ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ: 7.8 ಟನ್ ಅಕ್ಕಿ ಪೊಲೀಸರ ವಶಕ್ಕೆ
Team Udayavani, Jan 7, 2022, 10:39 AM IST
ಕಲಬುರಗಿ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಟ್ರಕ್ ಸಮೇತ 7.8 ಟನ್ಗೂ ಅಧಿಕ ಅಕ್ಕಿಯನ್ನು ನಗರ ಪೊಲೀಸರು ಜಪ್ತಿ ಮಾಡಿ, ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಲಾರಿ ಚಾಲಕ, ಮಹಾರಾಷ್ಟ್ರದ ಮೂಲದ ಅನಿಲ ರಾಠೊಡ್ ಎಂಬಾತನೇ ಬಂಧಿತ ಆರೋಪಿ.
ಖಚಿತ ಮಾಹಿತಿ ಮೇರೆಗೆ ಸಬ್ ಅರ್ಬನ್ ಠಾಣೆ ಪೊಲೀಸರು ಗುರುವಾರ ರಾತ್ರಿ ಇಲ್ಲಿನ ಗುಲಾಂ ಪರ್ವೇಜ್ ಕಾಲೋನಿ ಗೇಟ್ ಸಮೀಪ ದಾಳಿ ಮಾಡಿ ಟ್ರಕ್ ಪರಿಶೀಲನೆ ಮಾಡಿದಾಗ ಅಕ್ಕಿ ಸಾಗಾಟ ಮಾಡುತ್ತಿರುವುದು ಬಯಲಾಗಿದೆ.
ಗುಲಾಂ ಪರ್ವೇಜ್ ಕಾಲೋನಿಯ ರಹೆನಾ ಬೇಗಂ ಎಂಬುವವರು ಅಕ್ಕಿ ಸಂಗ್ರಹಿಸಿ ಇಟ್ಟಿದ್ದರು. ಈ ಅಕ್ಕಿಯನ್ನು ಟ್ರಕ್ ಮೂಲಕ ಶರಣು ಬೇಳೂರ ಎಂಬಾತ ಸಾಗಾಟ ಮಾಡಿಸುತ್ತಿದ್ದ. ಆದರೆ, ಎಲ್ಲಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನುವ ಕುರಿತು ನಿಖರ ಮಾಹಿತಿ ಸಿಕ್ಕಿಲ್ಲ. ಸದ್ಯ ಬಂಧಿತ ಆರೋಪಿ ಅನಿಲ ಮಹಾರಾಷ್ಟ್ರದ ಮೂಲದ ವ್ಯಕ್ತಿಯಾಗಿರುವುದರಿಂದ ಅಕ್ಕಿಯನ್ನು ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂಬ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಹಾರ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಹೆನಾ ಬೇಗಂ, ಶರಣು ಬೇಳೂರ, ಅನಿಲ ರಾಠೊಡ್ ಹಾಗೂ ಟ್ರಕ್ ಮಾಲೀಕನ ವಿರುದ್ಧ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