ಬನವಾಸಿ ದೊಡ್ಡ ತೇರಿಗೆ 413 ವಸಂತ; ರಥಕ್ಕೆ ಇದೆ ಕೊನೇ ರಥೋತ್ಸವ


Team Udayavani, Apr 8, 2022, 5:31 PM IST

1-sdsds

ಶಿರಸಿ: ಕದಂಬರ ಆಳ್ವಿಕೆಯ ಬನವಾಸಿಯ ಪುರಾಣ, ಐತಿಹಾಸಿಕ ಪ್ರಸಿದ್ಧ ಮಧು ಬಣ್ಣದ ಮಧುಕೇಶ್ವರ ದೇವರ ಉತ್ಸವ ‌ಮೂರ್ತಿಯನ್ನು ಹೊತ್ತು ಸರ್ವಾಲಂಕಾರ ಭೂಷಿತನಾಗಿ ರಾಜ ಗಾಂಭೀರ್ಯದಲ್ಲಿ ನಡೆಯುತ್ತಿದ್ದ ರಥಕ್ಕೆ 413 ವರ್ಷ!.

ಪಾರ್ವತಿ ಸಹಿತ‌ ಮಧುಕೇಶ್ವರ ದೇವರಿಗೆ ಈ ರಥ ನಡೆಸುವ ಸೇವೆ ಕೊನೇಯದಾಗಲಿದೆ. ಮುಂದಿನ ವರ್ಷ ಹೊಸ‌ ರಥ ನಿರ್ಮಾಣದ ಕಾರ್ಯಕ್ಕೆ ಸಂಕಲ್ಪ ಮಾಡಲಾಗಿದೆ.

ಬನವಾಸಿಯಲ್ಲಿ ಏ.12ರಂದು ಶ್ರೀದೇವರ ರಥೋತ್ಸವ ನಡೆಯಲಿದೆ.‌ ಸುತ್ತಲಿನ ಹತ್ತಾರು ಸೀಮೆಯ‌ ಭಕ್ತರು, ಅಕ್ಕ‌ಪಕ್ಕದ ಜಿಲ್ಲೆಯ ಭಜಕರು ರಥಾರೂಢ ದೇವರಿಗೆ ಹರಕೆ ಸಲ್ಲಿಸಿ ಕೃತಾರ್ಥರಾಗುವುದು ವಾಡಿಕೆ. ಭಕ್ತರು ರಥ ಬೀದಿಯ ತನಕ ರಥೋತ್ಸವ ನಡೆಸಿ ಮಧುಕೇಶ್ವರನಿಗೆ ಉಘೆ ಎನ್ನುತ್ತಾರೆ. ಮೊದಲೆಲ್ಲ ರಥ ತಿರುಗಿಸುವಾಗ ಹುಗಿದು ದಿನಗಟ್ಟಲೆ ಕಾಯುವುದೂ ಇತ್ತು. ಈಗ ಹಾಗಿಲ್ಲ. ಸಿಮೆಂಟ್ ರಸ್ತೆ ಆಗಿದ್ದು, ಆದರೆ, ರಥ 413 ವರ್ಷ ಹಿಂದಿನದ್ದಾಗಿದ್ದರಿಂದ ಹೊಸ ರಥ‌ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಗಿದೆ.

ದಕ್ಷಿಣ ಭಾರತದ ಅತ್ಯಂತ ದೊಡ್ಡ ರಥ ಎಂದೇ ಕರೆಯಲಾಗುವ ಈ ಮಹಾ ರಥವನ್ನು ಮಧುಕೇಶ್ವರ ದೇವರ ರಥೋತ್ಸವಕ್ಕೆ ಸೋದೆ ಅರಸ ರಾಮಚಂದ್ರ ನಾಯಕ ನೂರಾರು‌ ಕುಶಲಕರ್ಮಿಗಳ‌ ಸಹಕಾರದಲ್ಲಿ 4-5 ವರ್ಷಗಳ ಸತತ  ಶ್ರಮ ವಹಿಸಿ ಜಂಬೆ, ಹೊನಲು, ಮತ್ತಿ,ತಾರೆ ಸೇರಿದಂತೆ ಅನೇಕ ಜಾತಿ ಮರ ಬಳಸಿ ನಿರ್ಮಾಣ ಮಾಡಲಾಗಿದೆ. ಎಣ್ಣೆ ಚೆಲ್ಲಿ ರಥವನ್ನು ಉಳಿಸಿಕೊಳ್ಳಲಾಗಿದೆ.

ಹೊಸ ರಥ ನಿರ್ಮಾಣ ಕಾರ್ಯ ಕೂಡ ಆರಂಭವಾಗಿದ್ದು, ಈಗಿನ ರಥ ಸಂರಕ್ಷಣೆ ಮಾಡುವ ಚಿಂತನೆ ನಡೆದಿದೆ. ಏ.12 ರ ರಥೋತ್ಸವಕ್ಕೆ ಭಕ್ತರು ರಥಾರೂಢ ದೇವರನ್ನು ಶತಮಾನಗಳಾಚೆಯ ರಥದ‌ ಮೇಲೆ ಕಾಣಲು, ಹರಕೆ ಒಪ್ಪಿಸಲು ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.