ಪುತ್ತೂರು ಚಪ್ಪಲಿ ಹಾರ ಪ್ರಕರಣ: ರಾಜಕೀಯ ವಾಕ್ಸಮರ ಶುರು, ಪುತ್ತೂರಿಗೆ ಯತ್ನಾಳ್‌

ಪಿಎಸ್‌ಐ ಮತ್ತು ಪಿಸಿಯನ್ನು ತತ್‌ಕ್ಷಣಕ್ಕೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

Team Udayavani, May 19, 2023, 12:04 PM IST

ಪುತ್ತೂರು ಚಪ್ಪಲಿ ಹಾರ ಪ್ರಕರಣ: ರಾಜಕೀಯ ವಾಕ್ಸಮರ ಶುರು, ಪುತ್ತೂರಿಗೆ ಯತ್ನಾಳ್‌

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಘಟನೆಯಲ್ಲಿ ಭಾಗಿಯಾಗಿರುವ ಆರೋಪದಡಿ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್‌ ಒಬ್ಬರನ್ನು ಅಮಾನತು ಮಾಡಲಾಗಿದೆ.

ಸಂಪ್ಯ ಠಾಣೆಯ ಪಿಎಸ್‌ಐ ಶ್ರೀನಾಥ್‌ ರೆಡ್ಡಿ, ಕಾನ್ಸ್ ಸ್ಟೆಬಲ್‌ ಹರ್ಷಿತ್‌ ಅಮಾನತುಗೊಂಡವರು. ಪ್ರಕರಣಕ್ಕೆ
ಸಂಬಂಧಿಸಿ ಪುತ್ತೂರು ಉಪವಿಭಾಗದ ಡಿವೈಎಸ್ಪಿ ವೀರಯ್ಯ ಹಿರೇಮಠ ವಿರುದ್ಧವೂ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ಮೇಲಧಿಕಾರಿ ಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ತಿಳಿಸಿದ್ದಾರೆ.

ಪ್ರಕರಣ ದಾಖಲು: ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಮತ್ತು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಫೋಟೋ ಬಳಸಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿ ಬ್ಯಾನರ್‌ ಅಳವಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 9 ಮಂದಿ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವ ಚಿತ್ರ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತಿದ್ದಂತೆ ಕೃತ್ಯದ ಬಗ್ಗೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್‌ ಅವರ ತಂದೆ ವೇಣುನಾಥ ನರಿಮೊಗರು ಮೇ 17ರಂದು ನೀಡಿದ ದೂರಿನ ಹಿನ್ನೆಲೆಯಲ್ಲಿ ಡಿವೈಎಸ್‌ಪಿ, ಸಂಪ್ಯ ಠಾಣೆಯ ಪಿಎಸ್‌ಐ ಮತ್ತು ಪಿಸಿಯೊಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್ಪಿ ಭೇಟಿ-ವಿಚಾರಣೆ: ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಡಾ| ವಿಕ್ರಂ ಅಮ್ಟೆ ಮತ್ತು ಅಡಿಷನಲ್‌ ಎಸ್ಪಿ ಕುಮಾರ್‌ ಅವರು ಪುತ್ತೂರು ಡಿವೈಎಸ್ಪಿ ಕಚೇರಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣದ ಹೆಚ್ಚಿನ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿಗೆ ವಹಿಸಲಾಗಿದೆ. ಈ ನಡುವೆ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪಿಎಸ್‌ಐ ಮತ್ತು ಪಿಸಿಯನ್ನು ತತ್‌ಕ್ಷಣಕ್ಕೆ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಭರವಸೆ ನೀಡಿದ್ದಾರೆ. ಈ ಕುರಿತಂತೆ ಟ್ವೀಟ್‌ ಮಾಡಿರುವ ಅವರು, ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳು ಮತ್ತು ಆರೋಪಿಗಳವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಅಂತಹ ಕಾನೂನುಬಾಹಿರ ಮತ್ತು ಅನಗತ್ಯ ಕ್ರಮಗಳನ್ನು ಸಹಿಸುವುದಿಲ್ಲ ಎಂದಿದ್ದಾರೆ. ಅಮಾನತಿಗೆ ಶಾಸಕರ ಸೂಚನೆ: ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಮತ್ತು ದೌರ್ಜನ್ಯದಲ್ಲಿ ಭಾಗಿಯಾದ ಪೊಲೀಸರನ್ನು ಗುರುವಾರ ಸಂಜೆಯೊಳಗೆ ಅಮಾನತು ಮಾಡಬೇಕು ಎಂದು ಬೆಂಗಳೂರಿನಲ್ಲಿರುವ ಪುತ್ತೂರಿನ ನೂತನ ಶಾಸಕ ಅಶೋಕ್‌ ಕುಮಾರ್‌ ರೈ ಪೊಲೀಸ್‌ ಇಲಾಖೆಗೆ ಸೂಚಿಸಿದ್ದು, ಕೂಡಲೇ ಜಿಲ್ಲಾ ಪೊಲೀಸ್‌ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದರು.

