ಉಗ್ರರ ಹಿಮ್ಮೆಟ್ಟಿಸಲು 50 ಕಮಾಂಡೋಗಳು ರೆಡಿ

ರಾಷ್ಟ್ರರಾಜಧಾನಿಯ ಸುರಕ್ಷತೆಗಾಗಿ ಸಜ್ಜಾಯ್ತು ಟೀಂ; ಕಾಶ್ಮೀರ, ನಕ್ಸಲ್‌ಪೀಡಿತ ಪ್ರದೇಶಗಳಿಂದ ಸಿಆರ್‌ಪಿಎಫ್ ಯೋಧರ ಆಯ್ಕೆ

Team Udayavani, Jan 19, 2022, 7:00 AM IST

thumb 5

ನವದೆಹಲಿ: ಕಾಶ್ಮೀರದಲ್ಲಿ ನೂರಾರು ಉಗ್ರರನ್ನು ಹಾಗೂ ರೆಡ್‌ ಝೋನ್‌ನಲ್ಲಿ ಹಲವು ನಕ್ಸಲರನ್ನು ಸದೆಬಡಿದಿರುವ ಸಿಆರ್‌ಪಿಎಫ್ ನ 50 ಕಮಾಂಡೋಗಳು ಇನ್ನು ರಾಷ್ಟ್ರ ರಾಜಧಾನಿಯನ್ನು ಕಾಯಲಿದ್ದಾರೆ!

ಹೌದು, ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನು ಮುಂದೆ ಯಾವುದೇ ಭಯೋತ್ಪಾದಕ ದಾಳಿ ಅಥವಾ ಆತ್ಮಾಹುತಿ ದಾಳಿಗಳನ್ನು ಎದುರಿಸಲೆಂದೇ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ(ಸಿಆರ್‌ಪಿಎಫ್)ಯ 50 ಕಮಾಂಡೋಗಳನ್ನು ಆಯ್ಕೆ ಮಾಡಲಾಗಿದೆ.

ಕಾಶ್ಮೀರ ಕಣಿವೆಯಲ್ಲಿ ಹೇಗೆ ಸಿಆರ್‌ಪಿಎಫ್ ನ ಕ್ಷಿಪ್ರ ಕಾರ್ಯಪಡೆ(ಕ್ಯೂಎಟಿ) ಕಾರ್ಯನಿರ್ವಹಿಸುತ್ತಿದೆಯೋ, ಅದೇ ಮಾದರಿಯಲ್ಲಿ ದೆಹಲಿ ಕ್ಷಿಪ್ರ ಕಾರ್ಯಪಡೆಯು, ಸರ್ಕಾರದ ಸೂಚನೆ ಬಂದ ಕೂಡಲೇ ಯಾವುದೇ ಫಿದಾಯೀನ್‌ ಅಥವಾ ಉಗ್ರ ದಾಳಿಯನ್ನು ಸಮರ್ಥವಾಗಿ ಎದುರಿಸುವ ಕೆಲಸ ಮಾಡಲಿದೆ. ಈ 50 ಯುವ ಕಮಾಂಡೋಗಳಿಗೆ ಹಗಲಿರುಳೆನ್ನದೆ ಕಾರ್ಯನಿರ್ವಹಿಸಲು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸಲಾಗುತ್ತದೆ.

ಏನೇನು ತರಬೇತಿ?
ಹಲವು ವರ್ಷಗಳ ಕಾಲ ಕಾಶ್ಮೀರದಲ್ಲಿ ಸೇವೆ ಸಲ್ಲಿಸಿರುವ, ಪ್ರಮುಖ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿರುವ ಹಿರಿಯ ಅಧಿಕಾರಿಗಳೇ ಈ ಕಮಾಂಡೋಗಳಿಗೆ ತರಬೇತಿ ನೀಡಿದ್ದಾರೆ. ಸುಧಾರಿತ ಸ್ಫೋಟಕಗಳ ಪತ್ತೆ ಹಾಗೂ ನಿರ್ವಹಣೆ ಕುರಿತೂ ಟ್ರೈನಿಂಗ್‌ ನೀಡಲಾಗಿದೆ. ಇದಲ್ಲದೇ, ಜನಜಂಗುಳಿಯಿರುವ ಪ್ರದೇಶ ಅಂದರೆ ನಗರ ಪ್ರದೇಶಗಳಲ್ಲಿ. ಗೋಚರತೆ ಕಡಿಮೆ ಇರುವಾಗ(ಅಂದರೆ ರಾತ್ರಿ ಹೊತ್ತಲ್ಲಿ) ಹಾಗೂ ಗಗನಚುಂಬಿ ಕಟ್ಟಡಗಳಲ್ಲಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬ ಬಗ್ಗೆ ಒಂದು ತಿಂಗಳ ತರಬೇತಿಯನ್ನೂ ಕಮಾಂಡೋಗಳು ಪಡೆದಿದ್ದಾರೆ.

ಇದನ್ನೂ ಓದಿ:ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ

ಏನೇನು ಶಸ್ತ್ರಾಸ್ತ್ರಗಳಿರಲಿವೆ?
ಎಂಪಿ-5 ಸಬ್‌ಮಷೀನ್‌ ಗನ್‌ಗಳು,  ರೈಫ‌ಲ್‌ಗ‌ಳು, ಲಘು ಮಷೀನ್‌ ಗನ್‌ಗಳು, ಎಕೆ-47ಗಳು, ಕಾರ್ನರ್‌ ಶಾಟ್‌, ಅಂಡರ್‌ ಬ್ಯಾರೆಲ್‌ ಗ್ರೆನೇಡ್‌ ಲಾಂಚರ್‌ಗಳು ಇತ್ಯಾದಿಗಳನ್ನು ಕಮಾಂಡೋಗಳು ಹೊಂದಿರಲಿದ್ದಾರೆ. ಇದಲ್ಲದೇ, ಕತ್ತಲಲ್ಲಿ ಸ್ಪಷ್ಟವಾಗಿ ಗೋಚರಿಸಲು ಕನ್ನಡಕಗಳು, ರೇಡಾರ್‌ಗಳು, ಇನ್‌-ವಾಲ್‌ ಸ್ಕ್ಯಾನರ್‌ಗಳು, ಶಸ್ತ್ರಾಸ್ತ್ರಗಳನ್ನು ಅಳವಡಿಸಿರುವ ರೊಬೋಟ್‌ಗಳನ್ನೂ ಒದಗಿಸಲಾಗಿದೆ. ಉಗ್ರರ ಸಮೂಹವನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಪ್ರತಿ ಕಮಾಂಡೋಗೆ ಇರುವಂತೆ ಸಜ್ಜುಗೊಳಿಸಲಾಗಿದೆ.

ಮೊದಲ ಬಾರಿಗೆ ನಿಯೋಜನೆ
ಜ.26ರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈಅಲರ್ಟ್‌ ಘೋಷಿಸಲಾಗಿದ್ದು, ಮೊದಲ ಬಾರಿಗೆ ಈ ತಂಡವನ್ನು ಪ್ರಮುಖ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಯಾವುದೇ ದಾಳಿ ನಡೆದರೂ ಕ್ಷಣಮಾತ್ರದಲ್ಲಿ ಆ ಪ್ರದೇಶಕ್ಕೆ ತಲುಪುವಂತೆ, ರಾಷ್ಟ್ರ ರಾಜಧಾನಿಯ ಹೃದಯಭಾಗದಲ್ಲೇ ಸದಾಕಾಲ ಈ ಕಮಾಂಡೋಗಳು ಇರಲಿದ್ದಾರೆ.ಏ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.