ಸೋಂಕಿತರಿಂದ 53 ನವಜಾತ ಶಿಶುಗಳಿಗೆ ಜನನ

ಯಾವೊಬ್ಬ ಶಿಶುವಿಗೂ ಸೋಂಕು ಹರಡಿಲ್ಲ

Team Udayavani, Jul 9, 2020, 4:30 AM IST

navajata-shishu

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ 19 ವೈರಸ್ ಸೋಂಕು ಹೆಚ್ಚಳವಾಗಿ ಎಲ್ಲಡೆ ಸಾವು – ನೋವು ಆತಂಕದ ಛಾಯೆ ಆವರಿಸಿದೆ. ಇಂತಹ ನಕಾರಾತ್ಮಕ ಅಂಶಗಳ ನಡುವೆಯೂ ಅದೇ ಸೋಂಕಿತರಿಂದ ಭವಿಷ್ಯದ ಭರವಸೆಯ ಕುಡಿಗಳು ಜನ್ಮತಳೆಯುತ್ತಿವೆ. ಇದಕ್ಕೆ ನಗರದ ವಿಕ್ಟೋರಿಯಾ ಆವರಣದ ಟ್ರಾಮಾ ಮತ್ತು ತುರ್ತು ಆರೈಕೆ ಕೇಂದ್ರ ಸಾಕ್ಷಿಯಾಗಿದೆ. ಕೋವಿಡ್‌ 19 ವೈರಸ್ ಸೋಂಕು ಎಂದರೆ ಬದುಕುವುದೇ ಕಷ್ಟ ಎಂಬ ಕಲ್ಪನೆ ಇಂದಿಗೂ ಹಲವರಲ್ಲಿದೆ. ಆದರೆ, ನಗರದಲ್ಲಿ ಸೋಂಕಿತರಾಗಿದ್ದ 50 ಗರ್ಭಿಣಿಯರಿಗೆ ನಿರಾತಂಕವಾಗಿ ಹೆರಿಗೆಯಾಗಿದೆ.

ಮೂವರಿಗೆ ಅವಳಿ ಮಕ್ಕಳಾಗಿದ್ದು, ಒಟ್ಟು 53 ನವಜಾತ ಶಿಶುಗಳು ಜನಿಸಿವೆ. ಅಚ್ಚರಿ ಎಂದರೆ ಯಾವ ಶಿಶುವಿಗೂ ಕೋವಿಡ್‌ 19 ಸೋಂಕು ದೃಢಪಟ್ಟಿಲ್ಲ. ನಗರದಲ್ಲಿ ಸೋಂಕು ತೀವ್ರಗೊಂಡಿದ್ದು, ಅನೇಕ ಗರ್ಭಿಣಿಯರು ಕೂಡಾ ಸೋಂಕಿತರಾಗುತ್ತಿದ್ದಾರೆ. ಅಂತಹವರನ್ನು ನಗರದ ವಿಕ್ಟೋರಿಯಾ ಆವರಣದ ಟ್ರಾಮ ಮತ್ತು ತುರ್ತು ನಿಗಾ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತಿದೆ. ಬಳಿಕ ವಾಣಿವಿಲಾಸ ಆಸ್ಪತ್ರೆಯ ವೈದ್ಯರ ಸಮನ್ವಯತೆಯೊಂದಿಗೆ ಹೆರಿಗೆ ಮಾಡಿಸಲಾಗುತ್ತಿದೆ.

ಜನಿಸಿದ ಶಿಶುವನ್ನು ತಾಯಿಯಿಂದ ಬೇರ್ಪಡಿಸಿ ವಾಣಿವಿಲಾಸ ಆಸ್ಪತ್ರೆಯಲ್ಲಿಟ್ಟು ಆರೈಕೆ ಮಾಡಲಾಗುತ್ತಿದೆ. ಇನ್ನು ತಾಯಿಗೆ ಸೋಂಕು ಗುಣಮುಖವಾಗುವವರೆಗೂ ನಿಗಾ ಆರೈಕೆ ಕೇಂದ್ರದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇ.8 ರಂದು ಮೊದಲ ಸೋಂಕಿತ ಗರ್ಭಿಣಿಗೆ ಹೆರಿಗೆಯಾಗಿತ್ತು. ಅಲ್ಲಿಂದ ಜು.8ರವರೆಗೂ 50 ಸೋಂಕಿತ ಗರ್ಭಿಣಿಯರಿಗೆ ಹೆರಿಗೆಯಾಗಿದೆ. ಈ ಪೈಕಿ 13 ಸಾಮಾನ್ಯ ಹೆರಿಗೆ ಆಗಿದ್ದು, ಉಳಿದವು ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಹೆರಿಗೆ ಸಂದರ್ಭದಲ್ಲಿ ಸಿಬ್ಬಂದಿ ಸೇರಿದಂತೆ ಶಿಶುವಿಗೂ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.

