![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Haryana: ಕಾಂಗ್ರೆಸ್ ಶಾಸಕನ ಮನೆಯಲ್ಲಿ 5 ಕೋ.ರೂ., 5 ಕೆ.ಜಿ. ಚಿನ್ನ ಪತ್ತೆ!
Team Udayavani, Jan 6, 2024, 12:50 AM IST
![har mla](https://www.udayavani.com/wp-content/uploads/2024/01/har-mla-620x349.jpg)
ಚಂಡೀಗಢ: ಒಡಿಶಾದಲ್ಲಿ ಕಾಂಗ್ರೆಸ್ನ ರಾಜ್ಯಸಭೆ ಸದಸ್ಯ ಧೀರಜ್ ಸಾಹು ಮನೆ, ಕಚೇರಿಗಳ ಮೇಲಿನ ಇ.ಡಿ. ದಾಳಿ ವೇಳೆ 300 ಕೋಟಿ ರೂ. ನಗದು ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ಈಗ ಹರಿಯಾಣದ ಕಾಂಗ್ರೆಸ್ ಶಾಸಕರೊಬ್ಬರ ಮನೆ ಮೇಲಿನ ದಾಳಿಯೂ ಭಾರೀ ಸುದ್ದಿ ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಹರಿಯಾಣದ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಮತ್ತು ಇಂಡಿಯನ್ ನ್ಯಾಶನಲ್ ಲೋಕ ದಳ (ಐಎನ್ಎಲ್ಡಿ) ಮಾಜಿ ಶಾಸಕ ದಿಲ್ಭಾಗ್ ಸಿಂಗ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ. ಈ ವೇಳೆ 5 ಕೋಟಿ ರೂ. ನಗದು, 100ಕ್ಕೂ ಹೆಚ್ಚು ಬಾಟಲ್ ಮದ್ಯ, ಅಕ್ರಮವಾಗಿ ಸಂಗ್ರಹಿಸಿದ್ದ ವಿದೇಶಿ ಬಂದೂಕುಗಳು, ಸುಮಾರು 300 ಗುಂಡುಗಳು ಮತ್ತು ಸುಮಾರು 5 ಕೆ.ಜಿ. ತೂಕದ ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದೆ.
ದಿಲ್ಭಾಗ್ ಸಿಂಗ್ ಯುಮುನಾನಗರ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಪನ್ವಾರ್ ಅವರು ಸೋನಿಪತ್ ಕ್ಷೇತ್ರದ ಶಾಸಕರಾಗಿದ್ದಾರೆ. ಇವರಿಬ್ಬರು ಹಾಗೂ ಇವರ ಸಹಚರರಿಗೆ ಸೇರಿದ 20 ಸ್ಥಳಗಳ ಮೇಲೆ ಇ.ಡಿ. ದಾಳಿ ನಡೆಸಿದೆ. ಗುತ್ತಿಗೆ ಅವಧಿ ಪೂರ್ಣಗೊಂಡು, ಗಣಿಗಾರಿಕೆ ನಡೆಸದಂತೆ ನ್ಯಾಯಾಲಯದ ಆದೇಶವಿದ್ದರೂ ಯಮುನಾನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಜಲ್ಲಿ ಮತ್ತು ಮರಳು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ಹರಿಯಾಣ ಪೊಲೀಸರು ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇವುಗಳನ್ನು ಆಧರಿಸಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಇ.ಡಿ. ಪ್ರಕರಣ ದಾಖಲಿಸಿದ್ದು, ಇದರ ಭಾಗವಾಗಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.