ಮೊದಲ ಲಸಿಕೆ ಪಡೆಯಲು ಶೇ.45 ಜನ ಹಿಂದೇಟು!

ಮಿನಿವಿಧಾನಸೌಧ ಕಚೇರಿ ಮುಂಭಾಗದಲ್ಲೇ ಲಸಿಕೆ ಹಾಕಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ

Team Udayavani, Sep 17, 2021, 6:28 PM IST

ಮೊದಲ ಲಸಿಕೆ ಪಡೆಯಲು ಶೇ.45 ಜನ ಹಿಂದೇಟು!

ದೇವದುರ್ಗ: ಕೋವಿಡ್‌ ಲಸಿಕೆ ಗುರಿ ಮುಟ್ಟಲು ಕಂದಾಯ ಮತ್ತು ಆರೋಗ್ಯ ಇಲಾಖೆ ಸೇರಿ ಇತರೆ ಇಲಾಖೆ ಅ ಧಿಕಾರಿಗಳು, ಸಿಬ್ಬಂದಿ ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿರುವ ಬೆನ್ನಲ್ಲೇ ಶೇ.45 ಜನರು ಮೊದಲನೇ ಡೋಸ್‌ ಲಸಿಕೆ ಪಡೆಯದೇ ಹಿಂದೇಟು ಹಾಕಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

1.80 ಲಕ್ಷಕ್ಕೂ ಅಧಿಕ ಲಸಿಕೆ ಗುರಿ ಹೊಂದಲಾಗಿದೆ. ಶೇ.60 ಜನರು ಮೊದಲನೇ ಡೋಸ್‌ ಲಸಿಕೆ ಪಡೆದಿದ್ದು, ಅವರಲ್ಲಿ ಶೇ.35 ಮಾತ್ರ ಎರಡನೇ ಡೋಸ್‌ ಪಡೆದಿದ್ದಾರೆ. ಇನ್ನುಳಿದವರು ಊರಲ್ಲಲ್ಲಿ, ಆರೋಗ್ಯ ಸಮಸ್ಯೆ ಹೀಗೆ ಒಂದಿಲ್ಲೊಂದು ಕಾರಣಗಳ ನೆಪ ಹೇಳಿ ಡೋಸ್‌ ಪಡೆಯದಿರುವುದು ಆರೋಗ್ಯ ಇಲಾಖೆಗೆ ಬೇಸರ ಮೂಡಿದೆ.

ಪಶು ಸಂಗೋಪನಾ ಇಲಾಖೆ ಕಚೇರಿಯಲ್ಲಿ ಕೋವಿಡ್‌ ಲಸಿಕೆ ಕಾಲ್‌ ಸೆಂಟರ್‌ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರಕ್ಕೆ ಬಹುತೇಕ ಶಿಕ್ಷಕ-ಶಿಕ್ಷಕಿಯರು ನಿಯೋಜನೆಗೊಂಡಿದ್ದಾರೆ. ಮೊದಲನೇ ಡೋಸ್‌ ಲಸಿಕೆ ಪಡೆದವರಿಗೆ ಎರಡನೇ ಡೋಸ್‌ ಸಮಯ ಬಂದಿದ್ದು, ಆಸ್ಪತ್ರೆಗೆ ಬರುವಂತೆ ದೂರವಾಣಿ ಮೂಲಕ ಶಿಕ್ಷಕರು ಮನವಿ ಮಾಡುತ್ತಿದ್ದರೂ ಸ್ಪಂದನೆ ಸಿಗುತ್ತಿಲ್ಲ.

ಇನ್ನು ಗ್ರಾಮೀಣ ಭಾಗದ ಪ್ರತಿಯೊಂದು ಗ್ರಾಪಂ ಪಂಚಾಯಿತಿ, ಪಟ್ಟಣದ ವಾರ್ಡ್ ಗಳಲ್ಲಿ ಲಸಿಕೆ ಕೇಂದ್ರಗಳು ಆರಂಭಿಸಿದ್ದರೂ ಮೊದಲನೇ ಡೋಸ್‌ ಲಸಿಕೆ ಪಡೆಯಲು ಜನ ಬರುತ್ತಿಲ್ಲ. ಮಿನಿವಿಧಾನಸೌಧ ಕಚೇರಿ ಮುಂಭಾಗದಲ್ಲೇ ಲಸಿಕೆ ಹಾಕಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕಂದಾಯ-ಆರೋಗ್ಯ ಇಲಾಖೆ ನಿಗದಿತ ಗುರಿ ಮುಟ್ಟಲು ಅನೇಕ ಕಾರ್ಯಕ್ರಮ ರೂಪಿಸಿಯಾದರೂ ಜಾಗೃತಿ ಮಧ್ಯೆಯೂ ಶೇ.45 ಮೊದಲನೇ ಡೋಸ್‌ ಲಸಿಕೆ ಪಡೆಯುವ ಜನರು ಆಸ್ಪತ್ರೆಗಳತ್ತ ದೌಡಾಯಿಸುತ್ತಿಲ್ಲ.

