ಉಡುಪಿಯಿಂದ 1,460 ವಲಸೆ ಕಾರ್ಮಿಕರ ಯಾನ

ಉತ್ತರ ಪ್ರದೇಶಕ್ಕೆ ಶ್ರಮಿಕ್‌ ರೈಲು

Team Udayavani, May 18, 2020, 5:55 AM IST

ಉಡುಪಿಯಿಂದ 1,460 ವಲಸೆ ಕಾರ್ಮಿಕರ ಯಾನ

ಉಡುಪಿ: ಜಿಲ್ಲೆಯಿಂದ ಮೊದಲ ಶ್ರಮಿಕ್‌ ರೈಲು ರವಿವಾರ ಇಂದ್ರಾಳಿ ನಿಲ್ದಾಣದಿಂದ ಉತ್ತರ ಪ್ರದೇಶಕ್ಕೆ ಹೊರಟಿತು. 1,460 ಮಂದಿ ವಲಸೆ ಕಾರ್ಮಿಕರು ರೈಲಿನಲ್ಲಿ ತೆರಳಿದರು. ಈ ರೈಲು ಉತ್ತರ ಪ್ರದೇಶ ಬಸ್ತಿ ನಿಲ್ದಾಣವನ್ನು ಮೇ 19ರ ಬೆಳಗ್ಗೆ 6.10ಕ್ಕೆ ತಲುಪಲಿದೆ. ಮಧ್ಯದಲ್ಲಿ ನಿಲುಗಡೆ ಇರುವುದಿಲ್ಲ.

ಮಧ್ಯಾಹ್ನ 2 ಗಂಟೆಗೆ ಇಂದ್ರಾಳಿ ರೈಲು ನಿಲ್ದಾಣದ ಹೊರಗೆ ತೆರೆದ ಕೌಂಟರ್‌ನಲ್ಲಿ ಟಿಕೆಟ್‌ ನೋಂದಣಿ ನಡೆಯಿತು. ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಂಡು ಇ-ಪಾಸ್‌ ಹೊಂದಿರುವ ಉತ್ತರ ಪ್ರದೇಶ ರಾಜ್ಯದ ಜನರು ಟಿಕೆಟ್‌ ಕೌಂಟರ್‌ಗಳಲ್ಲಿ ಟಿಕೆಟ್‌ ಪಡೆದುಕೊಂಡರು.

ಉಡುಪಿ, ಬ್ರಹ್ಮಾವರ, ಕಾಪು, ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಪಾಸ್‌ ಪಡೆದಿರುವವರು ನೇರವಾಗಿ ನಿಲ್ದಾಣಕ್ಕೆ ಬಂದು ಟಿಕೆಟ್‌ ಪಡೆದು ರೈಲನ್ನೇರಿದರು. ಕಾರ್ಕಳದಿಂದ 236 ಮಂದಿ, ಕುಂದಾಪುರದಿಂದ 323 ಮಂದಿ ಉಳಿದಂತೆ ಕಾಪು, ಬ್ರಹ್ಮಾವರ ಸೇರಿ ಉಡುಪಿ ಯುನಿಟ್‌ನಲ್ಲಿ 901 ಮಂದಿ ಇದ್ದರು. ಒಬ್ಬರಿಗೆ ತಲಾ 910 ರೂ. ಪ್ರಯಾಣ ದರ ನಿಗದಿಪಡಿಸಲಾಗಿತ್ತು. ಕುಂದಾಪುರ ಮತ್ತು ಕಾರ್ಕಳದಿಂದ ರೈಲ್ವೇ ನಿಲ್ದಾಣಕ್ಕೆ ಒಟ್ಟು 14 ಕೆಎಸ್ಸಾರ್ಟಿಸಿ ಬಸ್‌ಗಳಿಂದ ಕಾರ್ಮಿಕರನ್ನು ಕರೆತರಲಾಯಿತು.

