ನೇಪಾಳದಲ್ಲಿ 5.2 ತೀವ್ರತೆಯ ಭೂಕಂಪ; ಸಾವುನೋವಿನ ತತ್ ಕ್ಷಣದ ವರದಿಗಳಿಲ್ಲ
Team Udayavani, Apr 1, 2023, 10:05 PM IST
ಕಠ್ಮಂಡು: ನೇಪಾಳದ ದೋಲಾಖಾ ಜಿಲ್ಲೆಯ ಸೂರಿಯಲ್ಲಿ ಶನಿವಾರ ಬೆಳಗ್ಗೆ ಮಧ್ಯಮ ತೀವ್ರತೆಯ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಕಠ್ಮಂಡುವಿನಿಂದ 180 ಕಿಮೀ ಪೂರ್ವಕ್ಕೆ ಡೋಲಾಖಾದಲ್ಲಿ ಬೆಳಗ್ಗೆ 11.27 ಕ್ಕೆ 5.2 ತೀವ್ರತೆಯ ಭೂಕಂಪ ದಾಖಲಾಗಿದೆ.
ನೆರೆಯ ಓಖಲ್ದುಂಗಾ, ರಾಮೆಚಾಪ್, ಸಿಂಧುಪಾಲ್ ಚೌಕ್ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ ಹಾಗೂ ಕಠ್ಮಂಡು ಕಣಿವೆಯಲ್ಲಿಯೂ ಕಂಪನದ ಅನುಭವವಾಗಿದೆ. ಆದಾಗ್ಯೂ, ಭೂಕಂಪದಿಂದ ಯಾವುದೇ ಹಾನಿ ಅಥವಾ ಮಾನವ ಸಾವುನೋವುಗಳ ಬಗ್ಗೆ ತತ್ ಕ್ಷಣದ ವರದಿಗಳಿಲ್ಲ.
ಶನಿವಾರ ಮುಂಜಾನೆ 3.19ಕ್ಕೆ 4.2 ತೀವ್ರತೆಯ ಭೂಕಂಪನ ದಾಖಲಾಗಿದ್ದು, ಕಠ್ಮಂಡುವಿನಿಂದ ಪಶ್ಚಿಮಕ್ಕೆ 130 ಕಿಮೀ ದೂರದಲ್ಲಿರುವ ಗೂರ್ಖಾ ಜಿಲ್ಲೆಯಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿತ್ತು.
ಏಪ್ರಿಲ್ 2015 ರಲ್ಲಿ, ನೇಪಾಳದಲ್ಲಿ 7.8 ತೀವ್ರತೆಯ ವಿನಾಶಕಾರಿ ಭೂಕಂಪವು ಸುಮಾರು 9,000 ಜನರನ್ನು ಬಲಿ ಪಡೆದಿತ್ತು, 22,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 800,000 ಮನೆಗಳು ಮತ್ತು ಶಾಲಾ ಕಟ್ಟಡಗಳನ್ನು ಹಾನಿಗೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