ಕೋವಿಡ್ ಅಲೆಯ ನಿಯಂತ್ರಣಕ್ಕೆ15 ದಿನ ಲಾಕ್‌ಡೌನ್‌ ಅನಿವಾರ್ಯ


Team Udayavani, Apr 17, 2021, 7:00 AM IST

15 ದಿನ ಲಾಕ್‌ಡೌನ್‌ ಅನಿವಾರ್ಯ

ಎರಡನೇ ಅಲೆ ಮೊದಲ ಅಲೆಗಿಂತ ವೇಗವಾಗಿ ಹರಡುತ್ತಿದೆ. ಇಂತಹ ಸ್ಥಿತಿಯಲ್ಲಿ ಸರಕಾರ ಬಹಳ ಕಠಿನ ಕ್ರಮಕ್ಕೆ ಮುಂದಾಗಲೇಬೇಕು. ಕೊರೊನಾ ಅಲೆಯನ್ನು ಮುರಿಯಬೇಕಾದರೆ ಕನಿಷ್ಠ 15 ದಿನಗಳ ಸಂಪೂರ್ಣ ಲಾಕ್‌ಡೌನ್‌ ಅನಿವಾರ್ಯ.

ಕೊರೊನಾ ಸಂಪೂರ್ಣ ಹೋಗಿಲ್ಲ ಎಂಬುದು ಗೊತ್ತಿದ್ದರೂ ಸರಕಾರ ಇದನ್ನು ಹಗುರವಾಗಿ ಪರಿಗಣಿಸಿತು. ಇದರ ಪರಿಣಾಮ ಈಗ 2ನೇ ಅಲೆಯ ರೂಪದಲ್ಲಿ ನಾವು ಅನುಭವಿಸ ಬೇಕಾಗಿದೆ. ಕೊರೊನಾ ಮಾರ್ಗಸೂಚಿಗಳು ಎಲ್ಲಿಯೂ ಪಾಲನೆ ಯಾಗುತ್ತಿಲ್ಲ. ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಸ್ಯಾನಿ. ಟೈಸ್‌ ಮಾಡುವುದು ಎಲ್ಲಿಯೂ ಕಾಣುತ್ತಿಲ್ಲ. ಮೇಲಾಗಿ ಕೊರೊನಾ ಹರಡುತ್ತಿದ್ದರೂ ಸರಕಾರ ಯಾವುದೇ ಜಾತ್ರೆ, ಸಮಾರಂಭಗಳಿಗೆ ನಿರ್ಬಂಧನೆ ಹಾಕಲಿಲ್ಲ. ಇವತ್ತಿಗೂ ಅನೇಕ ಕಡೆ ಜಾತ್ರೆಗಳು ನಡೆಯುತ್ತಿವೆ. ಚುನಾ ವಣೆಗಳನ್ನು ಸಹ ಸರಕಾರ ಮತ್ತು ಚುನಾವಣ ಆಯೋಗ ಗಂಭೀರವಾಗಿ ತೆಗೆದುಕೊಳ್ಳಲೇ ಇಲ್ಲ. ಹೀಗಾಗಿ ಈಗ ಯಥಾ ರಾಜಾ ತಥಾ ಪ್ರಜಾ ಪರಿಸ್ಥಿತಿ ಇದೆ.

ಕೊರೊನಾ ಕೇವಲ ಒಂದು ತಿಂಗಳು ಅಥವಾ ಆರು ತಿಂಗಳು ಬಂದು ಹೋಗುವ ರೋಗವಲ್ಲ. ಇದು ಬಹಳ ದೊಡ್ಡ ಸಾಂಕ್ರಾಮಿಕ ರೋಗ ಎಂಬುದು ಇಡೀ ಜಗತ್ತಿಗೆ ಅರಿವಾಗಿದೆ. ದೊಡ್ಡ ದೊಡ್ಡ ದೇಶಗಳು ಇದರಿಂದ ಪಡಬಾರದ ಕಷ್ಟ ಪಟ್ಟವು. ಅಪಾರ ಸಾವು, ನೋವಾದವು. ಎರಡನೇ ಅಲೆ ಬಂದಾಗ ಬಹಳ ಜಾಗೃತರಾದವು. ಇದನ್ನು ನೋಡಿಯೂ ನಮ್ಮವರು ಪಾಠ ಕಲಿಯಲಿಲ್ಲ.

