Bhatkal: ಮಾವಿನಕುರ್ವೆ ಬಂದರಿನಲ್ಲಿ ಲಂಗರು ಹಾಕಿದ್ದ ದೋಣಿಗೆ ದಿಢೀರ್ ಬೆಂಕಿ
Team Udayavani, Oct 15, 2023, 8:23 PM IST
ಭಟ್ಕಳ: ಇಲ್ಲಿನ ಮಾವಿನಕುರ್ವೆ ಬಂದರಿನಲ್ಲಿ ಲಂಗರು ಹಾಕಿದ್ದ ದೋಣಿಯೊಂದಕ್ಕೆ ದಿಢೀರ್ ಬೆಂಕಿ ತಗುಲಿದ ಪರಿಣಾಮ ದೋಣಿ ಸಂಪೂರ್ಣ ಸುಟ್ಟು ಹೋದ ಘಟನೆ ಭಾನುವಾರ ನಡೆದಿದೆ.
ಮಾವಿನಕುರ್ವೆ ಬಂದರಿನ ನಿವಾಸಿ ಗೋವಿಂದ ನರಸಿಂಹ ಖಾರ್ವಿ ಅವರ ಮಾಲೀಕತ್ವದ ಎಂಜಿಲಾ ಎನ್ನುವ ಹೆಸರಿನ ದೋಣಿಯೇ ಬೆಂಕಿಗೆ ಸುಟ್ಟು ಹೋಗಿದೆ.
ಗೋವಿಂದ ಖಾರ್ವಿ ಅವರು ಎಂಜಿಲಾ ದೋಣಿಯನ್ನು ದೋಣಿವಿಹಾರ ನಡೆಸುವ ಪ್ರಯುಕ್ತ ಖರೀದಿ ಮಾಡಿ ರಿಪೇರಿಗಾಗಿ ಬಂದರಿನ ದಡದಲ್ಲಿ ಲಂಗುರು ಹಾಕಿದ್ದರು. ಪ್ರವಾಸೋದ್ಯಮದಡಿ ವಾಯುವಿಹಾರದ ದೋಣಿಯನ್ನಾಗಿ ಮಾರ್ಪಾಡಿಸಲು ಅಂದಾಜು ಮೂರು ಲಕ್ಷ ಮೌಲ್ಯದ ಸಾಮಗ್ರಿಗಳನ್ನು ದೋಣಿಯಲ್ಲಿ ತಂದಿಟ್ಟಿದ್ದರು. ಭಾನುವಾರ ಇದ್ದಕ್ಕಿದ್ದಂತೆ ದೋಣಿಗೆ ಬೆಂಕಿ ತಗುಲಿದ್ದು ದೋಣಿ ಸಹಿತ ದೋಣಿಯಲ್ಲಿದ್ದ ಸಾಮಗ್ರಿ ಸುಟ್ಟು ಭಸ್ಮವಾಗಿದೆ. ಬೆಂಕಿ ತಗುಲಿದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಡೆದಿದ್ದಾರೆ. ಬೆಂಕಿ ತಗುಲಿ 7 ಲಕ್ಷ ರೂಪಾಯಿ ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