200 ಮಂದಿ ವಲಸೆ ಕಾರ್ಮಿಕರು ಊರಿಗೆ
Team Udayavani, May 3, 2020, 5:40 AM IST
ಉಡುಪಿ: ಲಾಕ್ಡೌನ್ ಸಡಿಲಿಕೆ ಬಳಿಕ ಜಿಲ್ಲಾಡಳಿತ ನಗರದೊಳಗೆ ಸಿಲುಕಿಕೊಂಡಿರುವ ಹೊರ ಜಿಲ್ಲೆಗಳ ಕಾರ್ಮಿಕರನ್ನು ಊರಿಗೆ ಕಳುಹಿಸಿಕೊಡುತ್ತಿದ್ದು, ಶನಿವಾರ 8 ಬಸ್ಗಳಲ್ಲಿ 200 ಮಂದಿ ವಲಸಿಗರು ಜಿಲ್ಲೆಯಿಂದ ಪ್ರಯಾಣ ಬೆಳೆಸಿದ್ದಾರೆ.
ಸಾರಿಗೆ ಸಂಸ್ಥೆಯ ಎಂಟು ಬಸ್ಗಳಲ್ಲಿ ವಲಸೆ ಕಾರ್ಮಿಕರನ್ನು ಬೆಳಗಾವಿ, ಬಿಜಾಪುರ, ಅಥಣಿ, ಕುಷ್ಟಗಿ, ಗದಗ ಸಹಿತ ವಿವಿಧ ಜಿಲ್ಲೆಗಳಿಗೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿದೆ. ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಯಾವುದೇ ತೊಂದರೆ ಆಗದ ರೀತಿಯಲ್ಲಿ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲಾಗುತ್ತಿದೆ.
ಜಿಲ್ಲೆಗೆ ಉದ್ಯೋಗ ಅರಸಿ ಬಂದಿದ್ದ ಹಲವಾರು ಕಾರ್ಮಿಕರು ಇಲ್ಲಿ ವಾಸವಾಗಿದ್ದರು. ಕಟ್ಟಡ ಸಹಿತ ಹಲವಾರು ಕಾಮಗಾರಿಗಳಲ್ಲಿ ದಿನಗೂಲಿ ಕಾರ್ಮಿಕರಾಗಿ ಸೇರಿಕೊಂಡಿದ್ದರು. ಲಾಕ್ಡೌನ್ನಿಂದ ಅವರೆಲ್ಲ ತೊಂದರೆಗೆ ಒಳಗಾಗಿದ್ದರು. ಊರಿಗೆ ಹೋಗಲು ಬಸ್, ರೈಲು ವ್ಯವಸ್ಥೆಗಳಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದರು. ರಾಜ್ಯ ಸರಕಾರ ಹೊರ ಜಿಲ್ಲೆಗಳಿಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದರಿಂದ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆಯನ್ನು ಮಾಡಿತ್ತು. ಇದಕ್ಕೂ ಮೊದಲು, ಹಿಂದಿನ ದಿನ ಜಿಲ್ಲಾಡಳಿತ ಸುಮಾರು 500 ಕಾರ್ಮಿಕರನ್ನು ಊರಿಗೆ ಕಳುಹಿಸಿಕೊಟ್ಟಿದೆ.
ಲಾಕ್ಡೌನ್ ವೇಳೆ ಕಾಲ್ನಡಿಗೆಯಲ್ಲಿ ಊರಿಗೆ ಹೊರಟವರನ್ನು ಗಡಿಗಳಲ್ಲಿ ತಡೆದು ಶಿಬಿರಗಳಲ್ಲಿ ತಂಗಲು ಸೂಚಿಸಲಾಗಿತ್ತು. ಸದ್ಯ 25 ಸರಕಾರಿ ಬಸ್ಗಳಿಗೆ ರೂಟ್ ಫಿಕ್ಸ್ ಮಾಡಿ ಕಳುಹಿಸಿಕೊಡಲಾಗಿದೆ.
ಇನ್ನುಳಿದವಲರಿಗೆ ಹೆಸರು ನೊಂದಾಯಿಸಲು ಸೂಚನೆ ನೀಡಲಾಗಿದೆ. ಕಾರ್ಮಿಕರ ಬೇಡಿಕೆ ಅನುಸಾರ ರಾಜ್ಯ ಸಾರಿಗೆ ಬಸ್ ಒದಗಿಸಲಾಗುವುದು ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ಜಿಲ್ಲಾಡಳಿತ ವಲಸೆ ಕಾರ್ಮಿಕರು ಊರಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿದ್ದು, ಬೀಡಿನಗುಡ್ಡೆ ಮೈದಾನದಲ್ಲಿ ತಮ್ಮ ಊರಿನ ಬಸ್ಗಾಗಿ ಮಹಿಳಾ ಕಾರ್ಮಿಕರೊಬ್ಬರು ಕಾಯುತ್ತಿರುವ ದೃಶ್ಯ.
ಚಿತ್ರ: ಆಸ್ಟ್ರೋ ಮೋಹನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