ದಯವಿಟ್ಟು ನಮ್ಮನ್ನು ಕ್ಷಮಿಸಿ: ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರಲ್ಲಿ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರು ಟ್ವೀಟ್‌ ಮೂಲಕ ಕ್ಷಮೆ ಯಾಚಿಸಿದ್ದಾರೆ. ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್‌, ಬಂಟಿಂಗ್‌ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವೀಟಿನಲ್ಲಿ ಬರೆದುಕೊಂಡಿದ್ದಾರೆ.

ಹಲವರ ಭೇಟಿ-ಖಂಡನೆ: ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ, ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌, ಸಂಘ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ, ಚಕ್ರವರ್ತಿ ಸೂಲಿಬೆಲೆ, ಬಿಜೆಪಿ ಮುಖಂಡರಾದ ಆಶಾ ತಿಮ್ಮಪ್ಪ ಗೌಡ, ಕಿಶೋರ್‌ ಬೊಟ್ಯಾಡಿ, ಮುರಳಿಕೃಷ್ಣ ಹಸಂತಡ್ಕ, ಕೃಷ್ಣ ಶೆಟ್ಟಿ ಕಡಬ ಮೊದಲಾದವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರವಾಣಿ ಮೂಲಕ ಯೋಗಕ್ಷೇಮ ವಿಚಾರಿಸಿದ್ದಾರೆ. ಪುತ್ತೂರು ಹಿಂದೂ ಸೇನೆ, ಹಿಂದೂ ಜಾಗರಣ ವೇದಿಕೆ ಘಟನೆಯನ್ನು ಖಂಡಿಸಿದೆ.

ಇಂದು ಪುತ್ತೂರಿಗೆ ಯತ್ನಾಳ್‌
ಹಿಂದೂ ಕಾರ್ಯಕರ್ತರ ಯೋಗಕ್ಷೇಮ ಮತ್ತು ಪ್ರಕರಣದ ಕುರಿತು ಮಾಹಿತಿ ಪಡೆಯಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮೇ 19ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಯತ್ನಾಳ್‌ ಅವರು ಅರುಣ್‌ ಕುಮಾರ್‌ ಪುತ್ತಿಲರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದು ಘಟನೆಯ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ.

ಘಟನೆಯ ಬಗ್ಗೆ ಅಡಿಶನಲ್‌ ಎಸ್‌ಪಿ ನೇತೃತ್ವದಲ್ಲಿ ಇಲಾಖಾ ವಿಚಾರಣೆಗೆ ಆದೇಶಿಸಿ ವಿಚಾರಣೆ ನಡೆಸಿ, ಇಬ್ಬರ ಅಮಾನತು ಮಾಡಲಾಗಿದೆ. ಹಲ್ಲೆಗೊಳಗಾದವರು ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದು ಅದರ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಬಂಟ್ವಾಳ ಸಬ್‌ ಡಿವಿಜನ್‌ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲು ಸೂಚಿಸಲಾಗಿದ್ದು ಎಲ್ಲ ಮಾಹಿತಿಯನ್ನು ಇಲಾಖಾ ಶಿಸ್ತು ಪ್ರಾಧಿಕಾರಕ್ಕೆ ಕಳುಹಿಸಿಕೊಡುತ್ತೇವೆ.
● ವಿಕ್ರಮ ಅಮ್ಟೆ, ಪೊಲೀಸ್‌ ವರಿಷ್ಠಾಧಿಕಾರಿ ದ.ಕ

ಸರಕಾರ ಬದಲಾದ ತಕ್ಷಣ ಏನು ಬೇಕಾದರೂ ಮಾಡಬಹುದು ಅನ್ನುವುದಕ್ಕೆ ಈ ಘಟನೆ ಉದಾಹರಣೆ. ಕಾರ್ಯಕರ್ತರ ಮೇಲಿನ ಪೊಲೀಸ್‌ ದೌರ್ಜನ್ಯ ನೂರಕ್ಕೆ ನೂರು ಕಾಂಗ್ರೆಸ್‌ ಮಾಡಿದ ಕಿತಾಪತಿ. ನಾವು ಇದನ್ನು ಹೀಗೆ ಬಿಡುವುದಿಲ್ಲ. ಇದರ ಹಿಂದಿನ ಶಕ್ತಿ
ಯಾರೆಂದು ಗೊತ್ತಾಗಬೇಕು. ಸರಕಾರ ಬದಲಾದ ಕೂಡಲೇ ಇಂತಹ ಘಟನೆ ಒಳ್ಳೆಯ ಲಕ್ಷಣ ಅಲ್ಲ.
●ಡಾ| ಪ್ರಭಾಕರ ಭಟ್‌ ಕಲ್ಲಡ್ಕ,
ಸಂಘ ಪರಿವಾರದ ಮುಖಂಡ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.