ಪೊಲೀಸ್ ಠಾಣೆ, ಫೈನಾನ್ಸ್ ಕಂಪನಿ ಆವರಣದಲ್ಲಿ ಅವಘಡ: 31 ವಾಹನಗಳು ಭಸ್ಮ
Team Udayavani, Mar 12, 2022, 11:31 AM IST
ಬೆಂಗಳೂರು: ಕೆಂಗೇರಿ ಹಾಗೂ ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಗಳ ಆವರಣ ಹಾಗೂ ಮತ್ತೂಂದು ಫೈನಾನ್ಸ್ ಕಂಪನಿ ಆವರ ಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 31 ವಾಹನಗಳು ಸುಟ್ಟು ಕರಕಲಾಗಿವೆ.
ಕೆಂಗೇರಿ ಪೊಲೀಸ್ ಠಾಣೆ ಬಳಿಯಿರುವ ಕಾಂಪೌಂಡ್ಗೆ ಹೊಂದಿಕೊಂಡಂತಿರುವ ರೈಲ್ವೆ ಹಳಿ ಪಕ್ಕದಲ್ಲಿರುವ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ ಠಾಣಾ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು, ಆಟೋ, ಕಾರು ಮತ್ತು ಜೀಪಿಗೆ ಬೆಂಕಿ ತಗುಲಿ ದ್ದು, 18 ವಾಹನಗಳು ಬೆಂಕಿಗಾಹುತಿಯಾಗಿವೆ.
ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿ 2 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಈ ಹಾನಿಗೀಡಾದ ವಾಹ ನಗಳ ಪೈಕಿ ಕೆಲವು ದರೋಡೆ, ಸುಲಿಗೆ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದರು.
ಮತ್ತೊಂದು ಪ್ರಕರಣದಲ್ಲಿ ಕೆ.ಜಿ. ಹಳ್ಳಿ ಠಾಣೆ ಆವರಣದಲ್ಲಿ ಜಪ್ತಿ ಮಾಡಿರುವ 6 ವಾಹನಗಳು ಬೆಂಕಿಗಾಹುತಿಯಾಗಿವೆ. ಮಧ್ಯಾಹ್ನ ಏಕಾಏಕಿ ಒಂದು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಉಳಿದ ವಾಹನಗಳಿಗೆ ಹರಡಿ ಒಟ್ಟು 6 ಕಾರುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಬಾಣಸ ವಾಡಿಯ ಎಚ್ಬಿಆರ್ ಲೇಔಟ್ನ ಅಯೋಧ್ಯ ಮೈದಾನದಲ್ಲಿ ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದ 7 ಕಾರುಗಳಿಗೆ ಬೆಂಕಿ ತಗುಲಿದೆ. ಬೆಳಗ್ಗೆ 9 ಗಂಟೆಗೆ ಬೆಂಕಿ ತಗುಲಿ ಕಾರುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಿಸಿಲಿನ ತಾಪದಿಂದ ಮೊದಲು ಒಂದು ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