ಕೊಂಚ ಎಡವಿದರೆ ವಾಹನ ಸವಾರರ ಜೀವಕ್ಕೆ ಆಪತ್ತು
ಮಣೂರು-ಕೊೖಕೂರಿನಲ್ಲಿ ಅಪಾಯಕಾರಿ ಕೆರೆ
Team Udayavani, Jul 7, 2020, 6:30 AM IST
ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಸಂಪರ್ಕದ ಗ್ರಾಮೀಣ ರಸ್ತೆಯ ಕೊೖಕೂರು ಬೊಬ್ಬರ್ಯ ದೇವಸ್ಥಾನದ ಸಮೀಪ ರಸ್ತೆಗೆ ತಾಗಿಕೊಂಡು ಅಪಾಯಕಾರಿ ಕೆರೆಯೊಂದಿದ್ದು ವಾಹನ ಸವಾರರು ಕೊಂಚ ಎಚ್ಚರ ತಪ್ಪಿದರೂ ದೊಡ್ಡ ಮಟ್ಟದ ಅವಘಡ ಎದು ರಾಗುವ ಸಾಧ್ಯತೆ ಇದೆ. ಈ ರಸ್ತೆಯಲ್ಲಿ ಪ್ರತಿ ದಿನ ನೂರಾರು ಮಂದಿ ಸಂಚರಿಸುತ್ತಾರೆ ಹಾಗೂ ಶಾಲಾ ಬಸ್ಸು ಸೇರಿದಂತೆ ಕಾರು, ಲಾರಿ ಮುಂತಾದ ವಾಹನಗಳು ಓಡಾಡುತ್ತವೆ. ಮಳೆಗಾಲ ದಲ್ಲಿ ಕೆರೆಯಲ್ಲಿ ಸುಮಾರು 15-20 ಅಡಿ ನೀರು ತುಂಬಿರುವುದರಿಂದ ಕೊಂಚ ಎಚ್ಚರ ತಪ್ಪಿದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇರುತ್ತದೆ.
ರಾತ್ರಿ ವೇಳೆ ಹೆಚ್ಚಿನ ಅಪಾಯ
ಕೆರೆಯ ಅಕ್ಕ-ಪಕ್ಕದಲ್ಲಿ ಸರಿ ಯಾದ ಬೀದಿದೀಪದ ವ್ಯವಸ್ಥೆ ಇಲ್ಲದಿರುವುದರಿಂದ ರಾತ್ರಿಯ ವೇಳೆ ಕೆರೆಯ ಇರುವಿಕೆ ಗಮನಕ್ಕೆ ಬರುವುದಿಲ್ಲ ಹಾಗೂ ಹೊಸದಾಗಿ ಈ ರಸ್ತೆಯ ಮೂಲಕ ಪ್ರಯಾಣಿಸು ವವರಿಗೆ ಕೆರೆಯ ಮಾಹಿತಿ ಇಲ್ಲದೆ ಹೆಚ್ಚಿನ ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ.
ತಡೆಗೋಡೆಗೆ ಮನವಿ
ಸಮಸ್ಯೆಯ ಕುರಿತು ಸ್ಥಳೀಯರು ಒಂದೆರಡು ಬಾರಿ ಜನಪ್ರತಿನಿಧಿಗಳ ಗಮನಸೆಳೆದಿದ್ದರೂ ಹೆಚ್ಚಿನ ಪ್ರಯೋ ಜನವಾಗಿಲ್ಲ. ಮುಂದೆ ದೊಡ್ಡ ಮಟ್ಟದ ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತು ಕೆರೆಗೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
ಪರಿಶೀಲಿಸಲಾಗುವುದು
ಸಮಸ್ಯೆಯ ಕುರಿತು ಇದುವರೆಗೆ ಗಮನಕ್ಕೆ ಬಂದಿರಲಿಲ್ಲ. ಶೀಘ್ರದಲ್ಲಿ ಸ್ಥಳ ಪರಿಶೀಲನೆ ನಡೆಸಿ ಕೈಗೊಳ್ಳಬೇಕಾದ ಕ್ರಮದ ಕುರಿತು ವರದಿ ಸಿದ್ಧಪಡಿಸಿ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಸಲ್ಲಿಸಲಾಗುವುದು.
-ಸುರೇಶ್ ಬಂಗೇರ, ಪಿಡಿಒ ಕೋಟ
ಅಪಾಯ ಖಂಡಿತ
ಗ್ರಾಮೀಣ ಮುಖ್ಯರಸ್ತೆಯ ಪಕ್ಕದಲ್ಲೇ ಕೆರೆ ಇರುವುದರಿಂದ ಮುಂದೊಂದು ದಿನ ಅಪಾಯ ಖಂಡಿತ. ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಬೇಕು ಎನ್ನುವುದು ಜನಪ್ರತಿನಿಧಿಗಳು, ಅಧಿಕಾರಿಗಳಲ್ಲಿ ಗ್ರಾಮಸ್ಥರ ವಿನಂತಿಯಾಗಿದೆ.
-ಕೊೖಕೂರು ಜಯಕರ ಶೆಟ್ಟಿ, ನಿವೃತ್ತ ಶಿಕ್ಷಕ, ಸ್ಥಳೀಯ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