ಧಾರವಾಡದಲ್ಲಿ 4ನೇ ಬಾರಿ ಅರಳಿದ ಕಮಲ; ಫ‌ುಲ್‌ ಜೋಶ್‌

ಸತತ ಜಯಕಾರ; ಮೋದಿ ಝೇಂಕಾರ

Team Udayavani, May 24, 2019, 6:00 AM IST

BN

ಧಾರವಾಡ: ಬಿಜೆಪಿ ಭದ್ರಕೋಟೆ ಎಂದೇ ಕರೆಯಿಸಿಕೊಳ್ಳುವ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಹ್ಲಾದ ಜೋಶಿ ಸತತ 4ನೇ ಬಾರಿಗೆ ಜಯಭೇರಿ ಬಾರಿಸಿದ್ದಾರೆ.

ಅವರು ಒಟ್ಟು 6,84,837 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿನಯ್‌ಕುಲಕರ್ಣಿ(4,79,765 ಮತಗಳು) ಅವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ 1.13 ಲಕ್ಷಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಸಂಸದ ಪ್ರಹ್ಲಾದ ಜೋಶಿ ಈ ಬಾರಿ ಗೆಲುವಿನ ಅಂತರ ಕಡಿಮೆಯಾಗುತ್ತದೆ ಎಂದೇ ವಿಶ್ಲೇಷಿಸಲಾಗಿತ್ತು. ಆದರೆ ಗೆಲುವಿನ ಅಂತರ ಇನ್ನಷ್ಟು ಹೆಚ್ಚಿದ್ದು, 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಸುನಾಮಿಯಂತೆಕೆಲಸ ಮಾಡಿದೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಉಂಟಾದ ಗೊಂದಲದ ಪರಿಪೂರ್ಣ ಲಾಭವನ್ನು ಪಡೆದುಕೊಂಡ ಬಿಜೆಪಿ ಮತ್ತು ಆರೆಸ್ಸೆಸ್‌ ಕ್ರಮಬದಟಛಿವಾಗಿ ತೆರೆಮರೆಯಲ್ಲೇ ಕೆಲಸ ಮಾಡಿದ್ದು ಬಿಜೆಪಿ ಗೆಲುವಿಗೆ ಪ್ರಮುಖ ಕಾರಣವಾಗಿದೆ.

7ರಲ್ಲೂ ಕಮಲ ಮುನ್ನಡೆ: ಇನ್ನು ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರವನ್ನು ಹೊರತುಪಡಿಸಿದರೆ ಇನ್ನುಳಿದ ಎಲ್ಲ ಏಳೂ ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದೇ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣವಾಯಿತು.

ನಿರೀಕ್ಷೆಯಂತೆ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿಯೇ ಅತೀ ಹೆಚ್ಚು 53 ಸಾವಿರ ಮತಗಳು ಬಿಜೆಪಿಗೆ ಮುನ್ನಡೆಯಾಗಿ ಸಿಕ್ಕಿದ್ದು, ಬಿಜೆಪಿಯ ಗೆಲುವನ್ನು ಖಚಿತ ಪಡಿಸಿತು. ಕಲಘಟಗಿ-38 ಸಾವಿರ, ಹು-ಧಾ ಪಶ್ಚಿಮ-52 ಸಾವಿರ, ಧಾರವಾಡ ಗ್ರಾಮೀಣ-24 ಸಾವಿರ,
ಕುಂದಗೋಳ-20 ಸಾವಿರ, ಶಿಗ್ಗಾವಿ-18 ಸಾವಿರ, ಹಾಗೂ ನವಲಗುಂದ-283 ಮತಗಳು ಬಿಜೆಪಿಗೆ ಮುನ್ನಡೆಯಾಗಿ ಸಿಕ್ಕವು. ಹು-ಧಾ ಪೂರ್ವ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ಗೆ 6296 ಮತಗಳ ಲೀಡ್‌ ಸಿಕ್ಕಿದ್ದು, ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ ಬಹುದೊಡ್ಡ ಅಂತರದ ಗೆಲುವಿಗೆ ನಾಂದಿ ಬರೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದ, ಅಭಿವೃದಿಟಛಿ, ಸಜ್ಜನಿಕೆ ಮತ್ತು ಕ್ಷೇತ್ರದಲ್ಲಿ ನಾನು ಮಾಡಿದ ಕೆಲಸಕ್ಕೆ ಜಯ ಸಿಕ್ಕಿದೆ. ಸಮ್ಮಿಶ್ರ ಸರ್ಕಾರ ಅಪವಿತ್ರ ಎನ್ನುವುದನ್ನು ಮತದಾರರು ಮತ್ತೂಮ್ಮೆ ಸಾಬೀತು ಪಡಿಸಿದ್ದಾರೆ. ಇದು ಜಾತಿ ರಾಜಕಾರಣದ ಸೋಲು.
– ಸಂಸದ ಪ್ರಹ್ಲಾದ ಜೋಶಿ

