ವರ್ಷಾಂತ್ಯಕ್ಕೆ 11 ಲಕ್ಷ ರೈತರಿಗೆಋಣ ಮುಕ್ತ ಪ್ರಮಾಣ ಪತ್ರ


Team Udayavani, Jun 14, 2019, 5:18 AM IST

Parameshwara-700

ಬೆಂಗಳೂರು: ಈ ವರ್ಷಾಂತ್ಯಕ್ಕೆ ರಾಜ್ಯದ 11 ಲಕ್ಷ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಯೋಜನೆಗೆ ಕೇಂದ್ರ ಸರ್ಕಾರವನ್ನು ನೆಚ್ಚಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್‌ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳ ಎಲ್ಲ ಸಾಲವನ್ನೂ ರಾಜ್ಯ ಸರ್ಕಾರವೇ ಮನ್ನಾ ಮಾಡುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆ, ಆಟದ ಮೈದಾನ, ಸ್ಮಶಾನ ಈ ಸೌಲಭ್ಯಗಳಿಗೆ ಜಾಗ ನೀಡುವ ಸಂಬಂಧ ಮುಂದಿನ 10 ವರ್ಷದವರೆಗೆ ನಿಗದಿ ಆಗಬೇಕು. ಗ್ರಾಮಗಳಲ್ಲಿ ಕಸ ವಿಲೇವಾರಿ ಈಗಿನಿಂದಲೇ ವೈಜ್ಞಾನಿಕವಾಗಿ ಆಗಬೇಕು. ಈ ನಿಟ್ಟಿನಲ್ಲಿ, ಘನ ತ್ಯಾಜ್ಯ ವಿಲೇವಾರಿಗೆ ನಿಗದಿತ ಗುರಿ ಹಾಕಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.

ರೈತರ ಸಹಭಾಗಿತ್ವದಲ್ಲಿ ಕೆರೆಗಳಲ್ಲಿ ಹೂಳು ಎತ್ತಲು ಜಲಾಮೃತ ಯೋಜನೆ ತಂದಿದ್ದು, ಇದಕ್ಕೆ 100 ಕೋಟಿ ರೂ. ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಈ ಹಣ ತಾಲೂಕುವಾರು ಹಂಚಿಕೆ ಮಾಡಲಾಗಿದೆ.

