404 ಡಿಪ್ಲೊಮಾ ವಿದ್ಯಾರ್ಥಿಗಳ ಅಕ್ರಮ ಸಾಬೀತು


Team Udayavani, Jul 26, 2019, 5:27 AM IST

EXAM-a

ಬೆಂಗಳೂರು: ಪರೀಕ್ಷೆಯಲ್ಲಿ ನಕಲು ಮಾಡಿ, ಹೆಚ್ಚಿನ ಅಂಕ ಪಡೆದು, ಭವಿಷ್ಯ ರೂಪಿಸಿಕೊಳ್ಳಲು ಯೋಜನೆ ಸಿದ್ಧಪಡಿಸಿದ್ದ 404 ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಭವಿಷ್ಯಕ್ಕೆ ಕಂಟಕ ತಂದುಕೊಂಡಿರುವುದು ಬಯಲಾಗಿದೆ.

ರಾಜ್ಯದ ವಿವಿಧ ಪಾಲಿಟೆಕ್ನಿಕ್‌ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಇಲಾಖೆ ಏ.29ರಿಂದ ಮೇ 18ರ ವರೆಗೆ ಪರೀಕ್ಷೆ ನಡೆಸಿತ್ತು. ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರ ವಹಿಸಲು ಮತ್ತು ಪರೀಕ್ಷಾ ದುರಾಚಾರಗಳನ್ನು ನಿಯಂತ್ರಿಸಲು ಮುಖ್ಯ ವೀಕ್ಷಕರು, ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿತ್ತು. ಆದರೂ, ರಾಜ್ಯದ 434 ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದು ಬಯಲಾಗಿದೆ.

ಪರೀಕ್ಷೆಯಲ್ಲಿ ನಕಲು, ಸಾಮೂಹಿಕ ನಕಲು ಸೇರಿ ಹಲವು ರೀತಿಯ ಅಕ್ರಮ ನಡೆಸಲು ಚೀಟಿ, ಮೊಬೈಲ್ ಫೋನ್‌, ಎಲೆಕ್ಟ್ರಾನಿಕ್ಸ್‌ ಪರಿಕರ, ಕ್ಯಾಲ್ಕುಲೇಟರ್‌ ಮೊಲಾದ ಪರಿಕರಗಳನ್ನು ಬಳಸಿರುವುದು ತಾಂತ್ರಿಕ ಶಿಕ್ಷಣ ಸಂಸ್ಥೆಯ ತನಿಖೆಯಿಂದ ಬಯಲಾಗಿದೆ.

ವಿದ್ಯಾರ್ಥಿಗಳು ನಡೆಸಿದ ಪರೀಕ್ಷಾ ಅಕ್ರಮದ ಸತ್ಯಾಸತ್ಯತೆ ತಿಳಿಯಲು ಇಲಾಖೆಯ ವಿದ್ಯಾರ್ಥಿ ಮಾಲ್ಪ್ರಾಕ್ಟೀಸ್‌ ವಿಚಾರಣಾ ಸಮಿತಿಯು ಜುಲೈನಲ್ಲಿ ಎಲ್ಲ ವಿದ್ಯಾರ್ಥಿಗಳ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ 434 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿ ಗಳನ್ನು ದೋಷಮುಕ್ತ ಎಂದು ಘೋಷಿಸಲಾಗಿದೆ. ಉಳಿದ 404 ವಿದ್ಯಾರ್ಥಿಗಳಿಗೆ ಅವರು ಮಾಡಿರುವ ಅಕ್ರಮದ ಆಧಾರದಲ್ಲಿ ಶಿಕ್ಷೆಯನ್ನು ವಿಧಿಸಿದೆ. ಶಿಕ್ಷೆ ಪಡೆದ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಸಂದ ರ್ಭದಲ್ಲಿ ಅಥವಾ ಪರೀಕ್ಷೆಗೆ ದಾಖಲಿಸಿಕೊಳ್ಳುವ ವೇಳೆ ಹೆಚ್ಚಿನ ಎಚ್ಚರಿಕೆಯನ್ನು ಕಾಲೇಜಿನ ಪ್ರಾಂಶು ಪಾಲರು ವಹಿಸಬೇಕು ಎಂದು ನಿರ್ದೇಶನವನ್ನು ಸಮಿತಿ ನೀಡಿದೆ.