ಮತದಾರರು ನೀಡಿದ ತೀರ್ಪನ್ನು ನಾನು ತಲೆಬಾಗಿ ಸ್ವೀಕರಿಸುತ್ತೇನೆ. ಇಲ್ಲಿ ಪ್ರಹ್ಲಾದ ಜೋಶಿ ಅವರು ಗೆದ್ದಿಲ್ಲ, ಬದಲಿಗೆ ಮೋದಿಯವರ ಅಲೆ ಅವರನ್ನು ಗೆಲ್ಲಿಸಿದೆ ಅಷ್ಟೆ. ನನ್ನ ಜನಸೇವೆ ನಾನು ಅಧಿಕಾರದಲ್ಲಿ ಇಲ್ಲದಿದ್ದರೂ ಮುಂದುವರಿಯುತ್ತದೆ.
-ವಿನಯ್‌ ಕುಲಕರ್ಣಿ,
ಸೋತ ಅಭ್ಯರ್ಥಿ (ಕಾಂಗ್ರೆಸ್‌ )

ಗೆಲುವಿಗೆ 3 ಕಾರಣ
1.ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿ ಅಲೆ ಜತೆಗೆ
ವ್ಯವಸ್ಥಿತ ಪ್ರಚಾರ ಅಬ್ಬರ
3.ಲಿಂಗಾಯತರು ಮತ್ತಷ್ಟು ಗಟ್ಟಿಯಾಗಿ ಬಿಜೆಪಿ ಬೆಂಬಲಕ್ಕೆ ನಿಲ್ಲು ವಂತೆ ಮಾಡಿದ ತಂತ್ರ ಜಾತಿಬೇಧ ಮರೆತು
2.ಯುವಕರು ಮೋದಿ ಹಾಗೂ ಬಿಜೆಪಿ ಬೆನ್ನಿಗೆ ನಿಂತಿದ್ದು

ಸೋಲಿಗೆ 3 ಕಾರಣ
1. ಕೊನೆ ಕ್ಷಣದಲ್ಲಿ ಟಿಕೆಟ್‌ ನೀಡಿದ್ದರಿಂದ ಕೈ ಅಭ್ಯರ್ಥಿಗೆ
ಜನಮನ ತಲುಪಲು ಆಗಲಿಲ್ಲ
2.ಕಾಂಗ್ರೆಸ್‌ ಪಕ್ಷದಲ್ಲಿನ ಒಳಜಗಳ ಮತ್ತು ಗುಂಪುಗಾರಿಕೆ, ಪ್ರಚಾರಕ್ಕೆ ಕಡಿಮೆ ಅವಧಿ ಸಿಕ್ಕಿದ್ದು
3.ಪ್ರಚಾರಕ್ಕೆ ಗಾಂಧಿ ಕುಟುಂಬ ಮತ್ತು ಸ್ಟಾರ್‌ ಕ್ಯಾಂಪೇನರ್‌
ಗಳು ಬರಲೇ ಇಲ್ಲ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.