ರಾಜ್ಯದ 83 ತಾಲ್ಲೂಕುಗಳು ಪ್ರವಾಹ ಪೀಡಿತ: ಕಂದಾಯ ಸಚಿವ ಆರ್‌. ಅಶೋಕ್‌


Team Udayavani, Aug 17, 2021, 10:45 PM IST

ರಾಜ್ಯದ 83 ತಾಲ್ಲೂಕುಗಳು ಪ್ರವಾಹ ಪೀಡಿತ: ಕಂದಾಯ ಸಚಿವ ಆರ್‌. ಅಶೋಕ್‌

ಬೆಂಗಳೂರು: ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡುವ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಚಂಡಮಾರುತ ಉಂಟಾಗುವ ಬಗ್ಗೆ ಮುಂಚಿತವಾಗಿಯೇ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆರು ಕಿಲೋಮೀಟರ್‌ಗಳವರೆಗೆ ಕೇಳಬಹುದಾದ ಸೈರನ್‌ಗಳನ್ನು ಸ್ಥಾಪಿಸಲಾಗುತ್ತದೆ. ಮೊದಲ ಹಂತದಲ್ಲಿ ಕರಾವಳಿ ಪ್ರದೇಶದಲ್ಲಿ 40 ಸ್ಥಳಗಳಲ್ಲಿ ಪ್ರಾರಂಭಿಸಲು ಯೋಜಿಸಲಾಗಿದ್ದು, ಶೀಘ್ರದಲ್ಲೇ ಇದನ್ನು 60 ಸ್ಥಳಗಳಿಗೆ ವಿಸ್ತರಿಸುವ ಚಿಂತನೆಯಿದೆ.

ಪ್ರತಿ ಕೇಂದ್ರವನ್ನು ಸ್ಥಾಪಿಸಲು 10 ರಿಂದ 12 ಕೋಟಿ ವೆಚ್ಚವಾಗುತ್ತಿದ್ದು, ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರದ ನಿಧಿಯೊಂದಿಗೆ ಇದನ್ನು ಕಾರ್ಯಗತಗೊಳಿಸಲಾಗುವುದು. ಇದು ವಿಶೇಷವಾಗಿ ಮೀನುಗಾರರು ಮತ್ತು ಕರಾವಳಿ ಪ್ರದೇಶಗಳಲ್ಲಿ ಇರುವವರನ್ನ ಎಚ್ಚರಿಸಿ, ಸಂಭವಿಸಬಹುದಾದ ಪ್ರಾಣಹಾನಿಯನ್ನು ತಪ್ಪಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಷರಿಯಾ ಚೌಕಟ್ಟಿನಡಿ ಮಹಿಳೆಯರಿಗೆ ಹಕ್ಕುಗಳನ್ನು ನೀಡುತ್ತೇವೆ : ತಾಲಿಬಾನ್ ವಕ್ತಾರ ಜಬೀಹುಲ್ಹಾ

ಅದೆ ರೀತಿ ಸಂಭವನೀಯ ಸಿಡಿಲಿನ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪ್ರತಿ ವರ್ಷ ಸಿಡಿಲಿಗೆ ತುತ್ತಾಗಿ ಅನೇಕ ಜನರು ಸಾವನ್ನಪ್ಪುತ್ತಾರೆ. ಆದ್ದರಿಂದ, ನಾವು ಆಯ್ದ ಗ್ರಾಮಗಳಲ್ಲಿ ಸಿಡಿಲು ಸಂಭವಿಸುವ ಕುರಿತಂತೆ ಮುಂಜಾಗ್ರತೆ ನೀಡುವ ವ್ಯವಸ್ಥೆಯನ್ನು ಪರಿಚಯಿಸುತ್ತಿದ್ದೇವೆ. ಕೇಂದ್ರ ಸರ್ಕಾರದ ನೆರವಿನಿಂದ ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ. ಈ ಎಚ್ಚರಿಕೆಯ ವ್ಯವಸ್ಥೆಗಳನ್ನು ಆಯ್ದ ಗ್ರಾಮ ಪಂಚಾಯತಿಗಳಲ್ಲಿ ಸ್ಥಾಪಿಸಲಾಗುವುದು ಮತ್ತು ಬೆಂಗಳೂರಿನ ಹವಾಮಾನ ಕಚೇರಿಯೊಂದಿಗೆ ಇದನ್ನು ಸಂಪರ್ಕಿಸಲಾಗುವುದು. ಈ ಯೋಜನೆಯ ಕೆಲಸಗಳು ಈಗಾಗಲೇ ನಡೆಯುತ್ತಿವೆ ಮತ್ತು ಶೀಘ್ರವೇ ಕಾರ್ಯಗತಗೊಳ್ಳಲಿದೆ ಎಂದು ಹೇಳಿದರು.

ಪ್ರವಾಹ ಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಳ:
ರಾಜ್ಯದಲ್ಲಿನ 83 ತಾಲ್ಲೂಕುಗಳು ಅಧಿಕೃತವಾಗಿ ಪ್ರವಾಹ ಪೀಡಿತಗೊಂಡಿವೆ. ಈ ಮೊದಲು 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿತ್ತು. ಆದರೆ, ಇತ್ತೀಚಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ನಂತರ, ಬೆಳಗಾವಿ, ಚಿಕ್ಕಮಗಳೂರು, ಹುಬ್ಬಳ್ಳಿ ನಗರ, ಕಡೂರು, ದಾವಣಗೆರೆ, ದಾಂಡೇಲಿ, ಆಲೂರು, ಲಕ್ಷೆ¾àಶ್ವರ, ತರೀಕೆರೆ, ಮುಂಡಗೋಡು, ಸೂಪಾ, ಹುಬ್ಬಳ್ಳಿ, ಭದ್ರಾವತಿ, ಚನ್ನಗಿರಿ, ಅಣ್ಣಿಗೇರಿ, ಬಬಲೇಶ್ವರ, ನಿಡಗುಂದಿ, ಕೊಲ್ಹಾರ, ಮುದ್ದೇಬಿಹಾಳ, ಹರಪನಹಳ್ಳಿ, ಹೊಸನಗರ ಮತ್ತು ಮೂಡಿಗೆರೆ ಸೇರಿದಂತೆ 22 ತಾಲ್ಲೂಕುಗಳು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಹೀಗಾಗಿ ರಾಜ್ಯದಲ್ಲಿ 83 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಪಟ್ಟಿ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.