ಈವರೆಗೂ ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳು ಇಬ್ಬರು ಆರೋಗ್ಯವಾಗಿದ್ದಾರೆ. ತಾಯಿಗೆ ಸೋಂಕು ದೃಢಪಟ್ಟು 14 ದಿನಗಳ ಬಳಿಕ ಮತ್ತೊಮ್ಮೆ ಸೋಂಕು ಪರೀಕ್ಷೆ ಕೈಗೊಂಡು ವರದಿ ನೆಗೆಟಿವ್ ಬಂದ ಬಳಿಕ ಮಗುವನ್ನು ನೀಡಲಾಗುತ್ತಿದೆ ಎಂದು ಈ ವಿಕ್ಟೋರಿಯಾ ಟ್ರಾಮ ಮತ್ತು ತುರ್ತು ಆರೈಕೆ ಕೇಂದ್ರದ ನೋಡಲ್ ಅಧಿಕಾರಿ ಡಾ.ಆಸೀಮಾ ಬಾನು ಮಾಹಿತಿ ನೀಡಿದರು. ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಾರ್ಡ್ ಅನ್ನು ಹೆರಿಗೆ ವಾರ್ಡ್ ಆಗಿ ಪರಿವರ್ತಿಸಲಾಗಿದೆ. ಹೆರಿಗೆ ಮತ್ತು ಗರ್ಭಿಣಿಯರ ಆರೈಕೆಗೆ 15 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ತಾಯಿ ಹಾಲಿನ ಬದಲಿಗೆ ಲ್ಯಾಕ್ಟೋಜನ್: ಟ್ರಾಮಾ ಸೆಂಟರ್‍ನಲ್ಲಿ ಮಗು ಜನಿಸಿದ ಕೂಡಲೇ ವಾಣಿವಿಲಾಸ ಆಸ್ಪತ್ರೆ ಸ್ಥಳಾಂತರಿಸಲಾಗುತ್ತಿದೆ. ಸೋಂಕಿತೆಯರಿಗೆ ಜನಿಸಿದ ಮಗುವಿಗೆ ಪ್ರತ್ಯೇಕ ವಾರ್ಡ್ ಮಾಡಿ ಮುಂಜಾಗ್ರತಾ ಕ್ರಗೊಳೊಂದಿಗೆ ಆರೈಕೆ ಮಾಡಲಾಗುತ್ತಿದೆ. ಸಾಮಾನ್ಯ ನವಜಾತ ಶಿಶುಗಳಂತೆ ಸೋಂಕಿತೆಯರ ಶಿಶುಗಳನ್ನು ಮಕ್ಕಳ ತಜ್ಞರು ಆರೈಕೆ ಮಾಡುತ್ತಿದ್ದಾರೆ. ತಾಯಿ ಹಾಲಿನ ಬದಲು ಲ್ಯಾಕ್ಟೋಜನ್ ನೀಡಲಾಗುತ್ತದೆ. ಶಿಶು ಜನಿಸಿದ 24 ರಿಂದ 48 ಗಂಟೆಯೊಳಗೆ ಗಂಟಲು ದ್ರವ ತೆಗೆದು ಸೋಂಕು ಪರೀಕ್ಷೆಗೊಳಪಡಿಸಲಾಗುತ್ತಿದೆ.

ತಾಯಿ ಗುಣಮುಖರಾದ ಹಿನ್ನೆಲೆ ಕಳೆದ ಎರಡು ದಿನಗಳಿಂದ 14 ಶಿಶುಗಳ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವಾಣಿವಿಲಾಸ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ.ಸಂತೋಷ್ ಪ್ರಭಾ ತಿಳಿಸಿದರು. ಇನ್ನು ಶಿಶುವಿನ ಸೋಂಕು ಪರೀಕ್ಷಾ ವರದಿ ನೆಗೆಟಿವ್ ಬಂದ ಕೂಡಲೇ ತಾಯಿಯ ಸಂಬಂಧಿಗಳು ಆರೈಕೆ ಮಾಡುತ್ತಾರೆ. 14 ದಿನದ ಬಳಿಕವೂ ತಾಯಿ ಸೋಂಕು ಪರೀಕ್ಷಾ ವರದಿ ಪಾಸಿಟಿವ್ ಬಂದರೆ ಅಥವಾ ಸೋಂಕು ಲಕ್ಷಣಗಳಿದ್ದರೆ ಮಗುವನ್ನು ಸಂಬಂಧಿಕರೆ ಮನೆಗೆ ಕರೆದೊಯ್ಯಿದು ಆರೈಕೆ ಮಾಡಬುದು ಎಂದು ವೈದ್ಯರು ತಿಳಿಸಿದ್ದಾರೆ.

ಗರ್ಭಿಣಿಯರಿಗೆ ಸೋಂಕು ತಗುಲಿದರೆ ಭಯಪಡುವ ಅಗತ್ಯವಿಲ್ಲ. ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಹೆರಿಗೆ ಮಾಡಿಸಲಾಗುತ್ತಿದೆ. ಸೋಂಕಿತ ಗರ್ಭಿಣಿಯರಂತೆ ಸಾಮಾನ್ಯರಂತೆಯೇ ಹೆರಿಗೆಯಾಗುತ್ತಿದೆ. ಈವರೆಗೂ ಮೂವರಿಗೆ ಅವಳಿ ಜವಳಿ ಮಕ್ಕಳು ಜನಿಸಿದ್ದು, 13 ಸಾಮಾನ್ಯ ಹೆರಿಗೆ ಆಗಿದೆ. ಗರ್ಭಿಣಿಯರ ಗುಣಮುಖ ದರವು ಅತ್ಯುತ್ತಮವಾಗಿದೆ.
-ಡಾ.ಎಸ್.ಬಾಲಾಜಿ ಪೈ, ವಿಶೇಷ ಅಧಿಕಾರಿ, ಟ್ರಾಮಾ ತುರ್ತು ಆರೈಕೆ ಕೇಂದ್ರ

* ಜಯಪ್ರಕಾಶ್ ಬಿರಾದಾರ್

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.