ಶಿಕ್ಷೆಯ ವಿಧಾನ: ವಿದ್ಯಾರ್ಥಿಗಳು ಮಾಡಿರುವ ಪರೀಕ್ಷಾ ಅಕ್ರಮದ ಆಧಾರದಲ್ಲಿ ಮೂರು ವಿಧದ ಶಿಕ್ಷೆ ನೀಡಲಾಗಿದೆ. ಕಡಿಮೆ ಅಪರಾಧ ಎಂದು ಸಾಬೀತಾದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದು ಮಾಡಿ ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕಠಿಣ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿಗಳಿಗೆ 2023ರವರೆಗೂ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. 404 ವಿದ್ಯಾರ್ಥಿಗಳಲ್ಲಿ 178 ವಿದ್ಯಾರ್ಥಿಗಳ 2019ರ ಏಪ್ರಿಲ್/ಮೇ ನಲ್ಲಿ ನಡೆದ ಪ್ರಾಯೋಗಿಕ ಹಾಗೂ ಥಿಯರಿ ಪರೀಕ್ಷೆಗಳು ರದ್ದಾಗಿವೆ. ಅಂತಹ ವಿದ್ಯಾರ್ಥಿಗಳು ಸಾಮಾನ್ಯ ವಿದ್ಯಾರ್ಥಿಗಳಂತೆ 2019ರ ಅಕ್ಟೋಬರ್‌/ನವೆಂಬರ್‌ನಲ್ಲಿ ನಡೆಯುವ ಪರೀಕ್ಷೆಗೆ ದಾಖಲಾತಿ ಮಾಡಿಕೊಳ್ಳಬೇಕು ಮತ್ತು ಎಲ್ಲ ಪರೀಕ್ಷೆಯನ್ನು ಹೊಸದಾಗಿಯೇ ಬರೆಯಬೇಕು. 223 ವಿದ್ಯಾರ್ಥಿಗಳ ಥಿಯರಿ ಪರೀಕ್ಷೆಯನ್ನು ಮಾತ್ರ ರದ್ದು ಮಾಡಲಾಗಿದೆ. ಇಂತಹ ವಿದ್ಯಾರ್ಥಿಗಳು ಸೆಮಿಸ್ಟರ್‌ ಪರೀಕ್ಷೆಯನ್ನು 2019ರ ಅಕ್ಟೋಬರ್‌/ನವೆಂಬರ್‌ನಲ್ಲಿ ಬರೆಯಬಹುದಾಗಿದೆ. ಇನ್ನು 3 ವಿದ್ಯಾರ್ಥಿಗಳ 2019ರ ಏಪ್ರಿಲ್ ಮತ್ತು ಮೇನಲ್ಲಿ ಬರೆದಿರುವ ಎಲ್ಲ ಪರೀಕ್ಷೆಯೂ ರದ್ದಾಗಿದೆ ಹಾಗೂ 2022ರ ಅಕ್ಟೋಬರ್‌/ನವೆಂಬರ್‌ ವರೆಗೂ ಡಿಬಾರ್‌ ಮಾಡಲಾಗಿದೆ. ಈ ವಿದ್ಯಾರ್ಥಿಗಳು 2013ರ ಏಪ್ರಿಲ್/ಮೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತೀರ್ಪಿನಲ್ಲಿ ತಿಳಿಸಿದೆ.

ಆರೋಪಕ್ಕೆ ಅನುಗುಣವಾಗಿ ಶಿಕ್ಷೆ

ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಅಕ್ರಮ ತಡೆಗೆ ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಆದರೂ, ಕೆಲವು ವಿದ್ಯಾರ್ಥಿಗಳು ವಾಮಮಾರ್ಗ ಅನುಸರಿಸುತ್ತಾರೆ. ಇಂತಹ ವಿದ್ಯಾರ್ಥಿಗಳ ವಿಚಾರಣೆ ನಡೆಸಿ, ಅವರ ಆರೋಪಕ್ಕೆ ಅನುಗುಣವಾಗಿ ಶಿಕ್ಷೆ ವಿಧಿಸಿ, ಸಂಬಂಧಪಟ್ಟ ವಿದ್ಯಾರ್ಥಿಗೆ ಹಾಗೂ ಕಾಲೇಜಿಗೆ ಮಾಹಿತಿ ನೀಡಿದ್ದೇವೆ. ವಿದ್ಯಾರ್ಥಿ ಮಾಲ್ಪ್ರಾಕ್ಟೀಸ್‌ ವಿಚಾರಣಾ ಸಮಿತಿ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.