ಕೃಷಿಕರನ್ನು ಬೆಂಬಿಡದೆ ಕಾಡುವ ಕಾಡಾನೆ!


Team Udayavani, Sep 30, 2021, 4:59 AM IST

ಕೃಷಿಕರನ್ನು ಬೆಂಬಿಡದೆ ಕಾಡುವ ಕಾಡಾನೆ!

ಬೆಳ್ತಂಗಡಿ: ಕೃಷಿ ಚಟುವಟಿಕೆಗೆ ಕಾಡಾನೆಗಳು ಬಹುದೊಡ್ಡ ತಲೆನೋವಾಗಿ ಪರಿಣಮಿಸಿವೆ. ಇದೇವೇಳೆ ಅರಣ್ಯ ಇಲಾಖೆಗೂ ತನ್ನ ನರ್ಸರಿಯನ್ನು ಕಾಡಾನೆಗಳಿಂದ ಸಂರಕ್ಷಿಸಿಕೊಳ್ಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ!

ಮುಂಡಾಜೆ, ಚಿಬಿದ್ರೆ, ಚಾರ್ಮಾಡಿ, ತೋಟತ್ತಾಡಿ, ನೆರಿಯ, ಚಾರ್ಮಾಡಿ ಪರಿಸರದಲ್ಲಿ ನಿರಂತರವಾಗಿ ಕಾಣಿಸಿ ಕೊಳ್ಳುತ್ತಿರುವ ಆನೆಗಳು ಅಡಿಕೆ, ತೆಂಗು, ಬಾಳೆ ಕೃಷಿ ನೆಲಸಮ ಮಾಡುತ್ತಿವೆ. ಮಂಗಳವಾರ ತಡರಾತ್ರಿ ಮುಂಡಾಜೆ ಪರಿಸರದಲ್ಲಿ ದಾಳಿ ಮುಂದುವರಿಸಿದ ಆನೆಗಳು ಅಪಾರ ಪ್ರಮಾಣದ ಕೃಷಿ ಹಾನಿ ಉಂಟು ಮಾಡಿವೆ.

ದುಂಬೆಟ್ಟು ಪರಿಸರದ ಸುಬ್ರಾಯ ಫಡ್ಕೆ, ಸುನಂದಾ ಪಟವರ್ಧನ್‌, ಸಚಿನ್‌ ಭಿಡೆ, ಉಲ್ಲಾಸ್‌ ಭಿಡೆ, ಲತಾ ಭಿಡೆ ಮೊದಲಾದವರ ತೋಟಗಳಲ್ಲಿ ಅಪಾರ ಪ್ರಮಾಣದಲ್ಲಿ ಬಾಳೆ, ಅಡಿಕೆ ಗಿಡ ಹಾಗೂ ತೆಂಗಿನ ಮರಗಳನ್ನ ನೆಲಸಮ ಮಾಡಿದೆ. ಸೋಮವಾರ ರಾತ್ರಿ ಸಮೀಪದ ಚಿಬಿದ್ರೆ ಗ್ರಾಮದಲ್ಲಿ ಕೃಷಿ ಹಾನಿ ಉಂಟುಮಾಡಿದ್ದವು.

ಇದನ್ನೂ ಓದಿ:ಹತ್ತು ಸಾವಿರ ಮೆಗಾವ್ಯಾಟ್‌ ಉತ್ಪಾದನ ಗುರಿಯ ನೂತನ ಇಂಧನ ನೀತಿ: ಸುನಿಲ್‌

ಕಳೆದ ಒಂದು ವಾರದಿಂದ ದುಂಬೆಟ್ಟು,  ಕಜೆ, ನಳೀಲು ಮೊದಲಾದ ಕಡೆ ಕಾಡಾನೆಗಳು ನಿರಂತರ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಕೃಷಿ ಚಟುವಟಿಕೆ ಹಾಳು ಮಾಡಿವೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಮುಂಜಾಗ್ರತೆ ಕ್ರಮ ಕೈಗೊಳ್ಳ ಬೇಕೆಂದು ಕೃಷಿಕರು ಆಗ್ರಹಿಸಿದ್ದಾರೆ.

ಮುಂಡಾಜೆಯಲ್ಲಿ ನರ್ಸರಿ ಧ್ವಂಸ
ರಾಷ್ಟ್ರೀಯ ಹೆದ್ದಾರಿ 73ಕ್ಕೆ ತಾಗಿಕೊಂಡಿರುವ ಅರಣ್ಯ ಇಲಾಖೆಗೆ ಸಂಬಂಧಿಸಿದ ಮುಂಡಾಜೆ ಕಾಪು ನರ್ಸರಿಯಲ್ಲಿ ಮುಂದಿನ ವರ್ಷಕ್ಕೆ ವಿತರಣೆಗೆ ಸಿದ್ಧಗೊಳಿಸಿದ್ದ ಗಿಡಗಳನ್ನು ಕಾಡಾನೆಗಳು ಹಾನಿಗೊಳಿಸಿವೆ.

ಗಿಡಗಳ ರಕ್ಷಣೆಗೆ ಹಾಕಲಾಗಿದ್ದ ಶೆಡ್‌ ಅನ್ನು ಮುರಿದು ಲಕೋಟೆಗಳಲ್ಲಿ ತುಂಬಲಾಗಿದ್ದ ಮಣ್ಣು ಹಾಗೂ ನಾಟಿ ಮಾಡಿದ ಗಿಡಗಳನ್ನು ಧ್ವಂಸಗೊಳಿಸಿವೆ.ಉಪ ವಲಯ ಅರಣ್ಯಾಧಿಕಾರಿ ಹರಿಪ್ರಸಾದ್‌, ಸಿಬಂದಿ ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.