ಸರಕಾರದಿಂದ ಅರಣ್ಯ ಭೂಮಿ ಸಾಗುವಳಿದಾರರ ಒಕ್ಕಲೆಬ್ಬಿಸುವ ಹುನ್ನಾರ
Team Udayavani, Mar 14, 2022, 6:40 AM IST
ಶಿವಮೊಗ್ಗ: ಡಬಲ್ ಎಂಜಿನ್ ಸರಕಾರಗಳು ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ, ಕಾರವಾರ ಸೇರಿದಂತೆ ರಾಜ್ಯದ ಹಲವೆಡೆ ಅರಣ್ಯ ಭೂಮಿ ಸಾಗುವಳಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆದಾಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.
ಕಾಯ್ದೆಯಲ್ಲಿ 75 ವರ್ಷ ದಾಖಲೆ ಬೇಕೆಂಬ ಷರತ್ತು ಇರುವುದು ಮಲೆನಾಡಿನ ಭಾಗದ ಜನರಿಗೆ ತೊಂದರೆಯಾಗಿರುವುದು ನಿಜ. ಆದರೆ ಅದನ್ನು ಸರಿಮಾಡುತ್ತೇವೆ ಎಂದು ಚುನಾಯಿತರಾದ ಬಿಜೆಪಿ ಸರಕಾರ ಯಾಕೆ ಮಾಡಿಲ್ಲ ಮತ್ತು ನಮ್ಮ ಸಂಸದರು ಈ ಬಗ್ಗೆ ಯಾಕೆ ಸಂಸತ್ತಿನಲ್ಲಿ ಮಾತನಾಡಿಲ್ಲ ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು.
ಬಡವರಿಗೆ ಭೂಮಿ
ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಫಾರಂ 50, 53 ಜಾರಿಗೆ ತಂದು ಲಕ್ಷಾಂತರ ಭೂ ಹೀನ ರೈತರಿಗೆ ಭೂಮಿ ಕೊಡಲಾಗಿದೆ ಆದರೆ ಇತಿಹಾಸ ಮರೆಮಾಚುವ ಬಿಜೆಪಿ ನಾಯಕರು ಈಗ ಪ್ರತಿಪಕ್ಷಗಳ ಬಗ್ಗೆ ಆರೋಪ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA