ಬಿಜೆಪಿಗೆ 40 ಎಂದರೆ ಬಹಳ ಪ್ರೀತಿ, ಹಾಗಾಗಿ ಅವರಿಗೆ 40 ಸೀಟು ಮಾತ್ರ ನೀಡಿ: Rahul gandhi

ರಾಹುಲ್ ಗಾಂಧಿಯವರ ಜೊತೆ ವೇದಿಕೆ ಹಂಚಿಕೊಳ್ಳದ ಕಿಮ್ಮನೆ ರತ್ನಾಕರ್

Team Udayavani, May 2, 2023, 1:15 PM IST

4-rahulgandhi

ತೀರ್ಥಹಳ್ಳಿ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ. ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ. ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು.

ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ. ಗೃಹ ಸಚಿವರು ಪೊಲೀಸ್ ನೇಮಕಾತಿಯ ಹಗರಣದಲ್ಲಿದ್ದಾರೆ. ಪ್ರಧಾನಿ ಮೋದಿ ಕೇವಲ ಮೋದಿ ಬಗ್ಗೆ ಮಾತ್ರ ಮಾತನಾಡುತ್ತಾರೆ. ಗೃಹ ಸಚಿವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ಇಲ್ಲ. ರಾಜ್ಯ ಸರ್ಕಾರ ಕಳ್ಳ ಸರ್ಕಾರವಾಗಿದೆ ಎಂದರು.

ಏಕೆಂದರೆ ಕಳೆದ 2 ವರ್ಷದ ಹಿಂದೆ ಬಂದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಹಾಗಾಗಿ ಮೋದಿಯವರು ಯಡಿಯೂರಪ್ಪ, ಬೊಮ್ಮಾಯಿ ಹಾಗೂ ಗೃಹ ಸಚಿವರ ಹೆಸರನ್ನೇ ಹೇಳುವುದಿಲ್ಲ ಎಂದರು.

ಮಹಾದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಬಿಜೆಪಿ ಸರ್ಕಾರ ಏನು ಮಾಡಿತು. ಇಲ್ಲಿಂದ ತೆರಿಗೆ ರೂಪದಲ್ಲಿ ಪಡೆದ ಹಣ ಎಲ್ಲಿ ಹೋಯಿತು. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿಗೆ ಪತ್ರ ಬರೆದರೂ ಏಕೆ ಉತ್ತರವಿಲ್ಲ. ವಿಐಎಸ್ ಎಲ್ ಕಾರ್ಖಾನೆ ಉಳಿಸಲು ಏನು ಮಾಡಿದ್ದೀರಾ ಎಂದೆಲ್ಲಾ ಪ್ರಶ್ನಿಸಿದರು.

ಇದೇ ಮೊದಲ ಬಾರಿಗೆ ರೈತರು ತೆರಿಗೆ ನೀಡುವ ಪರಿಸ್ಥಿತಿ ಬಂದಿದೆ. ಸಿಲಿಂಡರ್, ಪೆಟ್ರೋಲ್-ಡೀಸಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ದೇಶದ ಸಂಪತ್ತು ಕೇವಲ ಶೇ.1ರಷ್ಟು ಜನರ ಕೈಯಲ್ಲಿದೆ. ನಿರುದ್ಯೋಗ ಮತ್ತು ಬಡತನದ ಪ್ರಮಾಣ ಹೆಚ್ಚಾಗಿದೆ.  ಇದಕ್ಕಾಗಿ ನಾವು 5 ಯೋಜನೆಯನ್ನು ಜಾರಿಗೆ ತರುವ ಭರವಸೆ ನೀಡಿದ್ದೇವೆ ಎಂದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಪರಿಣಾಮ ಮಹಿಳೆಯರಿಗೆ ಕಷ್ಟವಾಗುತ್ತಿದೆ. ಅದಕ್ಕಾಗಿ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ, ಮಹಿಳೆಯರಿಗೆ ಉಚಿತ ಪ್ರಯಾಣ, ಯುವ ನಿಧಿ ಗ್ಯಾರಂಟಿ ನೀಡಲಿದ್ದೇವೆ. ಇದನ್ನು ಮೊದಲ ದಿನವೇ ಜಾರಿಗೆ ತರಲಿದ್ದೇವೆ ಎಂದು ಹೇಳಿದರು.

