ಕರ್ನಾಟಕಕ್ಕೆ 50, ಅಭಿವೃದ್ಧಿಯ ಹೊಸ ಭಾಷ್ಯ ಬರೆಯಲಿ


Team Udayavani, Nov 1, 2023, 1:13 AM IST

kannada

1956ರಲ್ಲಿ ಮೈಸೂರು ರಾಜ್ಯ ಎಂಬ ಹೆಸರಿನಲ್ಲಿ ಉದಯವಾದ ಕರುನಾಡು, 1973ರಲ್ಲಿ ಕರ್ನಾಟಕ ಎಂದು ಮರುನಾಮ ಕರಣ ಆಯಿತು. ಆಗಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಕರ್ನಾಟಕಎಂದು ಮರುನಾಮಕರಣ ಮಾಡಿದರು. ಈಗ ಕರ್ನಾಟಕಕ್ಕೆ 50 ವರ್ಷದ ಸಂಭ್ರಮದ ಘಳಿಗೆಯಾಗಿದ್ದು, ರಾಜ್ಯ ಸರಕಾರ ವರ್ಷಪೂರ್ತಿ ಆಚರಣೆಗೆ ಮುಂದಾಗಿದೆ.

ಈ 50 ವರ್ಷಗಳನ್ನು ಹಿಂದೆ ತಿರುಗಿ ನೋಡುವುದಾದರೆ, ಕರ್ನಾಟಕದ ಇತಿಹಾಸ ಭವ್ಯ, ರಮಣೀಯವಾಗಿದೆ. ಭಾವೈಕ್ಯದ ನಾಡು ಎಂದೇ ಕರೆಸಿಕೊಂಡಿರುವ ಈ ನೆಲ, ಜಗತ್ತಿಗೇ ಪ್ರಜಾಪ್ರಭುತ್ವದ ಮಾದರಿಯನ್ನು ಕೊಟ್ಟ ಶರಣಶ್ರೇಷ್ಠ ಬಸವಣ್ಣನವರದ್ದು. ಬುದ್ಧ, ಬಸವ, ಅಂಬೇಡ್ಕರ್‌ ಹಾಕಿಕೊಟ್ಟ ಮಾರ್ಗದಲ್ಲೇ ನಡೆದು ಬಂದು, ಸರ್ವರನ್ನು ಒಳಗೊಂಡ ಭೂಮಿಯಾಗಿ ಇಂದಿಗೂ ಅದೇ ಶ್ರೇಷ್ಠತೆಯನ್ನು ಉಳಿಸಿಕೊಂಡು ಮುಂದಡಿ ಇಡುತ್ತಿದೆ. ಹಸಿದು ಬಂದವರಿಗೆ ಅನ್ನ, ಸೂರು ನೀಡುವ ಈ ನಾಡು, ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ತೆರಿಗೆ ಸಂಗ್ರಹದಲ್ಲಿ ಎಲ್ಲ ದೊಡ್ಡ ರಾಜ್ಯಗಳನ್ನು ಹಿಂದಿಕ್ಕಿ, ಇದುವರೆಗೆ ಎರಡನೇ ಸ್ಥಾನದಲ್ಲೇ ಇರುವ ಕರ್ನಾಟಕ ದೇಶದ ಅಭಿವೃದ್ಧಿಗೂ ಬಹುದೊಡ್ಡ ಕಾಣಿಕೆ ನೀಡುತ್ತಿದೆ ಎನ್ನಲು ಅಡ್ಡಿಯೇನಿಲ್ಲ.

ಇಲ್ಲಿನ ಸಾಫ್ಟ್ವೇರ್‌ ಸೇವೆ ಅಮೆರಿಕದ ಕಂಪೆನಿಗಳ ಅಗತ್ಯಗಳನ್ನು ಪೂರೈಸುತ್ತಿದೆ. ಹೀಗಾಗಿಯೇ ಜಗತ್ತಿನಲ್ಲೇ ಕರ್ನಾಟಕದ ಬೆಂಗಳೂರು ನಾಲ್ಕನೇ ದೊಡ್ಡ ತಾಂತ್ರಿಕ ನಗರವಾಗಿ ಮಾರ್ಪಟ್ಟಿದೆ. ವಿಶ್ವದ ಬಹುತೇಕ ದೇಶಗಳು ಬೆಂಗಳೂರಿನತ್ತ ತೆರೆದ ಕಣ್ಣುಗಳಿಂದ ನೋಡುತ್ತಿವೆ. ಇದು ಕರ್ನಾಟಕದ ಹೆಗ್ಗಳಿಕೆಯಲ್ಲದೇ ಇನ್ನೇನು!

