Politics: ಉದಯನಿಧಿ ವಿರುದ್ಧ ಕ್ರಮಕ್ಕೆ 262 ಗಣ್ಯರ ಆಗ್ರಹ

ಇದು ದ್ವೇಷ ಭಾಷಣವೇ ಎಂದು ಪ್ರತಿಪಾದನೆ-ಸುಪ್ರೀಂ ಕೋರ್ಟ್‌ ಸಿಜೆಐಗೆ ಪತ್ರ

Team Udayavani, Sep 5, 2023, 10:16 PM IST

udayanidhi maran

ನವದೆಹಲಿ: “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ’ ಎಂಬ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿಗೆ ದೇಶದ 262 ಗಣ್ಯರು ಪತ್ರ ಬರೆದಿದ್ದಾರೆ.

ಈ ಪತ್ರ ಬರೆದವರಲ್ಲಿ ಹೈಕೋರ್ಟ್‌ಗಳ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳೂ ಸೇರಿದ್ದಾರೆ. ಉದಯನಿದಿ ಅವರ ಹೇಳಿಕೆಯು ದ್ವೇಷ ಭಾಷಣವಾಗಿದ್ದು, ಅದು ಕೋಮು ಸಾಮರಸ್ಯವನ್ನು ಹದಗೆಡಿಸುವಂಥ ಮತ್ತು ಜನಾಂಗೀಯ ಹಿಂಸಾಚಾರಕ್ಕೆ ಪ್ರೇರೇಪಿಸುವಂಥ ಹೇಳಿಕೆಯಾಗಿದೆ. ಅವರ ಭಾಷಣವು ಭಾರತದ ಜನಸಾಮಾನ್ಯರ ಮನಸ್ಸುಗಳ ಮೇಲೆ ವಿಶೇಷವಾಗಿ ಸನಾತನ ಧರ್ಮವನ್ನು ನಂಬಿಕೊಂಡು ಬಂದವರ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಭಾರತವನ್ನು ಜಾತ್ಯತೀತ ರಾಷ್ಟ್ರ ಎಂದು ಕರೆಯುವ ದೇಶದ ಸಂವಿಧಾನದ ಮೂಲ ಆಶಯಕ್ಕೇ ಉದಯನಿಧಿ ಅವರ ಹೇಳಿಕೆ ಕೊಡಲಿಯೇಟು ನೀಡಿದೆ. ಇಂಥ ವಿವಾದಾತ್ಮಕ ಹೇಳಿಕೆ ನೀಡಿದ್ದರೂ ಅವರ ವಿರುದ್ಧ ತಮಿಳುನಾಡು ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಅದನ್ನು ಸಮರ್ಥಿಸಿಕೊಂಡಿರುವುದು ಕಾನೂನಿನ ಉಲ್ಲಂಘನೆಯಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಇಂಥ ಪ್ರಕರಣದಲ್ಲಿ ಔಪಚಾರಿಕ ದೂರು ಸಲ್ಲಿಕೆ ಆಗುವವರೆಗೆ ಕಾಯದೇ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆಯೇ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಹೀಗಾಗಿ, ಉದಯನಿಧಿ ವಿವಾದಿತ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ದೆಹಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಸ್‌.ಎನ್‌.ಧಿಂಗ್ರಾ, ಕೇಂದ್ರದ ಮಾಜಿ ಶಿಪ್ಪಿಂಗ್‌ ಕಾರ್ಯದರ್ಶಿ ಗೋಪಾಲ ಕೃಷ್ಣ ಸೇರಿದಂತೆ 14 ನಿವೃತ್ತ ಜಡ್ಜ್ಗಳು, 130 ಅಧಿಕಾರಿಗಳು(20 ರಾಯಭಾರಿಗಳು) ಮತ್ತು 118 ಸೇನಾಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಹಿಟ್ಲರ್‌ ಇದ್ದಂತೆ:
ಇದೇ ವೇಳೆ, ಉದಯನಿಧಿ ವಿರುದ್ಧ ರಾಜಕೀಯ ವಲಯದಲ್ಲಿ ಆಕ್ರೋಶ ಮುಂದುವರಿದಿದೆ. “ಯಹೂದಿಗಳನ್ನು ಸರ್ವನಾಶ ಮಾಡಲೆಂದು ಹಿಟ್ಲರ್‌ ಕರೆ ನೀಡಿದಂತೆ, ಇದೀಗ ಭಾರತದಲ್ಲಿ ಸನಾತನ ಧರ್ಮವನ್ನು ಅನುಸರಿಸುತ್ತಿರುವ ಶೇ.80ರಷ್ಟು ಜನರ ನರಮೇಧಕ್ಕೆ ಉದಯ್‌ ಸ್ಟಾಲಿನ್‌ ಈ ಮೂಲಕ ಕರೆ ನೀಡಿದ್ದಾರೆ ಎಂದು ಬಿಜೆಪಿ ಟ್ವೀಟ್‌ ಮಾಡಿ ಟೀಕಿಸಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿಕೆ ಆಕ್ಷೇಪ ಮಾಡಿ, ನಾನೂ ಸನಾತನ ಧರ್ಮದವನು. ನಾವು ಒಬ್ಬರು ಮತ್ತೂಬ್ಬರ ಧರ್ಮವನ್ನು ಗೌರವಿಸುವುದು ಕಲಿಯಬೇಕು ಎಂದಿದ್ದಾರೆ. ತಮಿಳುನಾಡು ವಿಪಕ್ಷ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಕೂಡ ಆಕ್ಷೇಪಿಸಿ, ಡಿಎಂಕೆ ಸರ್ಕಾರವು ಆಡಳಿತ ವೈಫ‌ಲ್ಯವನ್ನು ಮುಚ್ಚಿಹಾಕಲು ಇಂಥ ನಾಟಕ ಸೃಷ್ಟಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.