“ದಂಡ ಪ್ರಯೋಗ’ ಗೊಂದಲದ ಗೂಡು


Team Udayavani, Sep 15, 2019, 3:06 AM IST

danda-prayo

ಬೆಂಗಳೂರು: ಸಾರಿಗೆ ನಿಯಮಗಳ ಉಲ್ಲಂಘನೆ ವಿರುದ್ಧದ “ದಂಡ ಪ್ರಯೋಗ’ ರಾಜ್ಯದಲ್ಲಿ ಈಗ ಅಕ್ಷರಶಃ ಗೊಂದಲದ ಗೂಡಾಗಿ ಪರಿಣಮಿಸಿದೆ. ಒಂದೆಡೆ ಸರ್ಕಾರ, ಗುಜರಾತ್‌ ಮಾದರಿ ಅನುಸರಿಸಲು ಉದ್ದೇಶಿಸಿದ್ದು, ಅದು ಜಾರಿ ಯಾಗುವವರೆಗೂ ಈ ಹಿಂದಿನ ದರ ಮುಂದು ವರಿಯಲಿದೆ ಎಂದು ಹೇಳುತ್ತಿದೆ.

ಮತ್ತೂಂದೆಡೆ, ಈಗಾಗಲೇ ಕೇಂದ್ರದ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ಅಧಿಸೂಚನೆ ಹೊರಡಿಸಿದ್ದು, ನಿಯಮ ಉಲ್ಲಂಘಿಸುವ ವಾಹನ ಸವಾರರ ಮೇಲೆ ಭಾರೀ ದಂಡ ವಿಧಿಸುತ್ತಿದೆ. ಇದರಿಂದ “ರಾಜ್ಯದಲ್ಲಿ ಪ್ರಸ್ತುತ ಇರುವ ದಂಡದ ಪ್ರಮಾಣ ಯಾವುದು?’ ಎನ್ನುವುದರ ಬಗ್ಗೆ ಸ್ವತಃ ದಂಡ ವಿಧಿಸುವವರು ಹಾಗೂ ಅದಕ್ಕೆ ಗುರಿಯಾಗುವವರಿಬ್ಬರಿಗೂ ಸ್ಪಷ್ಟತೆ ಇಲ್ಲವಾಗಿದೆ.

ಮೃದು ಧೋರಣೆಗೆ ಸೂಚನೆ: ಗುಜರಾತಿನಲ್ಲಿ ಕೆಲವು ಗಂಭೀರ ಉಲ್ಲಂಘನೆ ಪ್ರಕರಣ ಹೊರತುಪಡಿಸಿ, ಸಾಮಾನ್ಯ ನಿಯಮಗಳ ಉಲ್ಲಂಘನೆಗೆ ಕೇಂದ್ರ ನಿಗದಿಪಡಿಸಿರುವ ದಂಡವನ್ನು ಶೇ.50 ಪರಿಷ್ಕರಿಸಿದೆ. ಇದೇ ಮಾದರಿ ಅನುಸರಿಸಲು ರಾಜ್ಯ ಸರ್ಕಾರ ಈಗ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪರಿಷ್ಕೃತ ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ.

ಆದರೆ, ತಿದ್ದುಪಡಿ ಮಾಡಲಾದ ಕಾಯ್ದೆಯಲ್ಲಿ ಇದಕ್ಕೆ ಅವಕಾಶ ಇದೆಯೇ ಎಂಬುದರ ಬಗ್ಗೆ ಪರಿಶೀಲಿಸಲು ಕಾನೂನು ಇಲಾಖೆಯನ್ನು ಕೇಳಲು ಸಾರಿಗೆ ಇಲಾಖೆ ಮುಂದಾಗಿದೆ. ಇದು ಅಂತಿಮಗೊಳ್ಳುವವರೆಗೆ “ದಂಡ ಪ್ರಯೋಗ’ದಲ್ಲಿ ತುಸು ಮೃದು ಧೋರಣೆ ಅನುಸರಿಸುವಂತೆ ಸಚಿವರಿಂದ ಸೂಚನೆ ಬಂದಿದೆ ಎಂದು ಸಾರಿಗೆ ಇಲಾಖೆ ಉನ್ನತ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ದರಕ್ಕೆ ಅಧಿಸೂಚನೆ ಹೊರಡಿಸುವವರೆಗೂ ಮೌಖೀಕವಾಗಿಯೇ ಸೂಚಿಸಬೇಕಾಗುತ್ತದೆ. ಇಲ್ಲವಾದರೆ ಈಗಿರುವ ಆದೇಶ ಹಿಂಪಡೆದು, 3-4 ದಿನಗಳ ಮಟ್ಟಿಗೆ ಮತ್ತೂಂದು ಆದೇಶ ಹೊರಡಿಸಬೇಕಾಗುತ್ತದೆ. ತದನಂತರ ಇನ್ನೊಂದು ಆದೇಶ ನೀಡಬೇಕಾಗುತ್ತದೆ. ಆಗ ಅದು ಇನ್ನಷ್ಟು ಗೊಂದಲಗಳ ಗೂಡು ಆಗಲಿದೆ. ಹೀಗಾಗಿ ಮೌಖೀಕವಾಗಿ ಸೂಚನೆ ನೀಡಲಾಗಿದೆ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ತಲುಪದ ಆದೇಶ; ದಂಡ ಸಂಗ್ರಹ ದುಪ್ಪಟ್ಟು!: ಆದರೆ, ಈ ಮೌಖೀಕ ಆದೇಶ ಇನ್ನೂ ಸಂಚಾರ ಪೊಲೀಸರನ್ನು ತಲುಪಿಲ್ಲ. ಹೀಗಾಗಿ ಶನಿವಾರವೂ ಭಾರೀ ಮೊತ್ತದ ದಂಡ ವಿಧಿಸುತ್ತಿರುವುದು ಹಲವು ಕಡೆ ಕಂಡುಬಂದಿತು.”ನಮಗೆ ಯಾವುದೇ ಲಿಖೀತ ಅಥವಾ ಮೌಖೀಕ ಆದೇಶ ಬಂದಿಲ್ಲ’ ಎಂದೂ ಕೆಲ ಸಂಚಾರ ಪೊಲೀಸ್‌ ಅಧಿಕಾರಿಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿದರು.

ಈ ಗೊಂದಲದ ನಡುವೆ ವಾಹನ ಸವಾರರು ಪೇಚೆಗೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದಂಡದ ಮೊತ್ತ ಕಡಿಮೆ ಮಾಡುವುದಾಗಿ 3 ದಿನಗಳ ಹಿಂದೆಯೇ ತಿಳಿಸಿದ್ದು ವಾಹನ ಸವಾರರು ಪರಿಷ್ಕೃತ ದರದ ನಿರೀಕ್ಷೆಯಲ್ಲಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.