ದೇಶದಲ್ಲಿ 17 ಲಕ್ಷ ಮೀರಿದ ಗುಣಮುಖರು; 24 ಗಂಟೆಗಳಲ್ಲಿ 64,553 ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Aug 15, 2020, 1:01 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಗುರುವಾರದಿಂದ ಶುಕ್ರವಾರಕ್ಕೆ 24 ಗಂಟೆಗಳಲ್ಲಿ 64,553 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅದೇ ರೀತಿ, ಗುಣಮುಖರ ಸಂಖ್ಯೆಯೂ 17 ಲಕ್ಷ ಮೀರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಗುಣಮುಖ ಪ್ರಮಾಣವು ಶೇ.71.17 ಕ್ಕೇರಿದರೆ, ಒಂದೇ ದಿನ 1,007 ಮಂದಿ ಸಾವಿಗೀಡಾಗುವ ಮೂಲಕ ಸಾವಿನ ಸಂಖ್ಯೆ 48 ಸಾವಿರ ದಾಟಿದೆ. ಪ್ರಸ್ತುತ ದೇಶದ ಮರಣ ಪ್ರಮಾಣ ಶೇ.1.95ರಷ್ಟಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.
ಇದೇ ವೇಳೆ ದೇಶದ ಕೊರೊನಾ ಲಸಿಕೆ ಕೊವ್ಯಾಕ್ಸಿನ್ನ ಮೊದಲ ಹಂತದ ಪ್ರಯೋಗ ಪೂರ್ಣಗೊಂಡಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯ ಸಹಭಾಗಿತ್ವದಲ್ಲಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ನ ಮುಂದಿನ ಹಂತದ ಪ್ರಯೋಗ ಸೆಪ್ಟೆಂಬರ್ನಲ್ಲಿ ನಡೆಯಲಿದೆ. ಈವರೆಗೆ ನಡೆಸಿದ ಪ್ರಯೋಗದಲ್ಲಿ, ಲಸಿಕೆ ಪಡೆದ ಯಾರಿಗೂ ಪ್ರತಿಕೂಲ ಪರಿಣಾಮ ಉಂಟಾಗಿಲ್ಲ. ಇದೊಂದು ಸುರಕ್ಷಿತ ಲಸಿಕೆ ಎಂಬ ಭರವಸೆ ಮೂಡಿದೆ ಎಂದು ಪ್ರಯೋಗದ ನೇತೃತ್ವ ವಹಿಸಿರುವ
ಡಾ. ಸವಿತಾ ವರ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