ಸುಧಾರಣೆ-ಜನಪ್ರಿಯತೆ ನಡುವೆ ಸಮತೋಲನ ಕಾಯ್ದುಕೊಂಡ ಬಜೆಟ್‌


Team Udayavani, Feb 2, 2023, 6:00 AM IST

ಸುಧಾರಣೆ-ಜನಪ್ರಿಯತೆ ನಡುವೆ ಸಮತೋಲನ ಕಾಯ್ದುಕೊಂಡ ಬಜೆಟ್‌

ಕೇಂದ್ರ ಸರಕಾರದ 2023-24ನೇ ಸಾಲಿನ ಬಜೆಟ್‌ ಜನಸಾಮಾನ್ಯರು ಮತ್ತು ಮಧ್ಯಮ ವರ್ಗದ ಅನಿವಾರ್ಯತೆಗಳಿಗೆ ಸ್ಪಂದಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಚುನಾವಣ ವರ್ಷವಾಗಿರುವುದರಿಂದ ಈ ಬಾರಿ ಕೇಂದ್ರ ಸರಕಾರ ತನ್ನ ಸುಧಾರಣ ನೀತಿಗಳಲ್ಲಿ ಒಂದಿಷ್ಟು ಸಡಿಲಿಕೆ ಮಾಡಿ ಜನಪ್ರಿಯತೆಯತ್ತ ವಾಲಿರುವುದಕ್ಕೆ ಬಜೆಟ್‌ನಲ್ಲಿನ ಅನೇಕ ಘೋಷಣೆಗಳೇ ಸಾಕ್ಷಿ. ಆದರೂ ಎಲ್ಲರನ್ನೂ ಒಳಗೊಂಡ ಸಂತುಲಿತ ಬಜೆಟ್‌ ಅನ್ನು ನೀಡಲು ಸರಕಾರ ಕಸರತ್ತು ನಡೆಸಿರುವುದಂತೂ ಸ್ಪಷ್ಟ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ವ್ಯಾಪಿಸಿದ ಬಳಿಕ ಭಾರೀ ಸಂಕಷ್ಟಕ್ಕೆ ತುತ್ತಾಗಿದ್ದ ಜನಸಾಮಾನ್ಯರು ಅದರಲ್ಲೂ ಮಧ್ಯಮ ವರ್ಗದ ಜನರ ನೋವಿಗೆ ಸಾಂತ್ವನ ಹೇಳುವ ಕಾರ್ಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಬಾರಿಯ ತಮ್ಮ ಮುಂಗಡಪತ್ರದಲ್ಲಿ ಮಾಡಿದ್ದಾರೆ. ಮುಖ್ಯವಾಗಿ ಆದಾಯ ತೆರಿಗೆ ವಿನಾಯಿತಿ ಮತ್ತು ಆದಾಯ ತೆರಿಗೆ ಸ್ಲಾéಬ್‌ಗಳಲ್ಲಿ ಒಂದಿಷ್ಟು ಬದಲಾವಣೆಗಳನ್ನು ಮಾಡುವ ಮೂಲಕ ಈ ವರ್ಗದ ಮಂದಿ ನಿಟ್ಟುಸಿರು ಬಿಡುವಂತೆ ಮಾಡಲಾಗಿದೆ. ಇನ್ನು ಬಜೆಟ್‌ನಲ್ಲಿ ಘೋಷಿಸಲಾಗಿರುವ ಹಲವಾರು ಯೋಜನೆಗಳಲ್ಲಿಯೂ ಈ ವರ್ಗದ ಜನರನ್ನು ಗಮನದಲ್ಲಿರಿಸಿ ಅನೇಕ ರಿಯಾಯಿತಿ, ಕೊಡುಗೆಗಳನ್ನು ಪ್ರಕಟಿಸಿರುವುದು ಕೂಡ ಬಜೆಟ್‌ನ ಧನಾತ್ಮಕ ಅಂಶ.

