ರಾಜ್ಯದ 83 ತಾಲ್ಲೂಕುಗಳು ಪ್ರವಾಹ ಪೀಡಿತ: ಕಂದಾಯ ಸಚಿವ ಆರ್. ಅಶೋಕ್
Team Udayavani, Aug 17, 2021, 10:45 PM IST
ಬೆಂಗಳೂರು: ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡುವ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಚಂಡಮಾರುತ ಉಂಟಾಗುವ ಬಗ್ಗೆ ಮುಂಚಿತವಾಗಿಯೇ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆರು ಕಿಲೋಮೀಟರ್ಗಳವರೆಗೆ ಕೇಳಬಹುದಾದ ಸೈರನ್ಗಳನ್ನು ಸ್ಥಾಪಿಸಲಾಗುತ್ತದೆ. ಮೊದಲ ಹಂತದಲ್ಲಿ ಕರಾವಳಿ ಪ್ರದೇಶದಲ್ಲಿ 40 ಸ್ಥಳಗಳಲ್ಲಿ ಪ್ರಾರಂಭಿಸಲು ಯೋಜಿಸಲಾಗಿದ್ದು, ಶೀಘ್ರದಲ್ಲೇ ಇದನ್ನು 60 ಸ್ಥಳಗಳಿಗೆ ವಿಸ್ತರಿಸುವ ಚಿಂತನೆಯಿದೆ.
ಪ್ರತಿ ಕೇಂದ್ರವನ್ನು ಸ್ಥಾಪಿಸಲು 10 ರಿಂದ 12 ಕೋಟಿ ವೆಚ್ಚವಾಗುತ್ತಿದ್ದು, ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರದ ನಿಧಿಯೊಂದಿಗೆ ಇದನ್ನು ಕಾರ್ಯಗತಗೊಳಿಸಲಾಗುವುದು. ಇದು ವಿಶೇಷವಾಗಿ ಮೀನುಗಾರರು ಮತ್ತು ಕರಾವಳಿ ಪ್ರದೇಶಗಳಲ್ಲಿ ಇರುವವರನ್ನ ಎಚ್ಚರಿಸಿ, ಸಂಭವಿಸಬಹುದಾದ ಪ್ರಾಣಹಾನಿಯನ್ನು ತಪ್ಪಿಸುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ಷರಿಯಾ ಚೌಕಟ್ಟಿನಡಿ ಮಹಿಳೆಯರಿಗೆ ಹಕ್ಕುಗಳನ್ನು ನೀಡುತ್ತೇವೆ : ತಾಲಿಬಾನ್ ವಕ್ತಾರ ಜಬೀಹುಲ್ಹಾ
ಅದೆ ರೀತಿ ಸಂಭವನೀಯ ಸಿಡಿಲಿನ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪ್ರತಿ ವರ್ಷ ಸಿಡಿಲಿಗೆ ತುತ್ತಾಗಿ ಅನೇಕ ಜನರು ಸಾವನ್ನಪ್ಪುತ್ತಾರೆ. ಆದ್ದರಿಂದ, ನಾವು ಆಯ್ದ ಗ್ರಾಮಗಳಲ್ಲಿ ಸಿಡಿಲು ಸಂಭವಿಸುವ ಕುರಿತಂತೆ ಮುಂಜಾಗ್ರತೆ ನೀಡುವ ವ್ಯವಸ್ಥೆಯನ್ನು ಪರಿಚಯಿಸುತ್ತಿದ್ದೇವೆ. ಕೇಂದ್ರ ಸರ್ಕಾರದ ನೆರವಿನಿಂದ ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ. ಈ ಎಚ್ಚರಿಕೆಯ ವ್ಯವಸ್ಥೆಗಳನ್ನು ಆಯ್ದ ಗ್ರಾಮ ಪಂಚಾಯತಿಗಳಲ್ಲಿ ಸ್ಥಾಪಿಸಲಾಗುವುದು ಮತ್ತು ಬೆಂಗಳೂರಿನ ಹವಾಮಾನ ಕಚೇರಿಯೊಂದಿಗೆ ಇದನ್ನು ಸಂಪರ್ಕಿಸಲಾಗುವುದು. ಈ ಯೋಜನೆಯ ಕೆಲಸಗಳು ಈಗಾಗಲೇ ನಡೆಯುತ್ತಿವೆ ಮತ್ತು ಶೀಘ್ರವೇ ಕಾರ್ಯಗತಗೊಳ್ಳಲಿದೆ ಎಂದು ಹೇಳಿದರು.
ಪ್ರವಾಹ ಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಳ:
ರಾಜ್ಯದಲ್ಲಿನ 83 ತಾಲ್ಲೂಕುಗಳು ಅಧಿಕೃತವಾಗಿ ಪ್ರವಾಹ ಪೀಡಿತಗೊಂಡಿವೆ. ಈ ಮೊದಲು 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿತ್ತು. ಆದರೆ, ಇತ್ತೀಚಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ನಂತರ, ಬೆಳಗಾವಿ, ಚಿಕ್ಕಮಗಳೂರು, ಹುಬ್ಬಳ್ಳಿ ನಗರ, ಕಡೂರು, ದಾವಣಗೆರೆ, ದಾಂಡೇಲಿ, ಆಲೂರು, ಲಕ್ಷೆ¾àಶ್ವರ, ತರೀಕೆರೆ, ಮುಂಡಗೋಡು, ಸೂಪಾ, ಹುಬ್ಬಳ್ಳಿ, ಭದ್ರಾವತಿ, ಚನ್ನಗಿರಿ, ಅಣ್ಣಿಗೇರಿ, ಬಬಲೇಶ್ವರ, ನಿಡಗುಂದಿ, ಕೊಲ್ಹಾರ, ಮುದ್ದೇಬಿಹಾಳ, ಹರಪನಹಳ್ಳಿ, ಹೊಸನಗರ ಮತ್ತು ಮೂಡಿಗೆರೆ ಸೇರಿದಂತೆ 22 ತಾಲ್ಲೂಕುಗಳು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಹೀಗಾಗಿ ರಾಜ್ಯದಲ್ಲಿ 83 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಪಟ್ಟಿ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