ಶಾಲೆ-ಕಾಲೇಜುಗಳಲ್ಲಿ 75 ಎನ್‌ಸಿಸಿ ಘಟಕ: ಸಿಎಂ

ಎನ್‌ಸಿಸಿ ತರಬೇತಿ ಪಡೆಯುವ ಪ್ರತಿ ವಿದ್ಯಾರ್ಥಿಗೆ ಸರಕಾರದಿಂದ 12 ಸಾವಿರ ರೂ.

Team Udayavani, Jan 24, 2022, 6:30 AM IST

ಶಾಲೆ-ಕಾಲೇಜುಗಳಲ್ಲಿ 75 ಎನ್‌ಸಿಸಿ ಘಟಕ: ಸಿಎಂ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಕರು ಎನ್‌ಸಿಸಿ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದು, ಅವರಿಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ರಾಜ್ಯದ ಶಾಲಾ-ಕಾಲೇಜುಗಳಲ್ಲಿ 75 ಎನ್‌ಸಿಸಿ ಘಟಕಗಳನ್ನು ಆರಂಭಿಸಿ ತರಬೇತಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ರವಿವಾರ ಜಕ್ಕೂರಿನ ನವೀಕೃತ ಸರಕಾರಿ ವೈಮಾನಿಕ ತರಬೇತಿ ಶಾಲೆ, ಟ್ವಿನ್‌ ಎಂಜಿನ್‌ ತರಬೇತಿ ವಿಮಾನ, ಜಿಎಫ್ಟಿಎಸ್‌ ಲೋಗೋ, 75 ಪೈಲಟ್‌ಗಳಿಗೆ ತರಬೇತಿ ನೀಡುವುದು, ಮಹಿಳೆಯರಿಗೆ ಸ್ವರಕ್ಷಣೆ ತರಬೇತಿ ಹಾಗೂ ಹೆಲಿ ಪ್ರವಾಸೋದ್ಯಮ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಸಿಎಂ ಮಾತನಾಡಿದರು.

7,500 ಮಂದಿಗೆ ತರಬೇತಿ
ರಾಜ್ಯಾದ್ಯಂತ 75 ಶಾಲಾ-ಕಾಲೇಜುಗಳಲ್ಲಿ ತಲಾ ನೂರು ಮಂದಿಯಂತೆ 7,500 ವಿದ್ಯಾರ್ಥಿಗಳಿಗೆ ಎನ್‌ಸಿಸಿ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆಯುವ ಪ್ರತಿ ವಿದ್ಯಾರ್ಥಿಗೆ 12 ಸಾವಿರ ರೂ.ಗಳನ್ನು ಸರಕಾರ ನೀಡಲಿದೆ ಎಂದು ಹೇಳಿದರು. ಪ್ರಸ್ತುತ ಶಾಲೆಗಳಲ್ಲಿ 44 ಸಾವಿರ ಕೆಡೆಟ್‌ಗಳಿದ್ದು, ಇದನ್ನು ಕಾಲೇಜುಗಳಿಗೂ ವಿಸ್ತರಿಸಿ ಕೆಡೆಟ್‌ಗಳ ಸಂಖ್ಯೆಯನ್ನು 50 ಸಾವಿರ ದಾಟಿಸಲು ಸರಕಾರ ಯೋಜನೆ ರೂಪಿಸಿದೆ. ಕೆಡೆಟ್‌ಗಳ ಯೋಜನೆಗೆ ರಕ್ಷಣಾ ಇಲಾಖೆ ಅನುಮತಿ ಬೇಕಿದ್ದು, ಈ ಸಂಬಂಧ ಕೇಂದ್ರ ಸರಕಾರದೊಂದಿಗೆ ಚರ್ಚಿಸಿ ಕೆಡೆಟ್‌ಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಹೇಳಿದರು. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಶಾಸಕ ಕೃಷ್ಣ ಭೈರೇಗೌಡ, ಎಂಎಲ್‌ಸಿ ಗೋವಿಂದರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ:ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ರಾಜ್ಯದಲ್ಲೇ ವೈಮಾನಿಕ ತರಬೇತಿ;
2 ಕೋಟಿ ರೂ. ವೆಚ್ಚದಲ್ಲಿ ರನ್‌ ವೇ
ಯುವಜನ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಮಾತನಾಡಿ, ನವೀಕೃತ ವೈಮಾನಿಕ ತರಬೇತಿ ಶಾಲೆಯಲ್ಲಿ ಪ್ರತಿ ವರ್ಷ ರಾಜ್ಯದ 100 ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.

ರಾಜ್ಯದ ಜನರು ತರಬೇತಿಗಾಗಿ ಅಮೆರಿಕ, ಇಂಗ್ಲೆಂಡ್‌ಗೆ ಹೋಗುವುದನ್ನು ತಪ್ಪಿಸುವುದಕ್ಕಾಗಿ ಮತ್ತು ರಾಜ್ಯದ ಬಡವರ ಮಕ್ಕಳು ಕೂಡ ತರಬೇತಿ ಪಡೆಯುವಂತಾಗಬೇಕು ಎಂಬುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು. ನಾನು 1994ರಲ್ಲಿ ನಾಗಪುರದಲ್ಲಿ ಪೈಲಟ್‌ ತರಬೇತಿ ಪಡೆದಿದ್ದೆ. ಅನಂತರ ಹಣಕಾಸಿನ ಸಮಸ್ಯೆಯಿಂದ ಪೂರ್ಣ ಪ್ರಮಾಣದ ತರಬೇತಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಸಚಿವರು ಹೇಳಿದರು. ಎರಡು ಕೋಟಿ ರೂ. ವೆಚ್ಚದಲ್ಲಿ 874 ಮೀ. ರನ್‌ ವೇ ಉನ್ನತೀಕರಿಸಲಾಗಿದೆ.

ಶಾಲೆಯಲ್ಲಿದ್ದ ಐದು ಸಿಂಗಲ್‌ ಎಂಜಿನ್‌ ವಿಮಾನಗಳನ್ನು ದುರಸ್ತಿಗೊಳಿಸಿ ತರಬೇತಿಗೆ ಸಿದ್ದಪಡಿಸಲಾಗಿದೆ. 5 ಕೋಟಿ ರೂ. ವೆಚ್ಚದಲ್ಲಿ ಟ್ವಿನ್‌ ಎಂಜಿನ್‌ ಖರೀದಿಸಲಾಗಿದೆ. ಇದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ. ಜಕ್ಕೂರು ವೈಮಾನಿಕ ತರಬೇತಿ ಶಾಲೆಯಲ್ಲಿ ಈಗಾಗಲೇ 40 ವಿದ್ಯಾರ್ಥಿಗಳಿದ್ದು, ಹೊಸ ಬ್ಯಾಚ್‌ಗೆ 35 ಅರ್ಜಿಗಳು ಬಂದಿವೆ. ಮುಂದಿನ ವಾರದಿಂದ ತರಬೇತಿ ಆರಂಭವಾಗಲಿವೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.