Puttur: ವಿದ್ಯಾರ್ಥಿಗಳಿಗೆ “ಆಪತ್ತು”ತಂದ ವಿಪತ್ತಿನ ಸಿಗ್ನಲ್!
Team Udayavani, Oct 12, 2023, 10:21 PM IST
ಪುತ್ತೂರು: ವಿಪತ್ತು ಸಂದರ್ಭದಲ್ಲಿ ಮೊಬೈಲ್ ಮೂಲಕ ಎಚ್ಚರಿಕೆಯ ಸಂದೇಶವನ್ನು ನೀಡುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಗುರುವಾರ ದೇಶಾದ್ಯಂತ ನಡೆದಿದೆ. ಆದರೆ ಇದು ಪುತ್ತೂರಿನ ಕಾಲೇಜೊಂದರ ಹಲವು ವಿದ್ಯಾರ್ಥಿಗಳ ಪಾಲಿಗೆ ಮಾತ್ರ “ಆಪತ್ತು’ ತಂದಿದೆ!
ತರಗತಿಯೊಳಗೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿಷೇಧ ಇದ್ದರೂ ಎಷ್ಟೋ ವಿದ್ಯಾರ್ಥಿಗಳು ಸೈಲೆಂಟ್ ಮೋಡ್ನಲ್ಲಿ ಇರಿಸಿ ಉಪನ್ಯಾಸಕರ ಗಮನಕ್ಕೆ ಬಾರದಂತೆ ಕೊಂಡೊಯ್ಯುವುದು ಸಾಮಾನ್ಯ. ಆದರೆ ಗುರುವಾರ ಬೆಳಗ್ಗೆ 11.45ರ ಸುಮಾರಿಗೆ ಧ್ವನಿ ಮತ್ತು ಕಂಪನದೊಂದಿಗೆ ಮೊಬೈಲ್ಗಳಿಗೆ ಎಚ್ಚರಿಕೆ ಸಂದೇಶ ಬರಲಾರಂಭಿಸಿದ್ದು, ಸೈಲೆಂಟ್ ಮೋಡ್ನಲ್ಲಿರುವ ಮೊಬೈಲ್ಗಳೂ ತಮ್ಮ ಇರವನ್ನು ತೋರಿಸಿದವು.
ಈ ಸಂದೇಶ ಮತ್ತು ಧ್ವನಿಗೆ ಯಾರೂ ಭಯಪಡಬೇಕಿಲ್ಲ ಎಂದು ದೂರಸಂಪರ್ಕ ಇಲಾಖೆ ತಿಳಿಸಿದ್ದರೂ ವಿದ್ಯಾರ್ಥಿಗಳು ಕಕ್ಕಾಬಿಕ್ಕಿಯಾದರು.ಉಪನ್ಯಾಸಕರಿಗೆ ಯಾರೆಲ್ಲಾ ತರಗತಿಯೊಳಗೆ ಮೊಬೈಲ್ ಬಳಸುತ್ತಿದ್ದಾರೆ ಅನ್ನುವ ಸಂಗತಿ ತಿಳಿಯಿತು. ಉಪನ್ಯಾಸಕರು ಮೊಬೈಲನ್ನು ತಾತ್ಕಾಲಿಕವಾಗಿ ವಶಕ್ಕೆ ಪಡೆದು ಮುಂದೆ ತರಗತಿಯೊಳಗೆ ತರದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