ಸರ್ಕಾರಿ ಆಸ್ತಿ ಆವರಣಗಳಾದ ಸರಕಾರಿ ಜಾಗದಲ್ಲಿ ಕಡ್ಡಾಯವಾಗಿ ಗಿಡ ನೆಡಲು ಸೂಚನೆ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಯುವಕರಿಗೆ ಗುಣಮಟ್ಟದ ತರಬೇತಿ ನಿಡಲು ಕ್ರಮ, ಸಮಾಜ ಕಲ್ಯಾಣ ಇಲಾಖೆಯಲ್ಲಿ 1,860 ವಿದ್ಯಾರ್ಥಿ ನಿಲಯವಿದ್ದು, ಈ ಪೈಕಿ 1525 ವಿದ್ಯಾರ್ಥಿ ನಿಲಯಕ್ಕೆ ಕಟ್ಟಡ ಇದೆ. 345 ಬಾಕಿ ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ, ಈ ಎಲ್ಲ ಕಟ್ಟಡವನ್ನು ಎ ವರ್ಗಕ್ಕೆ ತರಲು ಹಣ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ 11,200 ಪ್ರಕರಣಗಳು ವಿದ್ಯುತ್‌ ಸಂಪರ್ಕಕ್ಕೆ ಬಾಕಿ ಉಳಿದಿದ್ದು, ಜೂ.20 ರೊಳಗೆ ಎಲ್ಲಾ ಜಿಲ್ಲಾಧಿಕಾರಿಗಳು ಎಸ್ಕಾಂ ಜೊತೆಯಲ್ಲಿ ರಿಜಿಸ್ಟ್ರಿ ಮಾಡಲು ಸೂಚನೆ ನೀಡಲಾಗಿದೆ. ಪರಿಶಿಷ್ಟ ಜಾತಿ ಜನಾಂಗ, ಹಿಂದುಳಿದ ಜನಾಂಗದ 55 ಲಕ್ಷ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆಧಾರ್‌ ಸೀಡಿಂಗ್‌ ಮಾಡಲು ಜೂನ್‌ ಅಂತ್ಯದ ವರೆಗೆ ಸಮಯ ನೀಡಲಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಹಾಸ್ಟೆಲ್ಗೆ ಭೇಟಿ ನೀಡಿ, ಗುಣಮಟ್ಟ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಬೇಕು. ಅನಧಿಕೃತವಾಗಿ ಹಾಸ್ಟೆಲ್ನಲ್ಲಿ ಇರುವವರ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ದಾವಣಗೆರೆಯ ಅತ್ತಿಗೆರೆ ಗ್ರಾಮದ ಖಾಸಗಿ ಜಮೀನಿನಲ್ಲಿ ಬಡ ಕುಟುಂಬಗಳು ವಾಸವಿದೆ. ತಮ್ಮ ಸಮಸ್ಯೆ ಬಗ್ಗೆ 12 ವರ್ಷದಿಂದ ಮನವಿ ಮಾಡಿದ್ದರು. ಈಗ ಮತ್ತೆ ಮನವಿ ಮಾಡಿದ್ದಾರೆ. ಹೀಗಾಗಿ ಖಾಸಗಿ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವುದು ಅಥವಾ ಪರ್ಯಾಯ ಜಮೀನು ಗುರುತಿಸಿ ಅವರ ವಾಸಕ್ಕೆ ಅನುವು ಮಾಡಿಕೊಡುವಂತೆ ಆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸೂಚನೆಗಳು
•ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಯಡಿ ರೈತರಿಗೆ 6 ಸಾವಿರ ಕೊಡುವ ಯೋಜನೆಯಡಿ 11 ಲಕ್ಷ ರೈತರನ್ನು ನೋಂದಾಯಿಸಲಾಗಿದೆ. ಜೂನ್‌ ಅಂತ್ಯದ ಒಳಗೆ ಎಲ್ಲ ರೈತರ ನೋಂದಣಿ ಆಗಬೇಕು. 56 ಲಕ್ಷ ರೈತರು ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಯಡಿ ತರಲು ಸೂಚನೆ.
•ರೈತರ ಆತ್ಮಹತ್ಯೆ ಪ್ರಕರಣ ಕಡಿಮೆಯಾಗಿದೆ. ಈ ವರ್ಷ 940 , ಕಳೆದ ವರ್ಷ 1500 ವರದಿಯಾಗಿತ್ತು. ಈ ವರ್ಷದಲ್ಲಿ 44 ಪ್ರಕರಣ ಪರಿಹಾರ ಬಾಕಿ ಇದ್ದು, ಉಳಿಕೆ ಪ್ರಕರಣಕ್ಕೆ 5 ಲಕ್ಷ ಪರಿಹಾರ ನೀಡಲಾಗಿದೆ. ಇವರ ಮಕ್ಕಳಿಗೆ ಶಿಕ್ಷಣ ನೀಡಲು ಸೂಚನೆ. •ಕೈಗಾರಿಕಾ ಕ್ಷೇತ್ರದಲ್ಲಿ ಕಾಂಪಿಟ್ ವಿತ್‌ ಚೀನಾ ಯೋಜನೆಯಡಿ ಬಳ್ಳಾರಿ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯಲ್ಲಿ ವಿವಿಧ ಕೈಗಾರಿಕೆಯ ಕ್ಲಸ್ಟರ್‌ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಸಿಂಗಲ್ ವಿಂಡೋ ಅಡಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸೂಚನೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.