500 ಕೋಟಿ ರೂ.! ಚುನಾವಣೆ ನಡೆಸಲು ಬೇಕು

ಕಳೆದ ಬಾರಿಗಿಂತ ಅಧಿಕ ವೆಚ್ಚ ; ಈಗಾಗಲೇ 300 ಕೋ.ರೂ. ಬಿಡುಗಡೆ

Team Udayavani, Feb 5, 2023, 7:00 AM IST

500 ಕೋಟಿ ರೂ.!ಚುನಾವಣೆ ನಡೆಸಲು ಬೇಕು

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ನಡೆಸಲು ಚುನಾವಣ ಆಯೋಗ ಮತ್ತು ಸರಕಾರ ಎಷ್ಟು ಖರ್ಚು ಮಾಡಬೇಕು ಬಲ್ಲಿರಾ – 500 ಕೋಟಿ ರೂ.ಗಳಿಗೂ ಹೆಚ್ಚು! ಒಟ್ಟು 224 ಶಾಸಕರು ಆಯ್ಕೆಯಾಗಬೇಕಿದ್ದು, ಒಬ್ಬೊಬ್ಬರಿಗೆ ತಲಾ 2 ಕೋಟಿ ರೂ.ಗಳಂತೆ ಆಯೋಗ ವೆಚ್ಚ ಮಾಡಬೇಕಾಗುತ್ತದೆ.

ಕಳೆದ ವಿಧಾನಸಭೆ ಚುನಾವಣೆಗೆ ಸುಮಾರು 394 ಕೋಟಿ ರೂ. ವೆಚ್ಚವಾಗಿತ್ತು. ಹಣದುಬ್ಬರ, ಬೆಲೆ ಏರಿಕೆ ಇತ್ಯಾದಿ ಕಾರಣಗಳಿಂದಾಗಿ ಈ ಬಾರಿ 500 ಕೋಟಿ ರೂ. ಬೇಕಾಗಬಹುದು ಎಂದು ಆಯೋಗ ಅಂದಾಜಿಸಿದೆ. ಇದು ಈವರೆಗಿನ ಅಂದಾಜು ಆಗಿದ್ದು, 10ರಿಂದ 12 ಕೋ.ರೂ. ಹೆಚ್ಚಾಗಬಹುದು ಎನ್ನಲಾಗಿದೆ.

ಈಗಾಗಲೇ ರಾಜ್ಯ ಸರಕಾರ 300 ಕೋಟಿ ರೂ. ಬಿಡುಗಡೆ ಮಾಡಿದೆ. ಉಳಿದ ಹಣ ಮುಂದಿನ ಹಣಕಾಸು ವರ್ಷದಲ್ಲಿ ಬಿಡುಗಡೆ ಮಾಡಲಾಗು ತ್ತದೆ. ಈ ಸಂಬಂಧ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಹೋಗಿದೆ ಎಂದು ರಾಜ್ಯ ಮುಖ್ಯ ಚುನಾ ವಣಾಧಿಕಾರಿಗಳ ಕಚೇರಿಯ ಮೂಲಗಳು ತಿಳಿಸಿವೆ.

ಪ್ರತೀ ಚುನಾವಣೆಗೆ ವೆಚ್ಚ ದುಪ್ಪಟ್ಟು ಆಗುತ್ತಲೇ ಇದೆ. 2013ರ ವಿಧಾನಸಭೆ ಚುನಾವಣೆಗೆ ಸುಮಾರು 160 ಕೋಟಿ ರೂ. ವೆಚ್ಚವಾಗಿತ್ತು. 2018ರಲ್ಲಿ 250 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸ ಲಾಗಿತ್ತು. ಆದರೆ ಇವಿಎಂ ಜತೆಗೆ ವಿವಿಪ್ಯಾಟ್‌ ಬಳಕೆ ಮಾಡಿದ್ದರಿಂದ ವೆಚ್ಚ 394 ಕೋಟಿ ರೂ. ತಲುಪಿತ್ತು.

ಯಾವುದಕ್ಕೆ ವೆಚ್ಚ?
ಮತದಾರರ ಪಟ್ಟಿ ತಯಾರಿ, ಮುದ್ರಣ, ಎಪಿಕ್‌ ಕಾರ್ಡ್‌ಗಳ ಮುದ್ರಣ, ಮತದಾರರ ಜಾಗೃತಿ, ಚುನಾವಣ ಸಿಬಂದಿಗೆ ತರಬೇತಿ, ಕರ್ತವ್ಯ ಭತ್ತೆ, ಇವಿಎಂ ಹಾಗೂ ಚುನಾವಣ ಸಾಮಗ್ರಿಗಳ ಸಾಗಾಟ, ಚೆಕ್‌ಪೋಸ್ಟ್‌ ನಿರ್ಮಾಣ, ಮತಗಟ್ಟೆ, ಸ್ಟ್ರಾಂಗ್‌ರೂಂ ಹಾಗೂ ಮತ ಎಣಿಕೆ ಕೇಂದ್ರಗಳನ್ನು ಸಜ್ಜುಗೊಳಿಸುವುದು, ಚುನಾವಣ ನೀತಿ ಸಂಹಿತೆ ಜಾರಿ ತಂಡಗಳ ನಿರ್ವಹಣೆ ಸೇರಿದಂತೆ ವಿವಿಧ ಕಾರ್ಯಗಳಿಗೆ ವೆಚ್ಚವಾಗುತ್ತದೆ.

