Education: ಸರಕಾರಿ ಶಾಲೆ, ಕಾಲೇಜುಗಳಿಗೆ 5 ಸೀಟರ್‌ ರಿವರ್ಸೆಬಲ್‌ ಡೆಸ್ಕ್


Team Udayavani, Feb 2, 2024, 1:18 AM IST

revers desk

ಉಡುಪಿ: ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ರಾಜ್ಯದ ಸರಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದೊಡ್ಡ ಪ್ರಮಾಣದಲ್ಲಿ ಡೆಸ್ಕ್‌ಗಳನ್ನು ಪೂರೈಸಲು ರಾಜ್ಯ ಸರಕಾರ ಮುಂದಾಗಿದೆ.

ಅಧ್ಯಯನಕ್ಕೆ ಅನುಕೂಲವಾಗುವ ಡೆಸ್ಕ್ಗಳಿಗೆ ಅನೇಕ ವರ್ಷದಿಂದ ಸರಕಾರಿ ಶಾಲಾ ಕಾಲೇಜುಗಳು ಬೇಡಿಕೆ ಇಡುತ್ತಲೇ ಬಂದಿವೆ. ಕೊಠಡಿ ನಿರ್ಮಾಣ/ದುರಸ್ತಿ ಇತ್ಯಾದಿಗಳಿಗೆ ಆದ್ಯತೆ ನೀಡಲಾಗುತ್ತಿತ್ತೇ ಹೊರತು ಬೆಂಚ್‌-ಡೆಸ್ಕ್ಗಳ ಪೂರೈಕೆ ಆಗುತ್ತಿರಲಿಲ್ಲ. ಬಹುತೇಕ ಶಾಲೆಗಳಲ್ಲಿ ಸ್ಥಳೀಯ ದಾನಿಗಳ ಸಹಕಾರೊಂದಿಗೆ ತುರ್ತು ಅಗತ್ಯಕ್ಕೆ ಅನುಗುಣವಾಗಿ ಡೆಸ್ಕ್ಗಳನ್ನು ಖರೀದಿಸಿ ವಿದ್ಯಾರ್ಥಿಗಳಿಗೆ ಒದಗಿಸುತ್ತಿವೆ. 8 ಸಾವಿರ ವಿವೇಕ ಕೊಠಡಿ ನಿರ್ಮಿಸಿದ್ದರೂ ಅದಕ್ಕೆ ಬೇಕಾಡ ಡೆಸ್ಕ್, ಬೆಂಚ್‌ ಇತ್ಯಾದಿ ನೀಡಿರಲಿಲ್ಲ. ಇದೀಗ ಸರಕಾರವೇ ಶಾಲಾ, ಕಾಲೇಜಿಗೆ ಸುಸಜ್ಜಿತ ಡೆಸ್ಕ್ ಪೂರೈಸಲು ಟೆಂಡರ್‌ ಪೂರ್ಣಗೊಳಿಸಿದೆ.

