156 ವರ್ಷದ ಕಟ್ಟಡ ನೆಲಸಮ ಪ್ರಕರಣ: ವರದಿ ನೀಡುವಂತೆ ಡಿಸಿ ಸೂಚನೆ


Team Udayavani, Dec 15, 2021, 6:15 AM IST

156 ವರ್ಷದ ಕಟ್ಟಡ ನೆಲಸಮ ಪ್ರಕರಣ: ವರದಿ ನೀಡುವಂತೆ ಡಿಸಿ ಸೂಚನೆ

ಪುತ್ತೂರು: ಡಾ| ಕೆ. ಶಿವರಾಮ ಕಾರಂತರು ನಾಟ್ಯ ತರಬೇತಿ ನೀಡುತ್ತಿದ್ದ 156 ವರ್ಷ ಹಳೆಯ ಕಟ್ಟಡವನ್ನು ರಾತೋರಾತ್ರಿ ನೆಲಸಮ ಮಾಡಿರುವ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿ ಅವರು ಡಿಡಿಪಿಐ ಹಾಗೂ ಜಿ.ಪಂ. ಸಿಇಒಗೆ ಸೂಚನೆ ನೀಡಿದ್ದಾರೆ.

ಪುತ್ತೂರಿನ ಹೃದಯ ಭಾಗದ ನೆಲ್ಲಿಕಟ್ಟೆಯಲ್ಲಿರುವ ಸರಕಾರಿ ಶಾಲೆಯ ಪ್ರಾಚೀನ ಕಟ್ಟಡ ಇದಾಗಿದ್ದು ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ| ಕೆ. ಶಿವರಾಮ ಕಾರಂತರು 83 ವರ್ಷಗಳ ಹಿಂದೆ ಅಲ್ಲಿ ನಾಟ್ಯ ನಿರ್ದೇಶನ ಮಾಡುತ್ತಿದ್ದರು. ಕಟ್ಟಡ ಸುರಕ್ಷಿತವಲ್ಲ ಎಂಬ ಕಾರಣಕ್ಕೆ ಎಸ್‌ಡಿಎಂಸಿ ನಿರ್ಣಯ ಕೈಗೊಂಡು ಡಿ. 11ರಂದು ಜೆಸಿಬಿ ಬಳಸಿ ನೆಲಸಮ ಮಾಡಲಾಗಿತ್ತು. ಇದು ಕಾರಂತರ ಅಭಿಮಾನಿಗಳ ಸಹಿತ ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಇಒ ನೋಟಿಸ್‌
ಜಿಲ್ಲಾಧಿಕಾರಿ ಸೂಚನೆಯಂತೆ ಡಿಡಿಪಿಐ ಅವರು ಘಟನೆಯ ಬಗ್ಗೆ ವರದಿ ನೀಡುವಂತೆ ಬಿಇಒಗೆ ಸೂಚಿಸಿದ್ದಾರೆ. ಬಿಇಒ ಲೋಕೇಶ್‌ ಎಸ್‌ಡಿಎಂಸಿ ಹಾಗೂ ಮುಖ್ಯ ಗುರುಗಳಿಗೆ ನೋಟಿಸ್‌ ನೀಡಿ ತೆರವಿಗೆ ಕಾರಣದ ಬಗ್ಗೆ ವರದಿ ನೀಡುವಂತೆ ನಿರ್ದೇಶಿಸಿದ್ದಾರೆ.

ಎಸ್‌ಡಿಎಂಸಿಗೆ ಅಧಿಕಾರ ಇಲ್ಲ
ಪಾರಂಪರಿಕ ಶಾಲಾ ಕಟ್ಟಡದ ದುರಸ್ತಿ, ನಿರ್ವಹಣೆ, ಸಂರಕ್ಷಣೆ, ಸುರಕ್ಷೆ ಬಗ್ಗೆ ಡಿಡಿಪಿಐಗೆ ಶಾಲಾ ಎಸ್‌ಡಿಎಂಸಿಯು ಬಿಇಒ ಮೂಲಕ ಮಾಹಿತಿ ನೀಡಬೇಕು. ಅವರು ತಾಂತ್ರಿಕ ಪರಿಣಿತರನ್ನು ಕಳುಹಿಸಿ ವರದಿ ಪಡೆದುಕೊಂಡು ಅಗತ್ಯ ಕಾಮಗಾರಿಗಾಗಿ ರಾಜ್ಯ ವಿದ್ಯಾಂಗ ನಿರ್ದೇಶಕರಿಗೆ ಮನವರಿಕೆ ಮಾಡಬೇಕು. ಕಟ್ಟಡ ಅಪಾಯದಲ್ಲಿದೆ ಎಂದು ಏಕಾಏಕಿ ನೆಲಸಮ ಮಾಡುವ ಅಧಿಕಾರ ಶಾಲಾ ಎಸ್‌ಡಿಎಂಸಿಗೆ ಇಲ್ಲ. ಆದ್ದರಿಂದ ಪುರಾತನ ಕಟ್ಟಡ ನೆಲಸಮ ಕಾನೂನು ಬಾಹಿರ ಎನ್ನುವುದು ಅನೇಕರ ವಾದ.

ಇದನ್ನೂ ಓದಿ:ರಾಷ್ಟ್ರಪತಿ ರಾಮನಾಥ ಕೋವಿಂದ್‌ 3 ದಿನಗಳ ಕಾಲ ಬಾಂಗ್ಲಾ ಪ್ರವಾಸ

ಕಟ್ಟಡ ನೆಲಸಮ ವಿಚಾರ ಗಮನಕ್ಕೆ ಬಂದಿದೆ. ಪಾರಂಪರಿಕ ಕಟ್ಟಡವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವ ಬದಲು ಯಾಕೆ ನೆಲಸಮ ಮಾಡಲಾಗಿದೆ ಎನ್ನುವ ಬಗ್ಗೆ ವರದಿ ಪಡೆದುಕೊಂಡು ಕ್ರಮದ ಕುರಿತು ನಿರ್ಧರಿಸಲಾಗುವುದು.
– ಡಾ| ಕೆ.ವಿ. ರಾಜೇಂದ್ರ,
ದ.ಕ. ಜಿಲ್ಲಾಧಿಕಾರಿ

ಕೆಡಹುವ ಬಗ್ಗೆ ನಮಗೆ ಯಾವುದೇ ಮಾಹಿತಿ ನೀಡಿಲ್ಲ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕಚೇರಿಗಳು ಅಲ್ಲೇ ಇದ್ದರೂ ಅವರಿಗೂ ಮಾಹಿತಿ ಇಲ್ಲ. ಈ ಕಟ್ಟಡ ಸರಕಾರದ ಆಸ್ತಿ ಆಗಿತ್ತು. ನಿಯಮ ಉಲ್ಲಂಘನೆ ವಿರುದ್ಧ ಕಾನೂನು ಕ್ರಮಕ್ಕೆ ಅವಕಾಶ ಇದೆ.
– ಡಾ| ಯತೀಶ್‌ ಉಳ್ಳಾಲ್‌,
ಸಹಾಯಕ ಆಯುಕ್ತ, ಪುತ್ತೂರು ಉಪವಿಭಾಗ

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.