ಹುಣಸೂರು ನಗರಸಭೆ ಕಂದಾಯ ಅಧಿಕಾರಿಗೆ 5 ಸಾವಿರ ದಂಡ
Team Udayavani, Feb 12, 2022, 7:27 PM IST
ಹುಣಸೂರು: ಸಕಾಲದಲ್ಲಿ ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆಯ ಸಾರ್ವಜನಿಕ ಮಾಹಿತಿ ಅಧಿಕಾರಿಯಾದ ಕಂದಾಯಾಧಿಕಾರಿ ನಂಜುಂಡಸ್ವಾಮಿಯವರಿಗೆ ಕರ್ನಾಟಕ ಮಾಹಿತಿ ಆಯೋಗ 5 ಸಾವಿರ ರೂಗಳ ದಂಡ ವಿಧಿಸಿದೆ.
ಹುಣಸೂರು ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊAದರ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಟ್ಟಡ ನಿರ್ಮಾಣದ ಪರವಾನಗಿ ಹಾಗೂ ನಕ್ಷೆ ಕಾಫಿಯ ಧೃಡೀಕೃತ ದಾಖಲೆಗಾಗಿ ತಾಲೂಕು ಸಮಾಜ ಪರಿವರ್ತನಾ ಸಮಿತಿ ಅಧ್ಯಕ್ಷ ಎಚ್.ಕೆ.ಸುರೇಶ್ ಎಂಬುವವರು ೨೦೨೦ ಡಿಸೆಂಬರ್ ೭ ರಂದು ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದರು. ವರ್ಷವಾದರೂ ಮಾಹಿತಿ ನೀಡಿರಲಿಲ್ಲ. ಪೌರಾಯುಕ್ತರಿಗೆ ಮೇಲ್ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಇದರ ವಿರುದ್ದ ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ರಾಜ್ಯ ಮಾಹಿತಿ ಆಯುಕ್ತ ಡಾ.ಕೆ.ಇ.ಕುಮಾರಸ್ವಾಮಿಯವರು ಮಾಹಿತಿ ಹಕ್ಕು ಅಧಿನಿಯಮದ ಪ್ರಕಾರ ಸಮರ್ಪಕ ಮಾಹಿತಿ ನೀಡಲು ವಿಫಲವಾದ ಸಾರ್ವಜನಿಕ ಮಾಹಿತಿ ಅಧಿಕಾರಿ ನಂಜುAಡಸ್ವಾಮಿಯವರಿಗೆ ೫ ಸಾವಿರ ರೂ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ನಂಜುAಡಸ್ವಾಮಿಯವರ ವೇತನದಲ್ಲಿ ಕಟಾವು ಮಾಡಿಕೊಂಡು ಖಜಾನೆಗೆ ಜಮೆ ಮಾಡುವಂತೆ ಪೌರಾಯುಕ್ತರಿಗೆ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