ರೈತರಿಗೆ ಪ್ರತಿ ವರ್ಷಕ್ಕೆ 30 ಸಾವಿರ ಕೋಟಿ ನೆರವು ನೀಡಲಿದ್ದೇವೆ. ಅಡಿಕೆ, ತೆಂಗು ಬೆಳೆಗಾರರಿಗೆ ನೆರವು, ಹಾಲಿಗೆ ಸಬ್ಸಿಡಿ ನೀಡಲಿದ್ದೇವೆ. ನಾವು 91 ಸಲ ದೋಷಿಸಿದ್ದೇವೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಇಲ್ಲಿನ ಲಂಚ, ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ ಎಂದರು.

ನೀವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೀರಾ ಎಂದು ಹೇಳಿ. 40 ಪರ್ಸೆಂಟ್ 50 ಪರ್ಸೆಂಟ್ ಗೆ ಹೆಚ್ಚಿಸುತ್ತಿರಾ. ಈ ಭೂಮಿಯಲ್ಲಿ ಕೇವಲ ಮೋದಿ ಮಾತ್ರ ಇಲ್ಲ. ಸಾಮಾನ್ಯ ಜನರೂ ಇದ್ದಾರೆ. ಹಾಗಾಗಿ ಅವರ ಬಗ್ಗೆ ಮಾತನಾಡಿ ಎಂದು ಹೇಳಿದರು.

ಇಲ್ಲಿನ ಯುವಕರು, ಮಹಿಳೆಯರು, ರೈತರು ಮೊದಲಾದವರ ಬಗ್ಗೆ ಮ‍ಾತನಾಡಿ ಇನ್ನು ಮುಂದಾದರೂ ನಿಮ್ಮ ಭಾಷಣದಲ್ಲಿ ಶೇ.70 ನಿಮ್ಮ ಬಗ್ಗೆ ಶೇ. 30 ರಷ್ಟು ಜನರ ಬಗ್ಗೆ ಮಾತನಾಡಿ ಎಂದರು.

ಬಿಜೆಪಿ ಕಳ್ಳತನದ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆ ಮಾಡಲಿದೆ. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ನೀಡಿ. ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿ ಇದೆ. ಹಾಗಾಗಿ ಅವರಿಗೆ 40 ಸೀಟು ಮಾತ್ರ ನೀಡಿ ಎಂದು ಸಭೆಯಲ್ಲಿ ಹೇಳಿದರು.

ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಮಾತನಾಡಿ, ನಾನು ರಾಹುಲ್ ಗಾಂಧಿ ನೋಡಲೆಂದು ಬಂದಿದ್ದೇನೆ. ಅವರ ಫಿಟ್ನೆಸ್ ಕಂಡರೆ ಇಷ್ಟ. ನನ್ನ ಮಾವ ಬಂಗಾರಪ್ಪ ಕೂಡ ರಾಜಕಾರಣದಲ್ಲಿದ್ದರು. ಯಾರನ್ನು ಆಯ್ಕೆ ಮಾಡಬೇಕು ಎಂದು ಜನರಿಗೆ ಗೊತ್ತು. ಒಳ್ಳೆಯವರಿಗೆ ಆಶೀರ್ವಾದ ಮಾಡಿ ಎಂದರು.

ರಾಹುಲ್ ಗಾಂಧಿಯವರ ಜೊತೆ ವೇದಿಕೆ ಹಂಚಿಕೊಳ್ಳದ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರಾಹುಲ್ ಗಾಂಧಿಯವರ ಜೊತೆ ವೇದಿಕೆ ಹಂಚಿಕೊಳ್ಳಲಿಲ್ಲ.

ವೇದಿಕೆ ಮುಂಭಾಗದಲ್ಲಿ ಇದ್ದ ಮೀಡಿಯಾ ಗ್ಯಾಲರಿಯಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಿದರು. ಚುನಾವಣಾ ನೀತಿ ಸಂಹಿತೆ ಕಾರಣ ಕಿಮ್ಮನೆ ವೇದಿಕೆ ಮೇಲೆ ಏರಲಿಲ್ಲ ಎಂದು ಹೇಳಲಾಗುತ್ತಿದೆ.

ಸಭೆಯಲ್ಲಿ ಆರ್ ಎಂ ಮಂಜುನಾಥ್ ಗೌಡ, ಡಾ. ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ, ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.