ಬೀದರ್ನಲ್ಲಿ ಮತ್ತೆ 7 ಮಂದಿಗೆ ಕೋವಿಡ್-19 ಸೋಂಕು ದೃಢ
Team Udayavani, Jun 28, 2020, 8:51 PM IST
ಬೀದರ್: ಜಿಲ್ಲೆಯಲ್ಲಿ ಒಂದೇ ದಿನ ಮೂವರನ್ನು ಬಲಿ ಪಡೆದು ಆರ್ಭಟಿಸಿದ್ದ ಕೋವಿಡ್-19 ಸೋಂಕು ರವಿವಾರ ಕೊಂಚ ತಗ್ಗಿದ್ದು, 7 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 562ಕ್ಕೆ ಏರಿಕೆ ಆಗಿದೆ.
55 ವರ್ಷದ ಪುರುಷ (ಪಿ-12189), 60 ವರ್ಷದ ವೃದ್ಧೆ (ಪಿ-12190), 64 ವರ್ಷದ ವೃದ್ಧೆ (ಪಿ-12191), 39 ವರ್ಷದ ಮಹಿಳೆ (ಪಿ-12192), 16 ವರ್ಷದ ಯುವತಿ (ಪಿ-12193), 43 ವರ್ಷದ ಪುರುಷ (ಪಿ-12194) ಮತ್ತು 45 ವರ್ಷದ ಪುರುಷ (ಪಿ-12195) ರೋಗಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಈವರೆಗೆ 562 ಪಾಸಿಟಿವ್ ಪ್ರಕರಣಗಳು ವರದಿ ಆದಂತಾಗಿದ್ದು, 19 ಜನ ಸಾವನ್ನಪ್ಪಿದ್ದರೆ 456 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 87 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
857 ಜನರ ವರದಿ ಬಾಕಿ: ಜಿಲ್ಲೆಯಲ್ಲಿ ಕೋವಿಡ್-19 ಶಂಕಿತ 857 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರಬೇಕಿದೆ. ರವಿವಾರ 137 ಜನ ಸೇರಿ ಈವರೆಗೆ 37,036 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 35,617 ಮಂದಿಯದ್ದು ನೆಗೆಟಿವ್ ಬಂದಿದೆ. ಸೋಂಕಿತರ ಪ್ರಥಮ ಸಂಪರ್ಕಿತ 5503 ಮತ್ತು ದ್ವಿತೀಯ ಸಂಪರ್ಕಿತ 6887 ಜನರನ್ನು ಗುರುತಿಸಲಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!