಡಲೇ ಕಮಿಷನ್‌ ರೂಪದಲ್ಲಿ ಸ್ವಲ್ಪ ದುಡ್ಡು ನಿಮ್ಮ ಖಾತೆಗೆ ಜಮೆಯಾಗುತ್ತದೆ. ಇದಾದ ಬಳಿಕ ಸೈಬರ್‌ ಕಳ್ಳರು ಅಸಲಿ ಆಟ ಆರಂಭಿಸುತ್ತಾರೆ. ನಿಮ್ಮ ಅಸಲು ದುಡ್ಡು ಡ್ರಾ ಮಾಡಬೇಕಾದರೆ ಇನ್ನಷ್ಟು ಹಣ ಜಮೆ ಮಾಡುವಂತೆ ಪೀಡಿಸಿ ಹಂತ-ಹಂತವಾಗಿ ಲಕ್ಷಾಂತರ ರೂ. ಲಪಟಾಯಿಸುತ್ತಾರೆ. ಇದಾದ 3-4 ದಿನಗಳ ಬಳಿಕ ಸೈಬರ್‌ ಕಳ್ಳರು ಸಂಪರ್ಕಕ್ಕೆ ಸಿಗುವುದಿಲ್ಲ.

ಬೆಂಗಳೂರೇ ಸೈಬರ್‌ ಕಳ್ಳರ ಟಾರ್ಗೆಟ್‌
ಉತ್ತರ ಭಾರತದ ರಾಜಸ್ಥಾನ, ಝಾರ್ಖಂಡ್‌, ಗುಜರಾತ್‌, ಪಶ್ಚಿಮ ಬಂಗಾಲ, ದಿಲ್ಲಿ, ಮುಂಬಯಿ, ಬಿಹಾರ ರಾಜ್ಯಗಳ ಗ್ರಾಮೀಣ ಭಾಗಗಳಲ್ಲೇ ಕುಳಿತುಕೊಂಡು ಆನ್‌ಲೈನ್‌ ಮೂಲಕ ಸೈಬರ್‌ ಕಳ್ಳರು ಬೆಂಗಳೂರಿಗರ ದುಡ್ಡು ದೋಚುವ ಸಂಗತಿ ಜಗಜ್ಜಾಹೀರಾಗಿದೆ. ದೇಶದಲ್ಲೇ ಅತ್ಯಧಿಕ ಟೆಕಿಗಳು, ಖಾಸಗಿ ಕಂಪೆನಿ ಉದ್ಯೋಗಿಗಳನ್ನು ಒಳಗೊಂಡಿರುವ ಐಟಿ-ಬಿಟಿ ಸಿಟಿಯೇ ಇವರ ಹಾಟ್‌ಸ್ಪಾಟ್‌. ಎಂಜಿನಿಯರಿಂಗ್‌, ಎಂ.ಟೆಕ್‌. ಪದವೀಧರರೇ ಈ ಸೈಬರ್‌ ಗ್ಯಾಂಗ್‌ನ ಸೂತ್ರಧಾರರು. ಪಿಯು ವ್ಯಾಸಂಗ ಮೊಟಕುಗೊಳಿಸಿದವರಿಗೆ ತರಬೇತಿ ಕೊಟ್ಟು ಈ ದಂಧೆಗೆ ವೇತನದ ಆಧಾರದಲ್ಲಿ ನೇಮಿಸಿಕೊಳ್ಳುತ್ತಾರೆ. ಸಾಫ್ಟ್ವೇರ್‌ ಎಂಜಿನಿಯರ್‌ಗಳೂ ತಮ್ಮ ಅರಿವಿಗೆ ಬಾರದೇ ಸೈಬರ್‌ ಕಳ್ಳರಿಗೆ ನೆರವಾಗುತ್ತಿದ್ದಾರೆ. ಡಾಟಾ ಅನಲೀಸಿಸ್‌ ಮಾಡಿ ಬೆಂಗಳೂರಿಗರ ಮೊಬೈಲ್‌ ನಂಬರ್‌ ಪತ್ತೆ ಹಚ್ಚಲೆಂದೇ ಸೈಬರ್‌ ಕಳ್ಳರಲ್ಲಿ ಪ್ರತ್ಯೇಕ ತಂಡವಿದೆ. ಕರೆ ಮಾಡಿ ಟ್ರ್ಯಾಪ್‌ ಮಾಡುವುದೇ ಬೇರೆ ತಂಡ ಎಂದು ಸೈಬರ್‌ ಕ್ರೈಂ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುವ ವಂಚಕರು
ಬೆಂಗಳೂರು ಪೊಲೀಸರು ಪಾರ್ಟ್‌ ಟೈಂ ಜಾಬ್‌ ವಂಚನೆಯ ಜಾಡು ಹಿಡಿಯುವ ನಿಟ್ಟಿನಲ್ಲಿ ಕೆಲವು ತಿಂಗಳ ಹಿಂದೆ ಕಾರ್ಯಾಚರಣೆಗೆ ಇಳಿದಾಗ ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಸೈಬರ್‌ ಕಳ್ಳರ ಟವರ್‌ ಲೊಕೇಶನ್‌ ಪತ್ತೆಯಾಗಿತ್ತು. ಪೊಲೀಸರು ಜಿಯೋ ಲೊಕೇಶನ್‌ ಮೂಲಕ ಉತ್ತರ ಭಾರತಕ್ಕೆ ತೆರಳಿ ಅಲ್ಲಿನ ಪೊಲೀಸರನ್ನು ಸಂಪರ್ಕಿಸಿದರೆ ಈ ಲೊಕೇಶನ್‌ ನಮ್ಮಲ್ಲಿ ಬರುವುದಿಲ್ಲ ಎಂದು ಪಕ್ಕದ ರಾಜ್ಯಗಳತ್ತ ಬೊಟ್ಟು ಮಾಡಿ ಸಾಗಹಾಕಿದ್ದರು. ಇಲ್ಲಿನ ಪೊಲೀಸರು ತಾಂತ್ರಿಕ ತನಿಖೆ ನಡೆಸಿದಾಗ, ವಂಚಕರು ಒಂದು ರಾಜ್ಯದಲ್ಲಿ ನಕಲಿ ದಾಖಲೆ ಮೂಲಕ ಸಿಮ್‌ ಖರೀದಿಸಿ, ಮತ್ತೂಂದು ರಾಜ್ಯದಲ್ಲಿ ಕುಳಿತುಕೊಂಡು ಕೃತ್ಯ ಎಸಗುತ್ತಾರೆ. ಪೊಲೀಸರ ಕಣ್ತಪ್ಪಿಸಲೆಂದೇ ಸೈಬರ್‌ ವಂಚಕರು ಈ ಆಟವಾಡುತ್ತಾರೆ. ಅನಂತರ ಅಲ್ಲಿಂದಲೂ ಪರಾರಿಯಾಗಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದಾರೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.

