Corona: ಕೊರೊನಾದಿಂದ ಗುಣಮುಖರಾದವರ ಪೈಕಿ ಶೇ.6ರಷ್ಟು ಮಂದಿ ನಿಧನ

ತಮಿಳುನಾಡಿನಲ್ಲಿ ನಡೆದ ಅಧ್ಯಯನದಿಂದ ಬಹಿರಂಗ

Team Udayavani, Dec 12, 2023, 9:39 PM IST

covid

ಚೆನ್ನೈ: ತಮಿಳುನಾಡಿನಲ್ಲಿ 2020-22ರಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾದ ರೋಗಿಗಳ ಪೈಕಿ ಶೇ.6ರಷ್ಟು ಮಂದಿ 2023ರ ಜುಲೈ ವೇಳೆಗೆ ಮೃತಪಟ್ಟಿದ್ದಾರೆ. ತಮಿಳುನಾಡು ಆರೋಗ್ಯ ಸಚಿವಾಲಯದ ವರದಿಯಿಂದ ಈ ಮಾಹಿತಿ ಹೊರಬಿದ್ದಿದೆ.

ಮೃತಪಟ್ಟವರ ಪೈಕಿ ಶೇ.20ರಷ್ಟು ಮಂದಿ 61ರಿಂದ 80 ವರ್ಷದ ವಯೋಮಾನದವರಾಗಿದ್ದಾರೆ. ಶೇ.1ರಷ್ಟು ಮಂದಿ 40 ವರ್ಷಗಳಿಗಿಂತಲೂ ಕಡಿಮೆ ವಯಸ್ಸಿನವರಾಗಿದ್ದಾರೆ.
ಮದ್ರಾಸ್‌ ವೈದ್ಯಕೀಯ ಕಾಲೇಜಿನ ಇನ್ಸ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಟಿ ಮೆಡಿಸಿನ್‌ನ ವೈದ್ಯರು ಹಾಗೂ ಸಾರ್ವಜನಿಕ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಮಿಳುನಾಡಿನ(ಚೆನ್ನೈ ಹೊರತುಪಡಿಸಿ) 1,220 ರೋಗಿಗಳ(ಕೊರೊನಾದಿಂದ ಗುಣಮುಖರಾದವರ) ಸರ್ವೆ ಕಾರ್ಯ ನಡೆಸಿದರು. ಈ ರೋಗಿಗಳ ಪೈಕಿ 2023ರ ಜುಲೈ ವೇಳೆಗೆ 73 ಮಂದಿ ರೋಗಿಗಳು ಅಸುನೀಗಿದ್ದಾರೆ ಎಂದು ವರದಿ ತಿಳಿಸಿದೆ.

“ಕೊರೊನಾ ನಂತರದ ಸಮಸ್ಯೆಗಳು, ಸಹಜ ಕಾರಣಗಳು ಸೇರಿದಂತೆ ಅನೇಕ ಕಾರಣಗಳಿಂದ ಈ ರೋಗಿಗಳು ಮೃತಪಟ್ಟಿದ್ದಾರೆ. ನಿಧನರಾದವರ ಪೈಕಿ 61 ವರ್ಷ ಮೇಲ್ಪಟ್ಟವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 10 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳ ಸಂಖ್ಯೆ ಶೂನ್ಯವಾಗಿದೆ. ಕೊರೊನಾ ನಂತರದ ಗುಣಲಕ್ಷಣಗಳನ್ನು ತಿಳಿಯಲೆಂದು ಈ ಅಧ್ಯಯನ ಕೈಗೊಳ್ಳಲಾಗಿತ್ತು’ ಎಂದು ತಮಿಳುನಾಡು ಆರೋಗ್ಯ ನಿರ್ದೇಶಕ ಡಾ. ಟಿ.ಎಸ್‌.ಸೆಲ್ವವಿನಾಯಗಂ ತಿಳಿಸಿದ್ದಾರೆ.

-ಶೇ.20ರಷ್ಟು ಮೃತಪಟ್ಟವರು 61ರಿಂದ 80 ವರ್ಷದ ವಯೋಮಾನದವರಾಗಿದ್ದಾರೆ.
-ಶೇ.1ರಷ್ಟು ಮೃತಪಟ್ಟವರು 40 ವರ್ಷಗಳಿಗಿಂತಲೂ ಕಡಿಮೆ ವಯಸ್ಸಿನವರಾಗಿದ್ದಾರೆ.
-1,220 ರೋಗಿಗಳ(ಕೊರೊನಾದಿಂದ ಗುಣಮುಖರಾದವರ) ಸರ್ವೆ ನಡೆಸಲಾಯಿತು.
-73 ರೋಗಿಗಳು ಈ ಪೈಕಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.