ಕೈಗಾರಿಕೆಗಳಿಂದ ಹಿಡಿದು ಸಣ್ಣಪುಟ್ಟ ಉದ್ಯಮಗಳ ವಿಚಾರದಲ್ಲಿಯೂ ಕರ್ನಾಟಕ, ಭಾರತದಲ್ಲಿ ಅಗ್ರಸ್ಥಾನದಲ್ಲಿಯೇ ಇದೆ. ಬೇರೆ ರಾಜ್ಯ ಗಳಂತೆ ಇಲ್ಲಿ ಹೆಚ್ಚು ನಿರುದ್ಯೋಗ ಸಮಸ್ಯೆಯಾಗಲಿ ಅಥವಾ ಉತ್ತರ ಭಾರತದಲ್ಲಿ ಕಂಡು ಬರುವಂಥ ಕಳಪೆ ಜೀವನ ಮಟ್ಟವಾಗಲಿ ಇಲ್ಲ. ಇದಕ್ಕೆ ನಮ್ಮ ನಾಡು ಹೊಂದಿರುವ ವಿಭಿನ್ನ ಭೌಗೋಳಿಕ ಮತ್ತು ಪ್ರಾದೇಶಿಕ ವೈವಿಧ್ಯವೇ ಸಾಕ್ಷಿ. ನಾಡಿನ ತುಂಬೆಲ್ಲ ಹಸುರನ್ನು ಹೊತ್ತಿರುವ ಕರ್ನಾಟಕವು ನೀರಾವರಿ ಮತ್ತು ಮಳೆಯಾಶ್ರಿತ ಕೃಷಿಯಲ್ಲೂ ಉತ್ತಮ ಸ್ಥಾನದಲ್ಲೇ ಇದೆ. ನಾವು ಬೆಳೆದ ಬೆಳೆ ನಮಗೆ ಅನ್ನವಿಕ್ಕುವುದರ ಜತೆಗೆ ನೆರೆಹೊರೆಯವರ ಹೊಟ್ಟೆ ತುಂಬಿಸಲು ಬಳಕೆಯಾಗುತ್ತಿದೆ.

ಹಾಗೆಂದು ರಾಜ್ಯ ಸಮಸ್ಯೆಗಳನ್ನು ಎದುರಿಸಿಲ್ಲ ಎಂದಲ್ಲ. ನೆಲ, ಭಾಷೆ, ಜಲದ ವಿಚಾರದಲ್ಲಿ ಸವಾಲುಗಳನ್ನು ಎದುರಿಸುತ್ತಲೇ ಇದೆ. ಇಂದಿಗೂ ಕಾವೇರಿ, ಮಹದಾಯಿ, ಕೃಷ್ಣೆ ಸೇರಿದಂತೆ ಪ್ರಮುಖ ನದಿಗಳ ವಿವಾದ ಈಡೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಇನ್ನೂ ಕಾಲು ಕೆರೆದು ಜಗಳವಾಡುತ್ತಲೇ ಇದೆ. ಬೆಂಗಳೂರಿನಂಥ ನಗರದಲ್ಲಿ ಪರಭಾಷಿಕರ ಹಾವಳಿಯೂ ಒಂದಷ್ಟು ಪ್ರಮಾಣದಲ್ಲಿ ಇದೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು. ಹಾಗೆಯೇ ಹಿಂದಿ ಹೇರಿಕೆಯೂ ಎಗ್ಗಿಲ್ಲದೆ ಸಾಗುತ್ತಿದ್ದು, ಇದಕ್ಕೆ ಸಾಕಷ್ಟು ಪ್ರತಿರೋಧವೂ ಕಾಣಿಸುತ್ತಿದೆ. ಆದರೆ ಕನ್ನಡ ಸಂಘಟನೆಗಳ ಹೋರಾಟ ಮತ್ತು ಸರಕಾರಗಳ ಅಗತ್ಯ ಕ್ರಮದಿಂದಾಗಿ ಭಾಷೆ ಮೇಲಿನ ದಾಳಿಯನ್ನು ಕೊಂಚ ಮಟ್ಟಿಗೆ ಕಡಿಮೆ ಮಾಡುವಲ್ಲಿ ನಾವು ಸಫ‌ಲರಾಗಿದ್ದೇವೆ.

ಹೀಗಾಗಿ ಕಳೆದ 50 ವರ್ಷ ಗಳಿಂದಲೂ ಸರ್ವ ಸರಕಾರಗಳ ಪ್ರಯತ್ನಗಳಿಂದಾಗಿ ಕರ್ನಾಟಕ ಉತ್ತಮ ವಾಗಿ ಅಭಿವೃದ್ಧಿಗೊಳ್ಳುತ್ತಿದೆ. ಈ ಅಭಿವೃದ್ಧಿಯ ಸರಣಿ ಮುಂದೆಯೂ ಸಾಗಬೇಕಾಗಿದೆ. ಎಲ್ಲರನ್ನು ಒಳಗೊಂಡ ಅಭಿವೃದ್ಧಿ ಕರ್ನಾಟಕದ ಧ್ಯೇಯ. ಇದು ಮುಂದೆಯೂ ಸಾಗಬೇಕು. ಕುವೆಂಪು ಅವರೇ ಹೇಳಿದಂತೆ ಇದು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ನಾವು ಮುಂದುವರಿಸಿಕೊಂಡು ಹೋಗಬೇಕಿದೆ.

 

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.