3 ಪ್ರದೇಶಗಳ ಕೋವಿಡ್ 19 ಪತ್ತೆ ವೆನ್ಲಾಕ್ ನಲ್ಲಿ
Team Udayavani, Apr 9, 2020, 12:17 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆರಂಭವಾಗಿರುವ ಕೋವಿಡ್ 19 ವೈರಾಣು ಪತ್ತೆ ಪ್ರಯೋಗಾಲಯದಲ್ಲಿ ಮೂರು ಜಿಲ್ಲೆಗಳ ಕೋವಿಡ್ 19 ಪ್ರಕರಣಗಳನ್ನು ಪರೀಕ್ಷೆಗೊಳಪಡಿಸಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಪ್ರಕರಣಗಳು ಇನ್ನು ಮುಂದೆ ವೆನ್ಲಾಕ್ ಪ್ರಯೋಗಾಲಯದಲ್ಲಿಯೇ ಪರೀಕ್ಷೆಗೊಳಪಡಲಿವೆ.
ರಾಜ್ಯದಲ್ಲಿ ಪ್ರಸ್ತುತ ನೂತನವಾಗಿ ಆರಂಭವಾಗಿರುವ ಪ್ರಯೋಗಾಲಯಗಳಿಗೆ ಸಂಬಂಧಿಸಿ ರಾಜ್ಯ ಸರಕಾರವು ಜಿಲ್ಲೆಗಳನ್ನು ಪ್ರತ್ಯೇಕಿಸಿದೆ. ಅದರಂತೆ ವೆನ್ಲಾಕ್ ನಲ್ಲಿ ಆರಂಭವಾಗಿರುವ ಪ್ರಯೋಗಾಲಯದಲ್ಲಿ ದ.ಕ.ದೊಂದಿಗೆ ಉಡುಪಿ, ಕಾರವಾರದ ಪ್ರಕರಣಗಳ ಪರೀಕ್ಷೆ ನಡೆಯಲಿದೆ.
ದ.ಕ.: ಕೋವಿಡ್ 19 ಪಾಸಿಟಿವ್ ಇಲ್ಲ
ವೆನ್ಲಾಕ್ ಆಸ್ಪತ್ರೆಯಿಂದ ಪರೀಕ್ಷೆಗಾಗಿ ಇತ್ತೀಚೆಗೆ ಕಳುಹಿಸಲಾಗಿದ್ದ 7 ಮಂದಿಯ ಗಂಟಲು ದ್ರವ ಮಾದರಿಯ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು ಎಲ್ಲವೂ ನೆಗೆಟಿವ್ ಬಂದಿವೆ. ವೆನ್ಲಾಕ್ ಆಸ್ಪತ್ರೆಯ ನೂತನ ಕೋವಿಡ್ 19 ಪತ್ತೆ ಪ್ರಯೋಗಾಲಯದಲ್ಲಿ ಬುಧವಾರ 9 ಮಾದರಿಗಳನ್ನು ಪರೀಕ್ಷಿಸಲಾಗಿದೆ.
20 ಮಂದಿಯನ್ನು ಹೊಸದಾಗಿ ತಪಾಸಣೆಗೊಳಪಡಿಸಲಾಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈವರೆಗೆ 3,635 ಮಂದಿ ಗೃಹ ನಿಗಾವಣೆಯಲ್ಲಿದ್ದಾರೆ. 11 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ನಿಗಾವಣೆ ಯಲ್ಲಿದ್ದಾರೆ. 2,311 ಮಂದಿ 28 ದಿನಗಳ ನಿಗಾ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
ಇಲ್ಲಿವರೆಗೆ ಕಳುಹಿಸಿರುವ 357 ಮಾದರಿ ಗಳ ಪೈಕಿ 348 ಮಾದರಿ ಸ್ವೀಕರಿಸಲಾಗಿದ್ದು, 336 ನೆಗೆಟಿವ್, 12 ಪಾಸಿಟಿವ್ ಪ್ರಕರಣ ಕಂಡು ಬಂದಿತ್ತು. ಈ ಪೈಕಿ ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ, 8 ಮಂದಿ ಚಿಕಿತ್ಸಾ ಪಡೆಯುತ್ತಿದ್ದಾರೆ.
ಕೇರಳದ ರೋಗಿಗಳಿಗೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ
ಕಾಸರಗೋಡು ಸಹಿತ ಕೇರಳ ರಾಜ್ಯದಿಂದ ಮಂಗಳೂರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಕರೆತರುವ ರೋಗಿಗಳಿಗೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕೀಯ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆಗೆ ಅವಕಾಶ ನೀಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ತೀರ್ಮಾನಿಸಿದೆ.