ಪ್ರತಿ ವಾರ್ಡ್‌ನಲ್ಲಿ ಎರಡು ಲಸಿಕಾ ಕೇಂದ್ರ
ಶುಕ್ರವಾರ ನಡೆಯುವ “ಲಸಿಕೆ ಮೇಳ’ ಕಾರ್ಯಕ್ರಮ ಅಂಗವಾಗಿ ಪ್ರತಿಯೊಂದು ವಾರ್ಡ್‌ನಲ್ಲಿ ಎರಡು ಲಸಿಕೆ ಕೇಂದ್ರಗಳು ಆರಂಭಿಸಬೇಕೆನ್ನುವ ಚಿಂತನೆ ನಡೆದಿದೆ. ಈಗಾಗಲೇ ಪುರಸಭೆ ಸದಸ್ಯರು, ವರ್ತಕರ ಸಂಘದ ಅಧ್ಯಕ್ಷ-ಸದಸ್ಯರ ಸಭೆ ನಡೆಸಲಾಗಿದೆ. ಕೋವಿಡ್‌ ಲಸಿಕೆ ಗುರಿ ಮುಟ್ಟಲು ಕಂದಾಯ ಮತ್ತು ಆರೋಗ್ಯ ಇಲಾಖೆ ಶ್ರಮಕ್ಕೆ ಬಹುತೇಕರು ಸ್ಪಂದಿಸದಿರುವುದು ಬೇಸರಕ್ಕೆ ಕಾರಣವಾಗಿದೆ.

ನೂರಕ್ಕೆ ನೂರರಷ್ಟು ಲಸಿಕೆ ಗುರಿ
ಕೋವಿಡ್‌ ಲಸಿಕೆ ಗುರಿ ಮುಟ್ಟಲು ಗ್ರಾಪಂ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಶ್ರಮ ವಹಿಸಿದ್ದಾರೆ. ಕಂದಾಯ- ಆರೋಗ್ಯ ಇಲಾಖೆ ಒಂದು ಹೆಜ್ಜೆ ಮುಂದಿಟ್ಟಿದ್ದು, ಗೋಪಾಳಪುರು, ಮಾನಶಯ್ಯನದೊಡ್ಡಿ ಗ್ರಾಮದಲ್ಲಿ ನೂರಕ್ಕೆ ನೂರರಷ್ಟು ಲಸಿಕೆ ಗುರಿ ಮುಟ್ಟಲಾಗಿದೆ.

ಗೋಪಾಳಪುರು, ಮಾನಶಯ್ಯನದೊಡ್ಡಿ ಗ್ರಾಮದಲ್ಲಿ ಶೇ.100 ಜನರಿಗೆ ಕೋವಿಡ್‌ ಲಸಿಕೆ ಹಾಕಲಾಗಿದೆ. ಶೇ.45ರಷ್ಟು ಮೊದಲನೇ ಡೋಸ್‌ ಲಸಿಕೆ ಪಡೆಯದವರನ್ನು ಗುರುತಿಸಲು ವಾರ್ಡ್‌ಗಳಲ್ಲಿ ಎರಡು ಲಸಿಕೆ ಕೇಂದ್ರಗಳು ಆರಂಭಿಸಲಾಗುತ್ತಿದೆ. ಸಮುದಾಯ ಸಹಕಾರ ಬಹಳ ಅಗತ್ಯವಿದೆ.
ಡಾ| ಬನದೇಶ್ವರ,
ತಾಲೂಕು ಆರೋಗ್ಯಾಧಿಕಾರಿ

ಪುರಸಭೆ ಹಾಗೂ ವರ್ತಕರ ಸಂಘದ ಸದಸ್ಯರ ಸಭೆ ನಡೆಸಲಾಗಿದೆ. ಲಸಿಕೆ ಮೇಳ ಕಾರ್ಯಕ್ರಮ ಮೂಲಕ ವಾರ್ಡ್‌ನಲ್ಲಿ ಎರಡು ಲಸಿಕೆ ಕೇಂದ್ರಗಳು ಆರಂಭಿಸಲಾಗುತ್ತಿದ್ದು, ಸದಸ್ಯರು ಸಮುದಾಯ ಸಹಕಾರಿಸುವಂತೆ ಮನವಿ ಮಾಡಲಾಗಿದೆ.
ಶ್ರೀನಿವಾಸ ಚಾಪಲ್‌, ಪ್ರಭಾರ ತಹಶೀಲ್ದಾರ್‌

*ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.