ಬೆಂಗಳೂರಿನ ಸೈಬರ್‌ ಕ್ರೈಂ ಪ್ರಕರಣಗಳ ಅಂಕಿ-ಅಂಶಗಳು
ವರ್ಷ      ಕೇಸ್‌             ಇತ್ಯರ್ಥ
2017         2,742             895
2018         5252             1,393
2019         10,553          2,602
2020        8892            3,308
2021         6422            2145
2022        9940            1536
2023(ಆ)   6426          19

ಬೆಂಗಳೂರಿನಲ್ಲಿ ಸೈಬರ್‌ ಅಪರಾಧಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಎಲ್ಲ ಪೊಲೀಸ್‌ ಠಾಣೆಗಳಲ್ಲೂ ದೂರು ನೀಡಲು ಅವಕಾಶ ಒದಗಿಸಲಾಗಿದೆ. ವಂಚನೆಗೊಳಗಾದ ಗಂಟೆಯೊಳಗೆ 1930ಗೆ ಕರೆ ಮಾಡಿ ಮಾಹಿತಿ ನೀಡಿದರೆ ವಂಚನೆಗೊಳಗಾದವರ ದುಡ್ಡನ್ನು ಫ್ರೀಜ್‌ ಮಾಡಬಹುದು. ಟಾಸ್ಕ್ ಮೂಲಕ ಹಣ ದ್ವಿಗುಣಗೊಳಿಸುವ ಸೈಬರ್‌ ವಂಚನೆ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು.
-ಬಿ.ದಯಾನಂದ್‌, ಬೆಂಗಳೂರು ಪೊಲೀಸ್‌ ಆಯುಕ್ತ.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.