ತಲಪಾಡಿ ಮೂಲಕ ಜಿಲ್ಲೆಯೊಳಗೆ ಪ್ರವೇಶಿಸುವ ರೋಗಿಗಳಿರುವ ಆ್ಯಂಬುಲೆನ್ಸ್ ಗಳು ಮಂಗಳೂರಿಗೆ ಪ್ರವೇಶಿಸದೆ ನೇರವಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಕೇರಳದ ರೋಗಿ ಗಳು ಮಂಗಳೂರು ಸೇರಿದಂತೆ ಜಿಲ್ಲೆಯ ಇತರ ಯಾವುದೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುವಂತಿಲ್ಲ. ಕೇರಳದ ಆ್ಯಂಬುಲೆನ್ಸ್ಗಳಿಗೆ ತುರ್ತು ಚಿಕಿತ್ಸೆಗೆ ಕಾಸರಗೋಡಿನ ತಲಪಾಡಿ ಗಡಿಯಲ್ಲಿ ಅವಕಾಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೋವಿಡ್ 19 ಸೋಂಕು ಹರಡುವುದನ್ನು ತಡಗಟ್ಟುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಈ ರೀತಿಯ ತೀರ್ಮಾನ ಕೈಗೊಂಡಿದೆ.
13 “ಫಿವರ್ ಕ್ಲಿನಿಕ್’
ಇನ್ನೊಂದೆಡೆ ಜಿಲ್ಲೆಯಲ್ಲಿ ಶಂಕಿತ ಕೋವಿಡ್ 19 ಸೇರಿದಂತೆ ಅದಕ್ಕೆ ಸಂಬಂಧಿಸಿ ದಂತೆ ಇತರ ಯಾವುದೇ ರೋಗ ಲಕ್ಷಣಗಳು ಇದ್ದರೆ ಜನರು ತುರ್ತು ತಪಾಸಣೆಗಾಗಿ ಒಟ್ಟು 13 “ಫಿವರ್ ಕ್ಲಿನಿಕ್’ಗಳನ್ನು ಪ್ರಾರಂಭಿಸಲಾಗಿದೆ.
ದ.ಕ.: 4 ದಿನಗಳಿಂದ
ಹೊಸ ಪ್ರಕರಣವಿಲ್ಲ
ದ.ಕ. ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಯಾವುದೇ ಕೋವಿಡ್ 19ಪಾಸಿಟಿವ್ ಪ್ರಕರಣ ದಾಖಲಾಗದೇ ಇರುವುದು ಜಿಲ್ಲೆಯ ಜನತೆಗೆ ಹಾಗೂ ರೋಗ ನಿಯಂತ್ರಣಕ್ಕೆ ಸತತ ಪ್ರಯತ್ನಿಸುತ್ತಿರುವ ಜಿಲ್ಲಾಡಳಿತಕ್ಕೆ ಸಮಾಧಾನ ತರುವ ವಿಚಾರವಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 12 ಪ್ರಕರಣ ಗಳು ಪತ್ತೆಯಾಗಿದ್ದು, ಈ ಪೈಕಿ ನಾಲ್ವರು ಈಗಾಗಲೇ ಬಿಡುಗಡೆಗೊಂಡಿದ್ದಾರೆ. ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ನೇತೃತ್ವದಲ್ಲಿ ಲಾಕ್ಡೌನ್ ಸಮಯದಲ್ಲಿ ಕೈಗೊಂಡಿರುವ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಬಂದಿರುವುದು ಗಮನಾರ್ಹ. ಲಾಕ್ಡೌನ್ಗೆ ಪೂರಕವಾಗಿ ಜಿಲ್ಲಾಡಳಿತದ ಕಠಿಣ ಕ್ರಮಗಳಿಗೆ ಜನತೆ ನೀಡುತ್ತಿರುವ ಸಂಪೂರ್ಣ ಸಹಕಾರವೇ ಇದಕ್ಕೆ ಕಾರಣ ಎನ್ನಬಹುದು.
ಅಜ್ಜಾವರ: 44 ಮಂದಿಗೆ ಹೋಂ ಕ್ವಾರಂಟೈನ್
ಸುಳ್ಯ: ಅಜ್ಜಾವರದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸೋಂಕಿತನ ಮನೆ ಮಂದಿಯ ಸಂಪರ್ಕದಲ್ಲಿದ್ದರೆಂಬ ಕಾರಣಕ್ಕೆ ಗ್ರಾ.ಪಂ. ಅಧ್ಯಕ್ಷೆ, ಪಿಡಿಒ ಸಹಿತ ಒಟ್ಟು 44 ಮಂದಿಯನ್ನು ಹೋಂ ಕ್ವಾರಂಟೈನಲ್ಲಿ ಇರುವಂತೆ ಸೂಚಿಸಲಾಗಿದೆ.
ಸೋಂಕಿತ ವ್ಯಕ್ತಿಯ ಸಹೋದರ ಪಂಚಾಯತ್ನಲ್ಲಿ ನಡೆದ ಕೋವಿಡ್ 19 ರಕ್ಷಣಾ ಕಾರ್ಯಪಡೆ ಸಭೆಯಲ್ಲಿ ಭಾಗವಹಿಸಿದ್ದರು. ಆದ್ದರಿಂದ ಸೆಕೆಂಡರಿ ಕಾಂಟೆಕ್ಟ್ ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ, ಪಿಡಿಒ, ಎಂಟು ಮಂದಿ ಸದಸ್ಯರು ಸೇರಿ ಒಟ್ಟು 44 ಮಂದಿಯನ್ನು ಕ್ವಾರಂಟೈನಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