ಮೊದಲ ಅಲೆ ಬಂದಾಗ ಎಲ್ಲ ಕಡೆ ವ್ಯಾಕ್ಸಿನ್‌ ಬೇಡಿಕೆ ವ್ಯಕ್ತವಾಯಿತು. ನಮ್ಮ ದೇಶದಲ್ಲಿ ಎರಡು ವ್ಯಾಕ್ಸಿನ್‌ ಬಂದಾಗ ಎಷ್ಟೋ ನೆಮ್ಮದಿ ಉಂಟಾಯಿತು. ಆದರೆ ಸರಕಾರ ಇಲ್ಲಿಯೂ ಎಡವಿತು. ನಮ್ಮಲ್ಲೇ ಸಾಕಷ್ಟು ಜನಸಂಖ್ಯೆ ಇರುವಾಗ ಬೇರೆ ದೇಶಗಳಿಗೆ ರಫ್ತು ಮಾಡಿತು. ಸರಕಾರದ ಒಂದು ತಪ್ಪಿನಿಂದ ನಮ್ಮಲ್ಲಿ ಎಲ್ಲ ಜನರಿಗೆ ವ್ಯಾಕ್ಸಿನ್‌ ಸಿಗದೇ ಈಗ ಸಾಯುವಂತಾಗಿದೆ. ಅದಕ್ಕೆ ಹೊಣೆ ಯಾರು? ಒಂದು ದೊಡ್ಡ ಸಾಂಕ್ರಾಮಿಕ ರೋಗ ಬಂದಾಗ ಅದನ್ನು ಸಮರ್ಥವಾಗಿ ನಿಭಾಯಿಸುವುದು ಸರಕಾರದ ದೊಡ್ಡ ಕರ್ತವ್ಯ. ಇದರಲ್ಲಿ ತಪ್ಪಾಗಿದೆ.

ನಾನು ವೈದ್ಯಳಾಗಿ ನೋಡಿದಾಗ ಎಲ್ಲವೂ ತಪ್ಪಾಗಿ ಕಾಣುತ್ತದೆ. ಎಲ್ಲಿಯೂ ಕೊರೊನಾ ನಿಯಮಾವಳಿಗಳ ಪಾಲನೆಯಾಗಿಲ್ಲ. ಅದೇ ರಾಜಕಾರಣಿಯಾಗಿ ನಾವು ಕಾರ್ಯಕ್ರಮಗಳಿಗೆ ಹೋಗಬೇಕು. ಜನರ ಜತೆ ಬೆರೆಯಬೇಕು. ಇದು ಅನಿವಾರ್ಯ. ಹೀಗಿರುವಾಗ ಸರಕಾರವೇ ಎಲ್ಲದಕ್ಕೂ ನಿರ್ಬಂಧ ಹಾಕಿ ಒಂದು ಕಠಿನ ನೀತಿ ಜಾರಿಗೆ ತರಬೇಕು. ಕಾಟಾಚಾರದ ಕ್ರಮ ಯಾವು ದಕ್ಕೂ ಪ್ರಯೋಜನ ಇಲ್ಲ. ಈಗ ಪ್ರತಿನಿತ್ಯ ಸಹಸ್ರಾರು ಪ್ರಕರಣಗಳು ವರದಿಯಾಗುತ್ತಿವೆ. ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಜಾರಿ ಮಾಡಿದ್ದರಿಂದ ಅಲ್ಲಿಂದ ಜನರು ಬರುತ್ತಿದ್ದಾರೆ. ಅವರನ್ನು ಹೇಗೆ ನಿಯಂತ್ರಣ ಮಾಡಬೇಕು. ಮನೆಯಲ್ಲೇ ಹೇಗೆ ಇಡಬೇಕು ಎಂಬುದರ ಬಗ್ಗೆ ಸರಕಾರ ಆಲೋಚನೆ ಮಾಡಬೇಕು. ಎರಡನೇ ಅಲೆಯ ಸರಪಳಿ ತುಂಡು ಮಾಡಬೇಕಾದರೆ 15 ದಿನಗಳ ಲಾಕ್‌ಡೌನ್‌ ಒಂದೇ ಪರಿಹಾರ. ಅದನ್ನು ಬಿಟ್ಟು ಜಟಕಾ ಶೋ ರೀತಿಯ ರಾತ್ರಿ ಕರ್ಫ್ಯೂನಿಂದ ಏನೂ ಪ್ರಯೋಜನ ಇಲ್ಲ.

ಖಾನಾಪುರ ಕ್ಷೇತ್ರದಲ್ಲಿ ಇದುವರೆಗೆ ಅಂತಹ ಪ್ರಕರಣ ಗಳು ವರದಿಯಾಗಿಲ್ಲ. ಆದರೂ ಸಹ ನಿರಂತರವಾಗಿ ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಡೆದಿದೆ. ನಾವು ಕಡ್ಡಾಯವಾಗಿ ಮಾಸ್ಕ್ ಹಾಕಿದರೆ ಜನರು ನಮ್ಮನ್ನು ಅನುಮಾನದಿಂದ ನೋಡುತ್ತಾರೆ. ನಾವೇ ಲಾಕ್‌ಡೌನ್‌ ಬಗ್ಗೆ ಹೇಳಿದರೆ ಸರಕಾರ ಆದೇಶ ಮಾಡಿಲ್ಲ. ನಿಮ್ಮದೇನು ಎನ್ನುವ ರೀತಿಯಲ್ಲಿ ಪ್ರಶ್ನೆ ಮಾಡುತ್ತಾರೆ ಇದರಲ್ಲಿ ಜನರ ಜವಾಬ್ದಾರಿ ಬಹಳ ಇದೆ.

– ಡಾ| ಅಂಜಲಿ ನಿಂಬಾಳ್ಕರ್‌, ಶಾಸಕಿ, ಖಾನಾಪುರ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.