ಈ ಸಲವೂ ಆದ್ಯತ ವಲಯಗಳಾದ ಕೃಷಿ, ಆರೋಗ್ಯ, ರಕ್ಷಣೆ, ಶಿಕ್ಷಣ, ಮೂಲಸೌಕರ್ಯಕ್ಕೆ ಹೆಚ್ಚಿನ ಮೊತ್ತವನ್ನು ಮೀಸಲಿರಿಸಲಾಗಿದೆ. ಕೃಷಿ ರಂಗಕ್ಕೆ ಸಹಜವಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಉತ್ತೇಜನ ಲಭಿಸಿದ್ದು ಕೌಶಲ ಆಧಾರಿತ ಶಿಕ್ಷಣಕ್ಕೆ ಮತ್ತಷ್ಟು ಪ್ರೋತ್ಸಾಹಕ ಕ್ರಮಗಳನ್ನು ಪ್ರಕಟಿಸಲಾಗಿದೆ. ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ರಕ್ಷಣೆ ಮತ್ತು ಗೃಹ ಇಲಾಖೆಗೆ ಭಾರೀ ಪ್ರಮಾಣದ ಅನುದಾನವನ್ನು ಮೀಸಲಿರಿಸುವ ಮೂಲಕ ಈ ವಿಚಾರಗಳಲ್ಲಿ ಯಾವುದೇ ರಾಜಿ ಇಲ್ಲ ಎಂಬುದನ್ನು ಸರಕಾರ ಘಂಟಾಘೋಷವಾಗಿ ಸಾರಿದೆ.

ಮೂಲಸೌಕರ್ಯ ಕ್ಷೇತ್ರದಲ್ಲಿ ಹೆಚ್ಚುವರಿಯಾಗಿ 50 ವಿಮಾನ ನಿಲ್ದಾಣಗಳು, ಹೆಲಿಪೋರ್ಟ್‌ಗಳು ಮತ್ತು ಏರೋಡ್ರೋಮ್‌ಗಳನ್ನು ನಿರ್ಮಿಸಲುದ್ದೇಶಿಸಲಾಗಿದೆ. ಅಲ್ಲದೆ 100 ಹೊಸ ಯೋಜನೆಗಳನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಲು ಸರಕಾರ ಚಿಂತನೆ ನಡೆಸಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ 50 ಪ್ರವಾಸಿ ಸ್ಥಳಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಯುವಜನತೆಯನ್ನು ಕೇಂದ್ರೀ ಕರಿಸಿ ಕೌಶಲಾಭಿವೃದ್ಧಿ, ಸ್ಟೈಫ‌ಂಡ್‌ ನೀಡಿಕೆ, ಯುವಜನರಲ್ಲಿ ಕೌಶಲಾಭಿವೃದ್ಧಿಯ ಜತೆಜತೆಯಲ್ಲಿ ಉದ್ಯಮಶೀಲತೆ ಬೆಳವಣಿಗೆಗೆ ಉತ್ತೇಜನ ಮತ್ತಿತರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇಂದಿನ ಅಗತ್ಯತೆಯಾಗಿರುವ ಹಸುರು ಇಂಧನ ಉತ್ಪಾದನೆ ಮತ್ತು ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ 350 ಬಿಲಿಯನ್‌ ಕೋ. ರೂ. ಹೂಡಿಕೆ ಮಾಡಲು ನಿರ್ಧರಿಸಲಾಗಿದ್ದರೆ, ದೇಶದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಕ್ರಮವಾಗಿ ಈ ವಾಹನಗಳ ಬ್ಯಾಟರಿಗಳ ತಯಾರಿಕೆಗೆ ಬಳಸಲಾಗುವ ಲೀಥಿಯಂ-ಐಯಾನ್‌ ಸೆಲ್‌ಗ‌ಳ ಉತ್ಪಾದನೆಗೆ ಅಗತ್ಯವಾಗಿರುವ ಕಚ್ಚಾ ವಸ್ತುಗಳ ಆಮದಿಗೆ ಕಸ್ಟಮ್ಸ್‌ ಸುಂಕದಿಂದ ವಿನಾಯಿತಿ ನೀಡಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಬರೋಬ್ಬರಿ 5,300 ಕೋ. ರೂ. ಅನುದಾನ ಮತ್ತು ಇದನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಮೂಲಕ ಕರ್ನಾಟಕದ ದಶಕಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಲಭಿಸಿದೆ.
ಪ್ರಸಕ್ತ ವರ್ಷ 9 ರಾಜ್ಯಗಳ ವಿಧಾನಸಭೆಗಳಿಗೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಕೇಂದ್ರ ಸರಕಾರ ಅನಿವಾರ್ಯವಾಗಿ ಜನಪ್ರಿಯ ಯೋಜನೆಗಳತ್ತ ಮುಖಮಾಡಿದಂತೆ ತೋರುತ್ತಿದೆ. ಇದನ್ನು ಹೊರತುಪಡಿಸಿದಂತೆ ಜಾಗತಿಕ ಸವಾಲುಗಳ ನಡುವೆಯೂ ಕೇಂದ್ರ ಸರಕಾರ ಸಮದರ್ಶಿ ಬಜೆಟ್‌ನ್ನು ದೇಶದ ಮುಂದಿರಿಸಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.