ಪ್ರವಾಸೋದ್ಯಮ ಅಭಿವೃದ್ಧಿಗೆ ಮಾರಕ ಹೊಡೆತ

ಖಾಸಗಿ ಜಲಸಾಹಸ ಚಟುವಟಿಕೆ ಬಂದ್‌

Team Udayavani, Apr 21, 2022, 9:09 AM IST

1

ದಾಂಡೇಲಿ: ಕೋವಿಡ್‌ ನಂತರದ ದಿನಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆ ಗರಿಗೆದರಿದೆಯಾದರೂ, ಮೊನ್ನೆ ಮೊನ್ನೆ ರ್ಯಾಪ್ಟಿಂಗ್‌ ಸಂದರ್ಭದಲ್ಲಿ ನಡೆದ ಘಟನೆ ಮುಂದಿಟ್ಟುಕೊಂಡು, ಖಾಸಗಿಯಾಗಿ ನಡೆಸುತ್ತಿರುವ ಜಲಸಾಹಸ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದು ಪ್ರವಾಸೋದ್ಯಮಕ್ಕೆ ಬಲವಾದ ಹೊಡೆತ ನೀಡಲು ಆರಂಭಿಸಿದೆ.

ಅದೇಷ್ಟೊ ಪ್ರವಾಸಿಗರು ದಾಂಡೇಲಿ, ಜೋಯಿಡಾದ ಪ್ರವಾಸೋದ್ಯಮದ ಸವಿ ಅನುಭವಿಸಲು ಈಗಾಗಲೆ ಮುಂಗಡ ಕಾಯ್ದಿರಿಸಿದ್ದಾರೆ. ಅಂಥವರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಕಾಏಕಿ ನೀಡಿದ ರ್ಯಾಪ್ಟಿಂಗ್‌ ಸ್ಥಗಿತದಿಂದ ಸಾಕಷ್ಟು ಪ್ರವಾಸಿಗರು ಬರಿಗೈಯಲ್ಲಿ ವಾಪಸ್‌ ಹೋಗಿದ್ದಾರೆ.

ನಿಗದಿತ ದಿನಾಂಕದವರೆಗೆ ಅವಕಾಶ ನೀಡಿ, ಆ ದಿನಗಳವರೆಗೆ ವಿಶೇಷ ಭದ್ರತೆ ಹಾಗೂ ಸಿಸಿ ಕ್ಯಾಮರಾ ಅಳವಡಿಸಿ ರ್ಯಾಪ್ಟಿಂಗಿಗೆ ಅವಕಾಶ ಮಾಡಿಕೊಡಬಹುದಿತ್ತು. ಇಲ್ಲಿ ಜಂಗಲ್‌ ಲಾಡ್ಜ್ಸ್‌ನಿಂದ ನಡೆಯುವ ಲಾಂಗ್‌ ರ್ಯಾಪ್ಟಿಂಗ್‌, ಗ್ರಾಮ ಅರಣ್ಯ ಸಮಿತಿಯಿಂದ ನಡೆಯುವ ಮಿನಿ ರ್ಯಾಪ್ಟಿಂಗಿಗೆ ಅವಕಾಶ ನೀಡಲಾಗಿದೆಯಾದರೂ, ಅದು ಸಹ ಟೆಂಡರ್‌ ಪಡೆದು ಖಾಸಗಿಯವರೆ ನಡೆಸುತ್ತಿರುವುದು ಗಮನಿಸಬೇಕಾದ ಅಂಶ.

ಜಿಲ್ಲಾಧಿಕಾರಿಯವರು ತೆಗೆದುಕೊಂಡ ಏಕಾಏಕಿ ನಿರ್ಧಾರ ಇಡೀ ಪ್ರವಾಸೋದ್ಯಮವನ್ನೆ ಬೆಚ್ಚಿ ಬೀಳಿಸುವಂತೆ ಮಾಡಿದೆ. ಜಿಲ್ಲಾಧಿಕಾರಿಯವರ ಈ ನಡೆ ಬಹಳಷ್ಟು ಜನರ ಮನಸ್ಸಿಗೆ ಬೇಸರ ತಂದೊಡ್ಡಿದೆ.

ಪ್ರವಾಸೋದ್ಯಮದಿಂದ ಖ್ಯಾತಿ: ಕೈಗಾರಿಕಾ ನಗರವಾಗಿ ಗಮನ ಸೆಳೆದಿದ್ದ ದಾಂಡೇಲಿ ಎರಡು ಕೈಗಾರಿಕೆಗಳು ಸ್ಥಗಿತಗೊಂಡ ನಂತರ ಮತ್ತೆ ಪ್ರವಾಸೋದ್ಯಮ ಚಟುವಟಿಕೆಯಿಂದ ಚೇತರಿಕೆ ಕಂಡಿತು. ದಿನದಿಂದ ದಿನಕ್ಕೆ ಶರವೇಗದಲ್ಲಿ ಬೆಳೆದ ಈ ಭಾಗದ ಪ್ರವಾಸೋದ್ಯಮ ಜಾಗತಿಕ ಮಟ್ಟದಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದೆ. ಹೋಂ ಸ್ಟೇ, ರೆಸಾರ್ಟ್ಸ್ಗಳು ನಿರ್ಮಾಣವಾಗುವುದರ ಮೂಲಕ ಅನೇಕರಿಗೆ ಉದ್ಯೋಗದಾಸರೆ ದೊರೆತರೆ, ಇನ್ನೂ ಬಹುತೇಕರು ಪ್ರವಾಸಿ ಏಜೆನ್ಸಿಗಳಾಗಿ, ಟೂರ್, ಟ್ರಾವೆಲ್ಸ್‌ ಏಜೆನ್ಸಿಯಾಗಿ ಹೀಗೆ ಪ್ರತ್ಯಕ್ಷ, ಪರೋಕ್ಷವಾಗಿ ಪ್ರವಾಸೋದ್ಯಮದ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಆಟೋ, ಟ್ಯಾಕ್ಸಿಗಳಿಂದ ಹಿಡಿದು, ತರಕಾರಿ, ಕಿರಾಣಿ ವರ್ತಕರು ಸಹ ಪ್ರವಾಸೋದ್ಯಮ ಚಟುವಟಿಕೆಯನ್ನೆ ಹೆಚ್ಚಾಗಿ ಅವಲಂಬಿತರಾಗಿದ್ದಾರೆ.

ಹಾಗೆಯೇ ದಾಂಡೇಲಿ, ಜೋಯಿಡಾ ಭಾಗದ ನಿರುದ್ಯೋಗಿ ಯುವ ಜನತೆಗೆ ಪ್ರವಾಸೋದ್ಯಮ ಇಲಾಖೆಯಡಿ ಮೌಳಂಗಿ, ಗಣೇಶಗುಡಿಯಲ್ಲಿ ರ್ಯಾಪ್ಟಿಂಗ್‌ ತರಬೇತಿ ನೀಡಿ, ಉದ್ಯೋಗ ಸೃಷ್ಟಿಗೆ ಅವಕಾಶ ಕಲ್ಪಿಸಬಹುದು. ಇದರಿಂದ ಪ್ರವಾಸೋದ್ಯಮದ ಜೊತೆಗೆ ಸ್ಥಳೀಯರಿಗೂ ಆರ್ಥಿಕ ಪ್ರೋತ್ಸಾಹ ನೀಡಿದಂತಾಗುತ್ತದೆ.

ಸಂದೇಶ್‌.ಎಸ್‌.ಜೈನ್‌

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.