ತುರ್ತುಪರಿಸ್ಥಿತಿಗೆ 48 ವರ್ಷ; ಹೋರಾಟಗಾರರಿಗೆ ಪಿಂಚಣಿ ಯೋಜನೆ ನನೆಗುದಿಗೆ


Team Udayavani, Jun 25, 2023, 5:37 AM IST

ತುರ್ತುಪರಿಸ್ಥಿತಿಗೆ 48 ವರ್ಷ; ಹೋರಾಟಗಾರರಿಗೆ ಪಿಂಚಣಿ ಯೋಜನೆ ನನೆಗುದಿಗೆ

ಉಡುಪಿ: ದೇಶವು ತುರ್ತು ಪರಿಸ್ಥಿತಿಯನ್ನು ಕಂಡು 48 ವರ್ಷವಾಗುತ್ತಿದ್ದು ಇದರಲ್ಲಿ ಹೋರಾಟ ಮಾಡಿದವರು ಪಿಂಚಣಿ ನಿರೀಕ್ಷೆಯಲ್ಲಿದ್ದು ಒಬ್ಬೊಬ್ಬರೇ ಇಹಲೋಕ ತ್ಯಜಿಸುತ್ತಿದ್ದಾರೆ.

1975ರ ಜೂನ್‌ 25ರಂದು ಆರಂಭಗೊಂಡ ತುರ್ತು ಪರಿಸ್ಥಿತಿ 1977ರ ಮಾರ್ಚ್‌ 21ರ ವರೆಗೆ ಜಾರಿ ಯಲ್ಲಿತ್ತು. ಇದರ ವಿರುದ್ಧ ಸಾವಿ ರಾರು ಮಂದಿ ಹೋರಾಟ ನಡೆಸಿ ಜೈಲುವಾಸ ಅನುಭವಿಸಿದ್ದರು. ಆಗ ಅವರಿಗೆ ಯವ್ವನದ ಹುರುಪಿದ್ದರೆ ಈಗ ಬಹುತೇಕರು ಇಹಲೋಕ ತ್ಯಜಿಸಿದ್ದು, ಕೆಲವರು ಮಾತ್ರ ಇಳಿವಯಸ್ಸಿನಲ್ಲಿದ್ದಾರೆ. ಬಹು ಮಂದಿ ಬಡತನದ ಬೇಗೆಯಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.

ಕೆಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಹೋರಾಟಗಾರರಿಗೆ ಪಿಂಚಣಿ ಯೋಜನೆ ಜಾರಿಗೊಂಡಿದ್ದು ಕರ್ನಾಟಕ ದಲ್ಲಿಯೂ ಈ ಪ್ರಸ್ತಾವ 2018ರಲ್ಲಿ ಚಾಲ್ತಿಗೆ ಬಂತು. 2 ವರ್ಷ ಗಳ ಹಿಂದೆ ಇದರ ಅಂದಾಜು ಪಟ್ಟಿಯೂ ಸಿದ್ಧಗೊಂಡಿತು. ರಾಜ್ಯದಲ್ಲಿ ಸುಮಾರು 4,500 ಮಂದಿ, ದಕ್ಷಿಣ ಕನ್ನಡದಲ್ಲಿ 206 ಮಂದಿ ಮತ್ತು ಉಡುಪಿ ಯಲ್ಲಿ 28 ಮಂದಿಯ ಹೆಸರುಗಳು ಶಿಫಾರಸು ಆದವು. ಲೋಕತಂತ್ರ ಸೇನಾನಿ ಸಂಘದವರು ಮಾಹಿತಿ ಕಲೆ ಹಾಕಿ ಜಿಲ್ಲಾಧಿಕಾರಿ ಕಚೇರಿಗೆ ನೀಡಿ ಜಿಲ್ಲಾಧಿಕಾರಿಯವರು ಅಧೀನ ಅಧಿಕಾರಿಗಳಿಂದ ಪರಿಶೀಲನೆ ನಡೆಸಿದ್ದರು. ಆದರೆ ಕಾಲ ಉರುಳಿತು, ಆಸೆ ತೋರಿಸಿದ್ದ ಬಿಜೆಪಿ ಸರಕಾರವೂ ಉರುಳಿ ಈಗ ಕಾಂಗ್ರೆಸ್‌ ಸರಕಾರ ಬಂದಿದೆ. ಈ ಪ್ರಸ್ತಾವವೂ ನನೆಗುದಿಗೆ ಬಿದ್ದಂತಾಗಿದೆ.

ವರ್ಷಕ್ಕೆ ಒಮ್ಮೆ ಅಥವಾ ಸಂದ ರ್ಭಾನುಸಾರ ತುರ್ತು ಪರಿಸ್ಥಿತಿ ಹೋರಾಟಗಾರರನ್ನು ವೇದಿಕೆಗೆ ಕರೆದು ಸಮ್ಮಾನ ಮಾಡುವಷ್ಟರ ಮಟ್ಟಿಗೆ ಈ ಸ್ಮರಣೆ ನಡೆಯುತ್ತಿದೆ. ಇನ್ನು ಕೆಲವು ವರ್ಷ ಉರುಳಿದರೆ ಈಗ ಸ್ವಾತಂತ್ರ್ಯ ಹೋರಾಟಗಾರರು ಹೇಗೆ ಸಿಗುವುದಿಲ್ಲವೋ ಹಾಗೆ ತುರ್ತು ಪರಿಸ್ಥಿತಿ ಹೋರಾಟಗಾರರೂ ಇಲ್ಲ ಎಂದಾಗುತ್ತದೆ. ಏತನ್ಮಧ್ಯೆ 2025ಕ್ಕೆ ತುರ್ತು ಪರಿಸ್ಥಿತಿಗೆ 50 ವರ್ಷ ತುಂಬುತ್ತದೆ.

ತುರ್ತು ಪರಿಸ್ಥಿತಿ ಹೋರಾಟ ಗಾರರು ಪಿಂಚಣಿಯನ್ನು ಕೇಳಲಿಲ್ಲ. ಬಿಜೆಪಿಯಿಂದಲೇ ಇದರ ಬಗ್ಗೆ ಪ್ರಸ್ತಾವ ಬಂದು ನಾವೆಲ್ಲರೂ ಹೋರಾಟ ಗಾರರ ಮಾಹಿತಿಗಳನ್ನು ಕಲೆ ಹಾಕಿ ದೆವು. ಅದಕ್ಕಾಗಿ ಸಾಕಷ್ಟು ಪರಿಶ್ರಮ ವನ್ನೂ ಪಟ್ಟೆವು. ಆದರೆ ಸಫ‌ಲವಾಗ ‌ಲಿಲ್ಲ. ಆದರೂ ನಮ್ಮ ನಿರಂತರ ಪ್ರಯತ್ನ ಇದ್ದೇ ಇದೆ.
– ನಾರಾಯಣ ಗಟ್ಟಿ ಪಾಂಡೇಶ್ವರ, ಮಂಗಳೂರು, ರಾಜ್ಯ ಉಪಾಧ್ಯಕ್ಷರು, ದ.ಕ., ಉಡುಪಿ ಜಿಲ್ಲೆಯ ಪ್ರಭಾರಿ, ಲೋಕತಂತ್ರ ಸೇನಾನಿ ಸಂಘ

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.