ಯಾವುದಕ್ಕೆ ಹೆಚ್ಚು?
ಚುನಾವಣೆಗೆ ತಗಲುವ ಒಟ್ಟು ವೆಚ್ಚದಲ್ಲಿ ಭದ್ರತ ವೆಚ್ಚ ಹಾಗೂ ಸಿವಿಲ್‌ ವೆಚ್ಚಕ್ಕೆ ಬಹುಪಾಲು ಹೋಗುತ್ತದೆ. ರಾಜ್ಯ ಪೊಲೀಸ್‌ ಇಲಾಖೆಯಿಂದ ಮಾಡುವ ಭದ್ರತ ವ್ಯವಸ್ಥೆಗೆ 100ರಿಂದ 150 ಕೋಟಿ ರೂ. ಬೇಕಾಗುತ್ತದೆ. ಕೇಂದ್ರ ಸರಕಾರದಿಂದ ನಿಯೋಜಿಸಲ್ಪಡುವ ಭದ್ರತೆ ಪಡೆಗಳ ವೆಚ್ಚವನ್ನು ಕೇಂದ್ರ ಸರಕಾರವೇ ಭರಿಸುತ್ತದೆ. ಉಳಿದಂತೆ ಸಿವಿಲ್‌ ವೆಚ್ಚಗಳಾದ ಮತದಾರರ ಜಾಗೃತಿ ಕಾರ್ಯಕ್ರಮಗಳು, ಸಿಬಂದಿ ಮತ್ತು ವೀಕ್ಷಕರ ನಿಯೋಜನೆ ಹಾಗೂ ತರಬೇತಿ, ಮತಗಟ್ಟೆಗಳ ನಿರ್ಮಾಣ, ಮತದಾರರ ಪಟ್ಟಿಯ ಮುದ್ರಣ, ಗುರುತಿನ ಚೀಟಿ ಮುದ್ರಣ, ಚುನಾವಣ ಸಾಮಗ್ರಿಗಳ ಸಾಗಾಟಕ್ಕೆ ಒಟ್ಟು ವೆಚ್ಚದ ಶೇ. 45ರಿಂದ 50ರಷ್ಟು ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಉಳಿದಂತೆ ಚೆಕ್‌ಪೋಸ್ಟ್‌ಗಳ ನಿರ್ಮಾಣಕ್ಕೆ ಶೇ. 10, ಮತ ಎಣಿಕೆ ಕೇಂದ್ರಗಳ ಸ್ಥಾಪನೆ, ಸ್ಟ್ರಾಂಗ್‌ ರೂಂಗಳ ನಿರ್ಮಾಣಕ್ಕೆ ಶೇ. 30ರಷ್ಟು, ನೀತಿ ಸಂಹಿತೆ ಜಾರಿಗೆ ಶೇ. 10ರಷ್ಟು ಬೇಕಾಗಬಹುದು ಎಂದು ಚುನಾವಣ ಆಯೋಗ ಅಂದಾಜು ಹಾಕಿದೆ. ಚುನಾವಣೆ ವೆಚ್ಚವು ಮತಗಟ್ಟೆಗಳ ಸಂಖೆಯನ್ನು ಅವಲಂಬಿಸಿರುತ್ತದೆ. ಮತದಾರರ ಸಂಖ್ಯೆ ಹೆಚ್ಚಾದರೆ ಮತಗಟ್ಟೆಗಳ ಸಂಖ್ಯೆಯೂ ಹೆಚ್ಚಾಗುತ್ತದೆ. ಆದರೆ ಕಳೆದ ಬಾರಿಗಿಂತ ಮತಗಟ್ಟೆಗಳು ದೊಡ್ಡ ಸಂಖ್ಯೆಯಲ್ಲಿ ಏರಿಕೆ ಆಗಿಲ್ಲ. ಆದರೂ ಸಿವಿಲ್‌ ವೆಚ್ಚ ಇದ್ದೇ ಇದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ಈ ಬಾರಿಯ ಚುನಾವಣೆಗೆ ಸುಮಾರು 500 ಕೋಟಿ ರೂ. ವೆಚ್ಚ ಬರಬಹುದು. ಈಗಾಗಲೇ ಸರಕಾರ 300 ಕೋಟಿ ರೂ. ಬಿಡುಗಡೆ ಮಾಡಿದೆ.
– ಮನೋಜ್‌ ಕುಮಾರ್‌ ಮೀನಾ, ರಾಜ್ಯ ಮುಖ್ಯ ಚುನಾವಣಾಧಿಕಾರಿ

-  ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.