ಆಂಧ್ರ ಸಿಎಂ ಪರಿಹಾರ ನಿಧಿ ದೋಚಲು ಯತ್ನ: ದ.ಕ. ಜಿಲ್ಲೆಯ 6 ಮಂದಿಯ ಬಂಧನ


Team Udayavani, Oct 7, 2020, 5:09 PM IST

ಆಂಧ್ರ ಸಿಎಂ ಪರಿಹಾರ ನಿಧಿ ದೋಚಲು ಯತ್ನ: ದ.ಕ. ಜಿಲ್ಲೆಯ 6 ಮಂದಿಯ ಬಂಧನ

ಮಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೂರಾರು ಕೋಟಿ ರೂಪಾಯಿ ಲಪಟಾಯಿಸಲು ಯತ್ನಿಸಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ 6 ಮಂದಿಯನ್ನು ಆಂಧ್ರಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಮೂಡುಬಿದಿರೆಯ ಯೋಗೀಶ್‌ ಆಚಾರ್ಯ (40), ಕಾಂತಾವರದ ಉದಯ ಶೆಟ್ಟಿ (35), ಮಂಗಳೂರಿನ ಬೃಜೇಶ್‌ ರೈ (35), ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿದೆ.

ಆಂಧ್ರ ಸಿಎಂ ಪರಿಹಾರ ನಿಧಿಯಿಂದ ಒಟ್ಟು 117 ಕೋ.ರೂ.ಗಳನ್ನು ನಕಲಿ ಸಹಿ ಬಳಸಿ ಲಪಟಾಯಿಸಲು ಯತ್ನ ನಡೆದಿದ್ದು, ಈ ಪೈಕಿ 52 ಕೋ.ರೂ. ವಂಚನೆ ಯತ್ನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 6 ಜನ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ.

ಆಂಧ್ರ ಸಿಎಂ ಪರಿಹಾರ ನಿಧಿಗೆ ವಂಚನೆ ಆಗಿರುವ ಬಗ್ಗೆ ಆಂಧ್ರ ಸರಕಾರದ ಕಂದಾಯ ಇಲಾಖೆ ಕಾರ್ಯದರ್ಶಿ ಪಿ. ಮುರಳಿ ಕೃಷ್ಣ ರಾವ್‌ ದೂರು ನೀಡಿದ್ದು ಈ ಬಗ್ಗೆ ಆಂಧ್ರದ ತುಲ್ಲೂರು ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ತನಿಖೆ ನಡೆಸಿದ್ದರು.

2019, 2020ರಲ್ಲಿ ನೀಡಿದ್ದ ಚೆಕ್‌, ಮಂಜೂ ರಾದ ಹಣದ ತನಿಖೆ ನಡೆಸಿದಾಗ ವಂಚನೆ ನಡೆದಿರುವುದು ಬೆಳಕಿಗೆ ಬಂದಿತು. ಈ ಬಗ್ಗೆ ಮುಖ್ಯ ಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಸಮಗ್ರ ತನಿಖೆಗೆ ಆದೇಶ ಮಾಡಿದ್ದರು. ಅದರಂತೆ ಒಟ್ಟು 117 ಕೋ.ರೂ. ವಂಚನೆ ಆಗಿರುವುದು ಗೊತ್ತಾಗಿತ್ತು.

ಬ್ಯಾಂಕ್‌ ಅಧಿಕಾರಿಗೆ ಬಂತು ಸಂಶಯ
ಯೋಗೀಶ್‌ ಆಚಾರ್ಯ ಮೂಡುಬಿದಿರೆ ಎಸ್‌ಬಿಐಗೆ 52 ಕೋ.ರೂ. ಚೆಕ್‌ ನಗದೀಕರಣಕ್ಕೆ ಹಾಕಿದಾಗ ಬ್ಯಾಂಕಿನ ಅಧಿಕಾರಿಗೆ ಸಂಶಯ ಬಂದು ಆಂಧ್ರ ಸಿಎಂ ಪರಿಹಾರ ನಿಧಿಯ ಸಿಬಂದಿಯನ್ನು ಸಂಪರ್ಕಿಸಿದ್ದರು. ಆಗ ನಕಲಿ ಸಹಿ ಹಾಕಿ ಚೆಕ್‌ ಬಳಕೆ ಮಾಡಿರುವುದು ಗೊತ್ತಾಗಿ ಚೆಕ್‌ ತಡೆ ಹಿಡಿಯಲಾಗಿತ್ತು. ಬಳಿಕ ಆಂಧ್ರ ಎಸಿಬಿ ಪೊಲೀಸರು ಮೂಡುಬಿದಿರೆಗೆ ಆಗಮಿಸಿ ಯೋಗೀಶ್‌ ಆಚಾರ್ಯ ಮತ್ತು ಉದಯ ಶೆಟ್ಟಿಯನ್ನು ಬಂಧಿಸಿ ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರು ಪಡಿಸಿ ಬಾಡಿ ವಾರಂಟ್‌ನಲ್ಲಿ ಆಂಧ್ರಕ್ಕೆ ಕರೆದೊಯ್ದಿದ್ದಾರೆ. ಯೋಗೀಶ್‌ ಆಚಾರ್ಯ ಮತ್ತು ಉದಯ ಶೆಟ್ಟಿ ಅವರು ಈ ಹಿಂದೆ ಮುಂಬಯಿಯಲ್ಲಿ ಇದ್ದು ಇತ್ತೀಚೆಗೆ ಊರಿಗೆ ಬಂದಿದ್ದರು ಎನ್ನಲಾಗಿದೆ.

ಹಲವು ರಾಜ್ಯಗಳಿಗೆ ವಿಸ್ತರಿತ ಜಾಲ
ಬೇನಾಮಿ ದಾಖಲೆ, ಚೆಕ್‌ಗಳನ್ನು ಬಳಸಿಕೊಂಡು ವಂಚನೆಗೆ ಯತ್ನಿಸಿರುವ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಈಗಾಗಲೇ ರಾಜ್ಯದ ಇತರ ಕೆಲವೆಡೆ ಹಾಗೂ ಹೊಸದಿಲ್ಲಿ, ಮುಂಬಯಿ, ಕೋಲ್ಕತಾಗಳಲ್ಲಿಯೂ ತನಿಖೆ ನಡೆಸಿದ್ದಾರೆ. ಪ್ರಕರಣದಲ್ಲಿ ಪ್ರಭಾವಿಗಳು, ಇಲಾಖೆಯ ಉನ್ನತ ಮಟ್ಟದಲ್ಲಿ ಸಂಪರ್ಕ ಇರುವವರ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಸರಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಪೊಲೀಸರು ಒಂದು ತಿಂಗಳ ಹಿಂದೆ ಮೂಡುಬಿದಿರೆಗೆ ಬಂದು ಇಬ್ಬರನ್ನೂ ಕರೆದುಕೊಂಡು ಹೋಗಿದ್ದಾರೆ. ಆ ಬಳಿಕ ಅದರ ತನಿಖೆಯ ಬಗ್ಗೆ ನಮಗೆ ಮಾಹಿತಿ ಇಲ್ಲ. ಆಂಧ್ರದಲ್ಲಿ ಆಗಿರುವ ವಂಚನೆ ಪ್ರಕರಣದ ಕುರಿತು ನಮ್ಮಲ್ಲಿ ಯಾವುದೇ ಮಾಹಿತಿ ಇಲ್ಲ.
– ವಿಕಾಸ್‌ ಕುಮಾರ್‌,  ಪೊಲೀಸ್‌ ಕಮಿಷನರ್‌, ಮಂಗಳೂರು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.