5 ಸೀಟರ್‌ ರಿವರ್ಸೆಬಲ್‌ ಡೆಸ್ಕ್
ಮರದ ಹಲಗೆ ಬಳಸಿ, ಕಬ್ಬಿಣದ ಪಟ್ಟಿಗಳೊಂದಿಗೆ ಸಿದ್ಧಪಡಿಸುತ್ತಿರುವ 5 ಸೀಟರ್‌ ರಿವರ್ಸೆಬಲ್‌ ಡೆಸ್ಕ್ ಶಾಲೆಗಳ ಬೇಡಿಕೆಗೆ ಅನುಗು ಣವಾಗಿ ಪೂರೈಕೆಯಾಗಲಿದೆ. ಒಂದು ಡೆಸ್ಕ್ನಲ್ಲಿ ಐವರು ಕುಳಿತುಕೊಳ್ಳಬಹುದಾಗಿದೆ. ರಾಜ್ಯ ಅರಣ್ಯ ಕೈಗಾರಿಕೆ ನಿಗಮದಿಂದ ಡೆಸ್ಕ್ಗಳನ್ನು ಪೂರೈ ಸಲು ಟೆಂಡರ್‌ ಅನುಮತಿ ನೀಡಲಾಗಿದೆ. 7,365 ರೂ.ಗಳ ಘಟಕ ವೆಚ್ಚದಲ್ಲಿ ಡೆಸ್ಕ್ಗಳನ್ನು ಸಿದ್ಧಪಡಿಸಲಾಗುವುದು. ಶೇ. 10ರಷ್ಟು ಹಣವನ್ನು ಆರಂಭದಲ್ಲಿ ಹಾಗೂ ಉಳಿದ ಶೇ. 90ನ್ನು ಡಿಡಿಪಿಐಗಳ ಮೂಲಕ ನಿಗಮಕ್ಕೆ ಡೆಸ್ಕ್ ಪೂರೈಕೆ ಸಮಯದಲ್ಲಿ ನೀಡಲಾಗುತ್ತದೆ. ಉಡುಪಿ ಜಿಲ್ಲೆಗೆ 60,61,395 ರೂ. ಹಾಗೂ ದ.ಕ. ಜಿಲ್ಲೆಗೆ 1,02,22,620 ರೂ. ಅನುದಾನ ಮೀಸಲಿಡಲಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಸುಮಾರು 49 ಕೋ.ರೂ.ಗಳನ್ನು ಇದಕ್ಕಾಗಿ ಮೀಸಲಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿಇಒಗಳಿಂದ ಮಾಹಿತಿ
ಯಾವ ಶಾಲೆ ಮತ್ತು ಪಿಯು ಕಾಲೇಜಿಗೆ ತುರ್ತು ಡೆಸ್ಕ್ನ ಅಗತ್ಯವಿದೆ ಎಂಬ ಮಾಹಿತಿಯನ್ನು ಶಾಲೆ, ಕಾಲೇಜಿನಿಂದ ಕ್ಷೇತ್ರ ಶಿಕ್ಷಣಾ ಧಿಕಾರಿ(ಬಿಇಒ)ಗಳು ಪಡೆದು, ಡಿಡಿಪಿಐ ಕಚೇರಿಗೆ ಸಲ್ಲಿಸಿದ್ದಾರೆ. ಡಿಡಿಪಿಐ ಕಚೇರಿಯಿಂದ ಅದನ್ನು ಕೇಂದ್ರ ಕಚೇರಿಗೆ ಕಳುಹಿಸಿಕೊಡಲಾಗಿದೆ.

ಗುಣಮಟ್ಟ ಪರಿಶೀಲನೆ
ಡೆಸ್ಕ್ ಪೂರೈಕೆಗೂ ಮೊದಲು ಗುಣಮಟ್ಟ ಪರಿಶೀಲನೆ ನಡೆಯಲಿದೆ. ನಿಗಮವು ಡೆಸ್ಕ್ ಸಿದ್ಧಪಡಿಸಿದ ಅನಂತರದಲ್ಲಿ ಅದರ ಸ್ಯಾಂಪಲನ್ನು ಶಿಕ್ಷಣ ಇಲಾಖೆಗೆ ಕಳುಹಿಸ ಬೇಕು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಡಿಡಿಪಿಐ, ಪಿಯು ಇಲಾಖೆಯ ಡಿಡಿಪಿಯು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಒಳ ಗೊಂಡ ಸಮಿತಿಯು ಡೆಸ್ಕ್ನ ಗುಣಮಟ್ಟ ಪರಿಶೀಲಿಸ ಲಿದೆ. ಗುಣಮಟ್ಟ ಚೆನ್ನಾಗಿದ್ದರೆ ಶಾಲಾ, ಕಾಲೇಜುಗಳಿಗೆ ಪೂರೈಕೆಗೆ ಅನುಮೋದನೆ ಸಿಗಲಿದೆ. ಒಂದೊಮ್ಮೆ ಕಳಪೆ ಗುಣಮಟ್ಟದ್ದಾಗಿದ್ದು, ಹಣ ಪಾವತಿಸಿದ್ದರೆ ಈ ಸಮಿತಿಯೇ ಅದಕ್ಕೆ ಹೊಣೆಯಾಗಿರಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಜಿಲ್ಲೆಯ ಕೆಲವು ಶಾಲಾ ಕಾಲೇಜು ಗಳಲ್ಲಿ ಡೆಸ್ಕ್ ಕೊರತೆ ಹಾಗೂ ಬೇಡಿಕೆ ಇದ್ದುದ್ದರಿಂದ ಬಿಇಒಗಳ ಮೂಲಕ ಪಟ್ಟಿ ತರಿಸಿಕೊಂಡು ರಾಜ್ಯ ಕಚೇರಿಗೆ ಸಲ್ಲಿಸಿದ್ದೇವೆ. ಟೆಂಡರ್‌ ಕಾರ್ಯ ಮುಗಿದಿದೆ. ಒಂದೆರೆಡು ತಿಂಗಳ ಒಳಗಾಗಿ ಪೂರೈಕೆಯಾಗಲಿದೆ.
– ದಯಾನಂದ ನಾಯಕ್‌, ಕೆ. ಗಣಪತಿ, ದ.ಕ. ಮತ್ತು ಉಡುಪಿ, ಡಿಡಿಪಿಐಗಳು

 ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.