600 ಮಂದಿಗೆ ನಿರಾಸೆ
ಹೆಚ್ಚುವರಿಯಾಗಿ ತೆರಳಲು ಅವಕಾಶ ಇದೆ ಎಂದು ತಿಳಿದು ಜಿಲ್ಲೆಯ ಬೇರೆ ಬೇರೆ ಭಾಗದಿಂದ ಕಾರ್ಮಿಕರು ಖಾಸಗಿ ವಾಹನಗಳ ಮೂಲಕ ರೈಲು ನಿಲ್ದಾಣದಲ್ಲಿ ನೆರೆದ ಘಟನೆ ನಡೆಯಿತು. ಇದರಲ್ಲಿ ಸೇವಾಸಿಂಧುವಿನಲ್ಲಿ ಅನುಮತಿ ಪತ್ರ ಪಡೆಯದ, ಅಪ್‌ಲೋಡ್‌ ಮಾಡಿ ನೋಂದಣಿ ಆಗದ ಮಂದಿ ನೋಂದಣಿ ಮಾಡಿದ್ದೇವೆ ಎಂದು ಯಾವುದೇ ದಾಖಲೆ ಇಲ್ಲದೆ ಬಂದಿದ್ದರು. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳು ರೈಲಿನಲ್ಲಿ ಈಗಾಗಲೇ ನಿಗದಿಯಾದ ಸೀಟು ಭರ್ತಿಯಾಗಿದ್ದು ಮುಂದಿನ ದಿನದಲ್ಲಿ ತೆರಳಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಸ್ಥಳದಲ್ಲಿ ನೆರೆದಿದ್ದ ಸುಮಾರ 600 ಮಂದಿಯನ್ನು ಹಿಂದೆ ಕಳುಹಿಸಿದ ಘಟನೆಯೂ ನಡೆಯಿತು.

ನಿಲ್ದಾಣದಲ್ಲಿ ಸೇರಿದವರಿಗೆ ಜಿಲ್ಲಾಡಳಿತದ ಸೂಚನೆ ಮೇರೆಗೆ ಶಾಸಕ ರಘುಪತಿ ಭಟ್‌, ರಾಘವೇಂದ್ರ ಕಿಣಿ ನೇತೃತ್ವದ ಕಡಿಯಾಳಿ ಗಣೇಶೋತ್ಸವ ಸಮಿತಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿತು. ರಘುಪತಿ ಭಟ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಶೀಲ್ದಾರರಾದ ಉಡುಪಿಯ ಪ್ರದೀಪ ಕುರ್ಡೇಕರ್ ‌, ಕಾಪುವಿನ ಮೊಹಮ್ಮದ್‌ ಐಸಾಕ್‌, ಡಿವೈಎಸ್‌ಪಿ ಜೈಶಂಕರ್‌, ಸರ್ಕಲ್‌ ಇನ್‌ಸ್ಪೆಕ್ಟರ್‌ ಮಂಜುನಾಥ್‌ ಉಸ್ತುವಾರಿ ವಹಿಸಿದ್ದರು.

ಇನ್ನಷ್ಟು ರೈಲಿಗೆ ವ್ಯವಸ್ಥೆ
ಜಿಲ್ಲೆಯಲ್ಲಿ ಮಧ್ಯಪ್ರದೇಶ 379, ಒಡಿಶಾ 780, ಪಶ್ಚಿಮ ಬಂಗಾಲ 977, ಬಿಹಾರ 1,600, ಛತ್ತೀಸ್‌ಗಢ್‌ 280, ರಾಜಸ್ಥಾನ 379, ಝಾರ್ಖಂಡ್‌ 1.712, ಅಸ್ಸಾಂ 338, ಉತ್ತರಾಖಂಡದ 110 ಮಂದಿ ಸೇವಾಸಿಂಧು ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶ, ಉತ್ತರಾಂಚಲ, ಮಧ್ಯಪ್ರದೇಶ, ಝಾರ್ಖಂಡಗೆ ರೈಲು ವ್ಯವ್ಯಸ್ಥೆಗೆ ಪ್ರಯತ್ನ ಮಾಡಲಾಗುತ್ತಿದೆ.
ಸದಾಶಿವ ಪ್ರಭು, ಎಡಿಸಿ ಉಡುಪಿ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.